Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಾಜ್ ಮಹಲ್‍ಗೂ ಮುನ್ನವೇ ನಿರ್ಮಾಣವಾಗಿತ್ತು ಕರ್ನಾಟಕದಲ್ಲೊಂದು ಪ್ರೇಮಸೌಧ, ಚಂಪಕ ಸರಸಿ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ತಾಜ್ ಮಹಲ್‍ಗೂ ಮುನ್ನವೇ ನಿರ್ಮಾಣವಾಗಿತ್ತು ಕರ್ನಾಟಕದಲ್ಲೊಂದು ಪ್ರೇಮಸೌಧ, ಚಂಪಕ ಸರಸಿ!

Karnataka

ತಾಜ್ ಮಹಲ್‍ಗೂ ಮುನ್ನವೇ ನಿರ್ಮಾಣವಾಗಿತ್ತು ಕರ್ನಾಟಕದಲ್ಲೊಂದು ಪ್ರೇಮಸೌಧ, ಚಂಪಕ ಸರಸಿ!

Public TV
Last updated: December 31, 2023 7:14 pm
Public TV
Share
2 Min Read
04 2
SHARE

ಷಹಜಹಾನ್ ತನ್ನ ಪತ್ನಿ ಮುಮ್ತಾಜ್ ಮರಣದ ನಂತರ ಆಗ್ರಾದಲ್ಲಿ ತಾಜ್ ಮಹಲ್ ನಿರ್ಮಿಸಿದ್ದು ಎಲ್ಲರಿಗೂ ಗೊತ್ತಿದೆ. ತಾಜ್ ಮಹಲ್ ನಿರ್ಮಾಣವಾಗುವ ಸುಮಾರು 50ವರ್ಷಗಳ ಮೊದಲೇ ಕೆಳದಿಯ ನಾಯಕರೊಬ್ಬರು ತಮ್ಮ ಪ್ರೀತಿಯ ಮಡದಿಯ ಮರಣದ ನಂತರ ಆಕೆಯ ನೆನಪಿಗಾಗಿ ಸುಂದರ ಸ್ಮಾರಕವನ್ನು ನಿರ್ಮಿಸಿದ್ದು ಹಲವರಿಗೆ ತಿಳಿದಿಲ್ಲ. ಸುಮಾರು 450 ವರ್ಷಗಳ ಹಿಂದೆಯೇ ಶಿವಮೊಗ್ಗ ಜಿಲ್ಲೆಯ ಆನಂದಪುರ ಸಮೀಪದ ಮಲಂದೂರಿನಲ್ಲಿ ತನ್ನ ಪ್ರೀತಿಯ ಪತ್ನಿಯ ಮರಣದ ನಂತರ ಕೆಳದಿಯ  ಅರಸ ವೆಂಕಪ್ಪ ನಾಯಕ ಸುಂದರವಾದ ಕೊಳವನ್ನು ನಿರ್ಮಿಸಿದ್ದ.

ದಟ್ಟ ಕಾಡಾಗಿದ್ದ ಮಲ್ಲಂದೂರಿನ ಮಧ್ಯ ಭಾಗದಲ್ಲಿ ನಿಸರ್ಗ ದತ್ತವಾದ ನೀರಿಗೆ ಚಂಪಕ ಕೊಳವನ್ನು (Champaka Sarasi) ನಿರ್ಮಿಸಿದ ಎಂಬ ಇತಿಹಾಸವಿದೆ. ಇದು ಸುಮಾರು 200 ಅಡಿ ಉದ್ದ, 200 ಅಡಿ ಅಗಲವಿದ್ದು, ಸುಮಾರು 50 ಅಡಿ ಅಳವಿದೆ. ಕೊಳದ ನಡುವೆ ಶಿವಲಿಂಗವನ್ನು ಪ್ರತಿಷ್ಠಾಪಿಸಲಾಗಿದೆ.

