ಚಾಮರಾಜನಗರ: ಅಧಿಕಾರವಿರಲಿ, ಇಲ್ಲದಿರಲಿ ಕರ್ನಾಟಕದ ರಾಜಾಹುಲಿ ಎಂದಿಗೂ ಬಿ.ಎಸ್ ಯಡಿಯೂರಪ್ಪ ಅವರೇ ಆಗಿರುತ್ತಾರೆ ಎಂದು ಸಹಕಾರ ಸಚಿವ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.
ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಸೂಚನೆ ಮೇರೆಗೆ ರಘು ಕೌಟಿಲ್ಯರಿಗೆ ಟಿಕೆಟ್ ನೀಡಲಾಗಿದೆ. ಅವರ ಮಾತನ್ನು ಪಕ್ಷದಲ್ಲಿ ಎಂದಿಗೂ ತೆಗೆದು ಹಾಕಲಾಗುವುದಿಲ್ಲ ಎಂದು ಹೇಳಿದರು.
ತಿಮ್ಮಯ್ಯ ಅವರ ಹತ್ತಿರ ಹಣವಿದೆ ಎಂದು ಕಾಂಗ್ರೆಸ್ ಈ ಬಾರಿ ಅವರಿಗೆ ಟಿಕೆಟ್ ನೀಡಿದೆ. ಇದರಿಂದಾಗಿ ಧರ್ಮಸೇನಾರಿಗೆ ಟಿಕೆಟ್ ಸಿಗಲಿಲ್ಲ. ಹಣವೊಂದೇ ಚುನಾವಣೆಯಲ್ಲಿ ಮುಖ್ಯವಲ್ಲ ಎಂದ ಅವರು ಪ್ರಚಾರಕ್ಕೆ ಸರಿಯಾಗಿ ಸಿದ್ದರಾಮಯ್ಯ ಬಂದರಷ್ಟೇ ಕಾಂಗ್ರೆಸ್ ಟೇಕಾಫ್ ಆಗುತ್ತದೆ ಎಂದು ಕಾಂಗ್ರೆಸ್ ಕಾಲೆಳೆದರು.
ಅವರು ಜೆಡಿಎಸ್ ವಿಚಾರವಾಗಿ ಮಾತನಾಡಿ, ಹೆಚ್ಡಿ ಕುಮಾರಸ್ವಾಮಿ ಅವರನ್ನು ಜಿಟಿ ದೇವೇಗೌಡ, ಕೆ ಮಹದೇವ್ ಇಬ್ಬರು ಸೇರಿ ಕಾಲೆಳೆಯುತ್ತಿದ್ದಾರೆ ಎಂದರು. ಇದನ್ನೂ ಓದಿ: ವರದಕ್ಷಿಣೆ ಕಿರುಕುಳ – ಮಗನನ್ನು ಹತ್ಯೆಗೈದು ತಾಯಿ ಆತ್ಮಹತ್ಯೆ
ಇದೇ ವೇಳೆ ಮೈತ್ರಿ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಯಲ್ಲಿ ಯಾವ ಪಕ್ಷದೊಂದಿಗೂ ಬಿಜೆಪಿ ಮೈತ್ರಿ ಮಾಡಿಕೊಂಡಿಲ್ಲ. ಆದರೆ ಕಾಂಗ್ರೆಸ್, ಜೆಡಿಎಸ್ ನವರು ಬಂದು ಮೈತ್ರಿ ಮಾಡಿಕೊಂಡಿದ್ದೇವೆ ಎಂದು ಹೇಳುತ್ತಾ ಮತ ಕೇಳುತ್ತಿದ್ದಾರೆ ಎಂದು ಟೀಕಿಸಿದರು. ಇದನ್ನೂ ಓದಿ: ಸಿಎಂ ಬಿಎಸ್ವೈಗೆ ‘ರಾಜಾಹುಲಿ’ ಹೆಸ್ರು ಬಂದಿದ್ದು ಹೇಗೆ?