ಚಾಮರಾಜನಗರ: ಜಿಲ್ಲೆಯ ಹೆಗ್ಗವಾಡಿ ಕ್ರಾಸ್ ಹಾಗೂ ಪುಣಜನೂರು ಚೆಕ್ಪೋಸ್ಟ್ಗಳಲ್ಲಿ ಕರ್ತವ್ಯ ಲೋಪ ಎಸಗಿ, ಪೂರ್ವಾನುಮತಿ ಇಲ್ಲದೇ ಹೆಚ್ಚು ವಾಹನಗಳನ್ನು ಬಿಟ್ಟಿದ್ದಕ್ಕಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಏಳು ಮಂದಿ ಪೊಲೀಸರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಚೆಕ್ಪೋಸ್ಟ್ಗಳಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ ಆನಂದ್ ಕುಮಾರ್ ಏಳು ಮಂದಿ ಪೊಲೀಸರನ್ನು ಅಮಾನತುಗೊಳಿಸಿದ್ದಾರೆ. ಚಾಮರಾಜನಗರ ಗ್ರಾಮಾಂತರ ಠಾಣೆಯ ಎಎಸ್ಐ ಕೂಸಪ್ಪ, ಸೈಯದ್ ರಫಿ, ಪ್ರಸಾದ್, ಅಬ್ದುಲ್ ಖಾದರ್ ಹಾಗೂ ಚಾಮರಾಜನಗರ ಪೂರ್ವ ಠಾಣೆಯ ಮಹಾದೇವಸ್ವಾಮಿ, ಮಹೇಶ್, ಡಿವೈಎಸ್ಪಿ ಕಚೇರಿಯ ರೇವಣ್ಣಸ್ವಾಮಿ ಅಮಾನತುಗೊಂಡ ಪೊಲೀಸ್ ಸಿಬ್ಬಂದಿ.
ಹೆಗ್ಗವಾಡಿ ಕ್ರಾಸ್ ಹಾಗೂ ಪುಣಜನೂರು ಚೆಕ್ಪೋಸ್ಟ್ಗಳಲ್ಲಿ ಕರ್ತವ್ಯ ಲೋಪ ಎಸಗಿ, ಪೂರ್ವಾನುಮತಿ ಇಲ್ಲದೇ ಹೆಚ್ಚು ವಾಹನಗಳನ್ನು ಬಿಟ್ಟಿರುವ ಚೆಕ್ಪೋಸ್ಟ್ಗಳ ಕಂದಾಯ ವಿಭಾಗದ 6 ಮಂದಿ ನೌಕರರನ್ನು ಶನಿವಾರ ಡಿಸಿ ಅಮಾನತುಗೊಳಿಸಿದ್ದರು.