01 14

ಚಂಪಕ ಬಿಡಿಸಿದ ರಂಗೋಲಿಗೆ ಮನಸೋತ ಕೆಳದಿಯ ಅರಸ
ಚಂಪಕ ರಾಣಿ ಕೆಳದಿ ರಾಜ ವೆಂಕಟಪ್ಪ ನಾಯಕರ ರಾಣಿ, ಅವಳು ಬಿಡಿಸುತ್ತಿದ್ದ ರಂಗೋಲಿ ನೋಡಿ ಅದರಿಂದ ಆಕರ್ಷಿತರಾಗಿ ಅವಳನ್ನ ಮೋಹಿಸಿ ಮದುವೆ ಆಗುತ್ತಾರೆ. ಸುಂದರಿ ಚಂಪಕ ಬೇರೆ ಜಾತಿಯವಳೆಂಬ ಕಾರಣದಿಂದ ಅವಳನ್ನ ಪಟ್ಟದ ರಾಣಿ ಪರಿವಾರ ವಿರೋಧಿಸುತ್ತದೆ. ಮುಂದೆ ಇದೇ ಪಟ್ಟದ ರಾಣಿ ಭದ್ರಮ್ಮಾಜಿ ಅನಾರೋಗ್ಯಕ್ಕೆ ಕಾರಣವಾಯಿತು. ಮು0ದೆ ಅವರ ಮರಣಕ್ಕೂ ಕಾರಣವಾಯಿತು ಎಂಬ ಮಾತಿದೆ. ಇದರಿಂದ ಇಡೀ ರಾಜ್ಯದ ಪ್ರಜೆಗಳು ಚಂಪಕಳನ್ನ ನಿಂದಿಸುತ್ತಾರೆ, ಚೆ0ಪಕ ನಾಯಕರನ್ನ ತಲೆ ಕೆಡಿಸಿದ್ದಾಳೆ ಎಂಬ ಆರೋಪ ಮಾಡುತ್ತಾರೆ. ಇದೇ ಕಾರಣಕ್ಕೆ ಆಕೆ ಆತ್ಮಹತ್ಯೆಗೆ ಶರಣಾಗುತ್ತಾಳೆ.

02 13

ಚಂಪಕಾಳ ಮರಣದ ನಂತರ ಅರಸ, ಆಕೆಯ ನೆನಪು ಶಾಶ್ವತವಾಗಿ ಉಳಿಯಬೇಕೆ0ದು ಸುಂದರವಾದ ಕೊಳವನ್ನು ಕಲ್ಲಿನಲ್ಲಿ ಕಟ್ಟಿಸುತ್ತಾನೆ. ಕೊಳದ ಮಧ್ಯದಲ್ಲಿ ಈಶ್ವರ ದೇವಸ್ಥಾನ, ಅಲ್ಲಿಗೆ ಹೋಗಲು ಕಲ್ಲಿನ ಸಣ್ಣ ಸೇತುವೆ, ಕೊಳದ ಸುತ್ತು ಕಲ್ಲಿನ ಸೋಪಾನ, ಚಂಪಕಾಳ ಸಮಾಧಿ ಬಳಿ ಕಲ್ಲಿನಲ್ಲಿ ಸುಂದರವಾದ ಆನೆಯ ಶಿಲ್ಪಗಳು ಇದೆ.

ಸಂಪಿಗೆಯ ಮರಗಳ ಕಾಡಿಂದ ಚಂಪಕ ಹೆಸರು?
ಇಲ್ಲಿ ಹೆಚ್ಚು ಸಂಪಿಗೆ ಮರಗಳು ಇದ್ದ ಕಾರಣ ಚಂಪಕ ಸರಸು ಎಂದು ಹೆಸರು ಬಂದಿದೆ ಎಂದು ಸಹ ಹೇಳಲಾಗುತ್ತದೆ. ಕೊಳ ಮತ್ತು ಅದರ ವಿವಿಧ ಗುಣಲಕ್ಷಣಗಳ ಬಗ್ಗೆ ಮಾತನಾಡುವ ಅನೇಕ ಶಾಸನಗಳಿವೆ. ಲಿಂಗಾಯತ ಮಠದ ಕುರುಹುಗಳು ಸಹ ಇಲ್ಲಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾಣಬಹುದು. ಚಂಪಕ ಸರಸಿ ಎಂಬುದು ರಾಣಿಯ ಹೆಸರಲ್ಲ ಆದರೆ ಅದು ಇಲ್ಲಿರುವ ಮಠದ ಹೆಸರು ಎಂದು ಹೇಳುವ ಕೆಲವು ಐತಿಹಾಸಿಕ ಗ್ರಂಥಗಳೂ ಇವೆ. ಕ್ರಿ.ಶ.1592ರ ಶಾಸನವೊಂದು ರಾಜ ಹಿರಿಯ ವೆಂಕಟಪ್ಪ ನಾಯಕನು ಚಂಪಕ ಸರಸಿ ಮಠಕ್ಕೆ ಗ್ರಾಮವನ್ನು ದಾನವಾಗಿ ನೀಡಿದನೆಂಬ ಉಲ್ಲೇಖವಿದೆ.

03 8

ಇತ್ತೀಚೆಗೆ ಕೆಲವು ವರ್ಷಗಳ ಹಿಂದೆ ಶಿಥಿಲಾವಸ್ಥೆಯಲ್ಲಿದ್ದ ಈ ಕೊಳವನ್ನು, ಚಿತ್ರನಟ ಯಶ್ ಅವರ ಯಶೋ ಮಾರ್ಗ ಸಂಸ್ಥೆಯ ಮೂಲಕ ಕೊಳ ಅಭಿವೃದ್ಧಿಪಡಿಸಲಾಗಿದೆ. ಸುಮಾರು 7 ತಿಂಗಳ ಕಾಲ ಕೆಲಸ ಮಾಡಿ ನವೀಕರಣ ಮಾಡಲಾಗಿದೆ.

ಹೋಗುವುದು ಹೇಗೆ?
ಚಂಪಕ ಸರಸಿಗೆ ಶಿವಮೊಗ್ಗದಿಂದ 50 ಕಿ.ಮೀ ಇದೆ. ಇಲ್ಲಿಗೆ ತಲುಪಲು ಅನಂದಪುರದ ವರೆಗೆ ಬಸ್ ಹಾಗೂ ರೈಲಿನ ವ್ಯವಸ್ಥೆ ಇದೆ. ಅನಂದಪುರದಿಂದ ಶಿಕಾರಿಪುರ ಮಾರ್ಗದ ಮಧ್ಯದಲ್ಲಿ ಬರುವ ಮಲಂದೂರಿನ ಮುಖ್ಯ ರಸ್ತೆಯಿಂದ ಒಳಗೆ ಅರ್ಧ ಕಿ.ಮೀ ದೂರದಲ್ಲಿ ಈ ಕೊಳ ಸಿಗುತ್ತದೆ.

TAGGED:Champaka SarasiKeladishivamoggaYasho Margaಆನಂದಪುರಕೆಳದಿ ಅರಸರುಚಂಪಕ ಸರಸಿಯಶೋ ಮಾರ್ಗ
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

Cocaine Seized in kempegowda airport
Bengaluru City

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 23.8 ಕೋಟಿ ಮೌಲ್ಯದ ಕೊಕೇನ್ ಜಪ್ತಿ

Public TV
By Public TV
10 minutes ago
DK Shivakumar priyanka kharge in kamakhya temple
Latest

ಸಂಸದೆ ಪ್ರಿಯಾಂಕಾ ಗಾಂಧಿ ಜೊತೆ ಕಾಮಾಕ್ಯ ದೇಗುಲಕ್ಕೆ ಡಿಕೆಶಿ ಭೇಟಿ

Public TV
By Public TV
26 minutes ago
Priyank kharge 1
Karnataka

AI Impact ಶೃಂಗಸಭೆಯಲ್ಲಿ ರಾಜ್ಯದ ಸಾಧನೆ ಪ್ರದರ್ಶನ – ಎಐ ಕ್ಷೇತ್ರ, ನವೋದ್ಯಮಗಳ ಮುಖ್ಯಸ್ಥರ ಜೊತೆ ಪ್ರಿಯಾಂಕ್ ಖರ್ಗೆ ಸಮಾಲೋಚನೆ

Public TV
By Public TV
43 minutes ago
India AI Impact Summit Guinness World Record
Latest

ಇಂಡಿಯಾ ಎಐ ಶೃಂಗದಲ್ಲಿ ಗಿನ್ನೆಸ್‌ ವರ್ಲ್ಡ್‌ ರೆಕಾರ್ಡ್‌ – ಜವಾಬ್ದಾರಿಯುತವಾಗಿ AI ಬಳಸುವ ಪ್ರತಿಜ್ಞೆ ಮಾಡಿದ 2.5 ಲಕ್ಷ ಜನರು

Public TV
By Public TV
1 hour ago
Nelamangala Crime 1
Bengaluru Rural

ವೃದ್ಧೆಯ ಹತ್ಯೆಗೈದು ದರೋಡೆ – ಸಾಲ ತೀರಿಸೋಕೆ ಚಿನ್ನಾಭರಣ ಎಗರಿಸಿ ಪಕ್ಕದ ಮನೆಯವನಿಂದ್ಲೇ ಕೊಲೆ

Public TV
By Public TV
1 hour ago
Anil Ambani
Court

ಅನುಮತಿ ಇಲ್ಲದೆ ಭಾರತ ತೊರೆಯುವುದಿಲ್ಲ – ಸುಪ್ರೀಂಗೆ ಅನಿಲ್ ಅಂಬಾನಿ ಮುಚ್ಚಳಿಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?