ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಬಾಲಕ ಸಾವು

Public TV
1 Min Read
CNG DEATH

– 24 ಗಂಟೆ ಕಳೆದರೂ ಶವಕ್ಕಾಗಿ ಶೋಧ

ಚಾಮರಾಜನಗರ: ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲೂಕಿನ ಬೆಲವತ್ತ ಗ್ರಾಮದಲ್ಲಿ ನಡೆದಿದೆ.

ಭಾನುವಾರ ಹೊಂಗನೂರು ಗ್ರಾಮದ ಲೋಕೇಶ್(15) ತನ್ನ ಸ್ನೇಹಿತರೊಂದಿಗೆ ಈಜಲು ಬೆಲವತ್ತ ಕೆರೆಗೆ ಹೋಗಿದ್ದನು. ಆದರೆ ಈಜಲು ಬಾರದೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಬಾಲಕನ ಶವಕ್ಕಾಗಿ ಸ್ಥಳೀಯರು ಭಾನುವಾರದಿಂದಲೂ ಹುಡುಕಾಟ ನಡೆಸುತ್ತಿದ್ದಾರೆ. 24 ಗಂಟೆ ಕಳೆದರೂ ಸಹ ಬಾಲಕನ ಶವ ಇನ್ನೂ ಪತ್ತೆಯಾಗಿಲ್ಲ.

cng death 1

24 ಗಂಟೆ ಕಳೆದರೂ ಸ್ಥಳಕ್ಕೆ ನುರಿತ ಈಜುದಾರರನ್ನ ಕರೆಸಿ ಶವಪತ್ತೆ ಮಾಡದೇ ಇರುವುದು ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನೂ ಬಾಲಕನ ಶವಕ್ಕಾಗಿ ಶೋಧಕಾರ್ಯ ಮುಂದುವರಿದಿದೆ. ಈ ಸಂಬಂಧ ಚಾಮರಾಜನಗರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *