Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

Champions Trophy | ಇಂಡೋ-ಪಾಕ್ ಕಾದಾಟದ ರೋಚಕ ಇತಿಹಾಸ – ಹೈವೋಲ್ಟೇಜ್ ಕದನದಲ್ಲಿ ಯಾರ ಕೈ ಮೇಲು?

Public TV
Last updated: February 23, 2025 8:19 am
Public TV
Share
5 Min Read
IND vs PAK
SHARE

ಭಾರತ ಮತ್ತು ಪಾಕಿಸ್ತಾನ (Pakistan) ಪಂದ್ಯವೆಂದರೆ ಅದು ಯಾವತ್ತೂ ವಿಶೇಷವೇ. ಇಲ್ಲಿ ಯಾವುದು ಬಲಿಷ್ಠ, ಯಾವುದು ಕನಿಷ್ಠ ಎಂಬಿತ್ಯಾದಿ ಪ್ರಶ್ನಗಳು ಉದ್ಭವಿಸುವುದೇ ಇಲ್ಲ. ಎರಡೂ ತಂಡಗಳ ಆಟಗಾರರು ಉತ್ಸಾಹದಲ್ಲಿರುತ್ತಾರೆ. ಅದೇ ರೀತಿ ಎರಡೂ ತಂಡಗಳ ಮೇಲೆ ಅತೀವ ಒತ್ತಡವೂ ಇರುತ್ತದೆ. ಈ ಒತ್ತಡವನ್ನು ಮೀರಿ ನಿಂತು ಉತ್ತಮ ಪ್ರದರ್ಶನ ತೋರಿದವರೇ ಇಲ್ಲಿ ವಿಜಯ ಶಾಲಿಗಳಾಗುತ್ತಾರೆ.

ಐಸಿಸಿ ಏಕದಿನ ವಿಶ್ವಕಪ್ ನ ವಿಚಾರಕ್ಕೆ ಬಂದಾಗ ಇತ್ತಂಡಗಳಲ್ಲಿ ಭಾರತದ್ದೇ ಪಾರಮ್ಯ, ಭಾರತವೇ ಸಾರ್ವಭೌಮ. ಈವರೆಗೆ ನಡೆದಿರುವ 8 ಪಂದ್ಯಗಳಲ್ಲಿ ಏಂಟರಲ್ಲೂ ಭಾರತವೇ ಗೆದ್ದಿದೆ. ಒಂದು ಬಾರಿಯೂ ಪಾಕ್ ಗೆ ಗೆಲುವಿನ ನಗು ಬೀರಲು ಸಾಧ್ಯವಾಗಿಲ್ಲ. ಆದ್ರೆ ಮಿನಿ ವಿಶ್ವಕಪ್‌ ಖ್ಯಾತಿಯ ಚಾಂಪಿಯನ್ಸ್ ಟ್ರೋಫಿಗೆ (Champions Trophy) ಬಂದ್ರೆ ಇಲ್ಲಿ ಫಲಿತಾಂಶ 40:60 ಇದೆ. ಇದನ್ನೂ ಓದಿ: ಕೊನೆ ಓವರ್‌ನಲ್ಲಿ ಹ್ಯಾರಿಸ್ ಹ್ಯಾಟ್ರಿಕ್‌ ವಿಕೆಟ್‌; ಡೆಲ್ಲಿ ಆಲೌಟ್‌ – ಯುಪಿಗೆ 33 ರನ್‌ಗಳ ಜಯ

IND vs PAK 1

ಈವರೆಗೆ ಭಾರತ ಮತ್ತು ಪಾಕಿಸ್ತಾನ (Ind vs Pak) ತಂಡಗಳು ಪರಸ್ಪರ 5 ಬಾರಿ ಮುಖಾಮುಖಿಯಾಗಿವೆ. ಅದರಲ್ಲಿ ಭಾರತ ತಂಡ 2 ಬಾರಿ ಗೆದ್ದಿದ್ದರೆ, 3 ಬಾರಿ ಪಾಕಿಸ್ತಾನದ್ದೇ ಮೇಲುಗೈ. ಅದರಲ್ಲೂ ಒಂದು ಬಾರಿ ಅಂತೂ ಫೈನಲ್ ನಲ್ಲೇ ಭಾರತ ತಂಡವನ್ನು ಸೋಲಿಸಿರುವ ಹೆಗ್ಗಳಿಕೆ ಪಾಕಿಸ್ತಾನದ್ದು. ಈ ಬಾರಿಯ ಚಾಂಪಿಯನ್ಸ್ ಟ್ರೋಫಿಗೆ ಫೆಬ್ರವರಿ 19ರಂದು ಚಾಲನೆ ಸಿಕ್ಕಿದ್ದು ಇಂದು ಉಭಯ ತಂಡಗಳು ಮುಖಾಮುಖಿಯಾಗುತ್ತಿವೆ. ಈ ಸಂದರ್ಭದಲ್ಲಿ 1998 ರಿಂದ 2017ರ ವರೆಗೆ ಇತ್ತಂಡಗಳ ನಡುವೆ ನಡೆದಿರುವ ಐದು ಮುಖಾಮುಖಿಗಳ ವಿವರ ಇಲ್ಲಿದೆ. ಇದನ್ನೂ ಓದಿ: ಆಂಗ್ಲರನ್ನು ಸದೆಬಡಿದ ಇಂಗ್ಲಿಸ್ – ಆಸ್ಟ್ರೇಲಿಯಾಕ್ಕೆ ಭರ್ಜರಿ ಜಯ!

Ind vs Pak 2

2004ರಲ್ಲಿ ಪಾಕ್‌ಗೆ ಮೊದಲ ಗೆಲುವಿನ ಕೇಕೆ
ಇಂಗ್ಲೆಂಡ್‌ನ ಎಡ್ಜ್‌ಬಾಸ್ಟನ್ ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಇನ್ಝಮಾಮುಲ್ ಹಕ್ ಅವರು ಫೀಲ್ಡಿಂಗ್ ಆಯ್ದುಕೊಂಡರು. ವೇಗಿಗಳಾದ ಶೊಯೇಬ್ ಅಖ್ತರ್ ಮತ್ತು ನವೀದ್ ಉಲ್ ಹಸನ್ ದಾಳಿಗೆ ತತ್ತರಿಸಿದ ಭಾರತ ತಂಡ 200 ರನ್ ಗಳಿಗೆ ಆಲೌಟ್ ಆಯಿತು. ನಾಯಕ ಸೌರವ್ ಗಂಗೂಲಿ (0), ವೀರೇಂದ್ರ ಸೆಹ್ವಾಗ್ (10), ವಿವಿಎಸ್ ಲಕ್ಷ್ಮಣ್(3) ಪಾಕ್ ಬೌಲಿಂಗ್ ಅನ್ನು ಎದುರಿಸಲಾಗದೆ ಬೇಗನೇ ಪೆವಿಲಿಯನ್ ಸೇರಿಕೊಂಡರು. ಮಧ್ಯಮ ಕ್ರಮಾಂಕದಲ್ಲಿ ರಾಹುಲ್ ದ್ರಾವಿಡ್ (67) ಮತ್ತು ಮೊಹಮ್ಮದ್ ಕೈಫ್ (27) ನಿಧಾನಗತಿಯ ಬ್ಯಾಟಿಂಗ್ ನಡೆಸಿ ತಂಡವನ್ನು ಕುಸಿತದಿಂದ ತಪ್ಪಿಸಿದರೂ ರನ್ ರೇಟ್ ಮೇಲೆ ಹೊಡೆತ ಬಿತ್ತು.

Ind vs Pak

ಕೈಫ್ ವಿಕೆಟ್ ಪತನದ ಬಳಿಕ ಕ್ರೀಸಿಗೆ ಬಂದ ಯುವರಾಜ್ ಸಿಂಗ್ (0) ಬಂದ ವೇಗದಲ್ಲಿ ಪೆವಿಲಿಯನ್ ಗೆ ಮರಳಿದರೆ, ರೋಹನ್ ಗವಸ್ಕರ್ ಕ್ರೀಸಿನಲ್ಲಿ ಸುಮ್ಮನೇ ಸಮಯ ದೂಡಿದರು. ಅಪರೂಪಕ್ಕೆ ಬ್ಯಾಟ್ ಬೀಸುತ್ತಿದ್ದ ಅಜಿತ್ ಅಗರ್ಕರ್ ಅವರು 50 ಎಸೆತಗಳಿಂದ 47 ರನ್ ಗಳಿಸಿ ತಂಡದ ಮೊತ್ತ 200ರ ಗಡಿಗೆ ತಲುಪಲು ಕಾರಣವಾದರು. ಸಾಧಾರಣ ಮೊತ್ತವನ್ನು ಬೆಂಬತ್ತಿ ಹೊರಟ ಪಾಕಿಸ್ತಾನ ತಂಡ 27 ರನ್ ಗಳಿಗೆ 3 ವಿಕೆಟ್ ಕಳೆದುಕೊಂಡಾಗ ಭಾರತ ತಂಡ ಗೆಲುವಿನ ಕನಸು ಕಂಡಿತ್ತು. ಆದರೆ ಮೊಹಮ್ಮದ್ ಯೂಸುಫ್ ಅವರು ಅಜೇಯ 81 ರನ್‌ಗಳ ನೆರವಿನಿಂದ ಪಾಕಿಸ್ತಾನ ತಂಡ 49.2 ಓವರ್ ಗಳಲ್ಲಿ ಗುರಿ ತಲುಪಿತು. ಅಂತಿಮವಾಗಿ 3 ವಿಕೆಟ್‌ಗಳಿಂದ ಗೆದ್ದು ಬೀಗಿತು. ಇದು ಐಸಿಸಿ ಟೂರ್ನಿಯಲ್ಲಿ ಭಾರತದ ವಿರುದ್ಧ ಪಾಕಿಸ್ತಾನದ ಪ್ರಥಮ ವಿಜಯವಾಗಿದೆ.

Ind vs Pak

2009ರಲ್ಲೂ ಭಾರತ ವಿಫಲ
ದಕ್ಷಿಣ ಆಫ್ರಿಕಾದಲ್ಲಿ ನಡೆದ ಭಾರತ vs ಪಾಕಿಸ್ತಾನ ಮುಖಾಮುಖಿಯಲ್ಲಿ ಭಾರತ ತಂಡ 54 ರನ್ ಗಳಿಂದ ಪರಾಭವ ಅನುಭವಿಸಿತು. ಟಾಸ್ ಗೆದ್ದ ಪಾಕ್ ನಾಯಕ ಯೂನಸ್ ಖಾನ್ ಬ್ಯಾಟಿಂಗ್ ಆಯ್ದುಕೊಂಡರು. ಶೊಯೇಬ್ ಮಲಿಕ್ ಅವರು ಅಮೋಘ ಶತಕ(128)ದ ಮತ್ತು ಮೊಹಮ್ಮದ್ ಯೂನುಸ್ ಅವರ ಅರ್ಧಶತಕ (87) ಗಳ ನೆರವಿನಿಂದ ಪಾಕಿಸ್ತಾನ ನಿಗದಿತ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 302 ರನ್ ಗಳಿಸಿತು. ಆಶೀಶ್ ನೆಹ್ರಾ 4 ವಿಕೆಟ್ ಪಡೆದು ಮಿಂಚಿದರು. ಇದನ್ನೂ ಓದಿ: ಡಕೆಟ್‌, ರೂಟ್‌ ಶತಕದ ಜೊತೆಯಾಟ – ಗರಿಷ್ಠ ರನ್‌ ದಾಖಲೆ, ಆಸೀಸ್‌ ಗೆಲುವಿಗೆ 352 ರನ್‌ ಗುರಿ

ಇದಕ್ಕುತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಭಾರತ ತಂಡ ಸಚಿನ್ ವಿಕೆಟ್ ಬೇಗನೇ ಕಳೆದುಕೊಂಡರೂ ಗೌತಮ್ ಗಂಭೀರ್ (57) ಮತ್ತು ರಾಹುಲ್ ದ್ರಾವಿಡ್ (76) ಅವರು ತಂಡವನ್ನು ಆಧರಿಸಿದರು. ಆದರೆ ಮಧ್ಯಮ ಕ್ರಮಾಂಕದಲ್ಲಿ ಸುರೇಶ್ ರೈನಾ (46) ಅವರಿಗೆ ಸರಿಯಾದ ಬೆಂಬಲ ಸಿಗದ್ದರಿಂದ ಭಾರತ ತಂಡ ಅಂತಿಮವಾಗಿ 44.5 ಓವರ್ ಗಳಲ್ಲಿ 248 ರನ್ ಗೆ ಸರ್ವಪತನ ಕಂಡಿತು.

IND vs PAK 10

2013ರಲ್ಲಿ ಭಾರತಕ್ಕೆ ಮೊದಲ ಗೆಲುವು
ಎಡ್ಜ್‌ಬಾಸ್ಟನ್ ಮಳೆಯಿಂದ ತೊಂದರೆಗೀಡಾದ ಪಂದ್ಯದಲ್ಲಿ ಭಾರತ ತಂಡ ಡಕ್‌ವರ್ತ್ ಲೂಯಿಸ್ ನಿಯಮದಡಿ 8 ವಿಕೆಟ್ ಗಳ ಭರ್ಜರಿ ವಿಜಯ ಸಾಧಿಸಿತು. ಮಳೆಯಿಂದಾಗಿ 40 ಓವರ್ ಗಳಿಗೆ ಇಳಿಸಲ್ಪಟ್ಟ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಪಾಕಿಸ್ತಾನ ತಂಡ ಭಾರತದ ಸಂಘಟಿತ ಬೌಲಿಂಗ್ ದಾಳಿಗೆ ತತ್ತರಿಸಿ 39.4 ಓವರ್ ಗಳಲ್ಲಿ 165 ರನ್ ಗಳಿಗೆ ಆಲೌಟ್ ಆಯಿತು. ಇದಕ್ಕುತ್ತರವಾಗಿ ಭಾರತ ತಂಡ 19.1 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 102 ರನ್ ಗಳಿಸಿತ್ತು. ಆಗ ಮಳೆ ಮುಂದುವರಿದ ಹಿನ್ನಲೆಯಲ್ಲಿ ಭಾರತವನ್ನು ವಿಜಯಿ ಎಂದು ಘೋಷಿಸಲಾಯಿತು.

2017ರಲ್ಲಿ ಇತ್ತಂಡಗಳಿಗೂ ಬೇವು ಬೆಲ್ಲ
ಈ ವರ್ಷ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಗುಂಪು ಹಂತದ ಪಂದ್ಯದಲ್ಲಿ ಭಾರತ ಭರ್ಜರಿ ವಿಜಯ ಸಾಧಿಸಿದರೆ ಫೈನಲ್ ನಲ್ಲಿ ಪಾಕಿಸ್ತಾನ ಗೆದ್ದು ಟ್ರೋಫಿ ಮೇಲೆ ಹಕ್ಕು ಸಾಧಿಸಿತು. ಎಡ್ಜ್‌ಬಾಸ್ಟನ್ ನಲ್ಲಿ ನಡೆದ ಬಿ-ಗ್ರೂಪ್ ಹಂತದ ಪಂದ್ಯದಲ್ಲಿ ಭಾರತ ತಂಡ ಡೆಕ್ ವರ್ತ್ ಲೂಯಿಸ್ ವಿಧಾನದಿಂದ 124 ರನ್‌ಗಳಿಂದ ಗೆದ್ದಿತು. ಮಳೆಯಿಂದಾಗಿ 48 ಓವರ್ ಗಳಿಗೆ ಇಳಿಸಲ್ಪಟ್ಟ ಪಂದ್ಯದಲ್ಲಿ ಭಾರತ ತಂಡ ಟಾಸ್ ಸೋತು ಬ್ಯಾಟಿಂಗ್ ಗೆ ಇಳಿಸಲ್ಪಟ್ಟಿತ್ತು. ರೋಹಿತ್ ಶರ್ಮಾ (91), ಶಿಖರ್ ಧವನ್ (68), ವಿರಾಟ್ ಕೊಹ್ಲಿ (81) ಮತ್ತು ಯುವರಾಜ್ ಸಿಂಗ್ (53) ಅವರ ಅರ್ಧಶತಕಗಳ ಸಹಾಯದಿಂದ ಭಾರತ ತಂಡ 3 ವಿಕೆಟ್ ನಷ್ಟಕ್ಕೆ 319 ರನ್ ಗಳನ್ನು ಕಲೆ ಹಾಕಿತು. ಇದಕ್ಕುತ್ತರವಾಗಿ ಪಾಕಿಸ್ತಾನ ಕೇವಲ 33.4 ಓವರ್ ಗಳಲ್ಲೇ 164 ರನ್ ಗಳಿಸುವಲ್ಲಿ ಸರ್ವಪತನ ಕಂಡಿತು.

INDvsPAK

ದಿ ಓವಲ್ ನಲ್ಲಿ ನಡೆದ ಟೂರ್ನಿಯ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ತಂಡ 180 ರನ್‌ಗಳಿಂದ ಗೆದ್ದಿತು . ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ ಫಖರ್ ಜಮಾನ್ ಅವರ ಸ್ಫೋಟಕ 114 ರನ್ ನಿಂದಾಗಿ 4 ವಿಕೆಟ್ ನಷ್ಟಕ್ಕೆ 338 ರನ್ ಪೇರಿಸಿತು. ಅಜರ್ ಅಲಿ (59), ಮೊಹಮ್ಮದ್ ಹಫೀಝ್ (57) ರನ್ ಗಳಿಸಿ ತಂಡಕ್ಕೆ ಉಪಯುಕ್ತ ಕೊಡುಗೆ ನೀಡಿದರು. ಇದಕ್ಕುತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಭಾರತ ತಂಡ ಕೇವಲ 30.3 ಓವರ್ ಗಳಲ್ಲಿ 158 ರನ್ ಗಳಿಗೆ ಆಲೌಟ್ ಆಯಿತು. ಇದನ್ನೂ ಓದಿ: ಚಾಂಪಿಯನ್ಸ್‌ ಟ್ರೋಫಿಯಲ್ಲಿ ಇತಿಹಾಸ ನಿರ್ಮಿಸಿದ ಬೆನ್‌ ಡಕೆಟ್‌ – ಸಚಿನ್‌, ಗಂಗೂಲಿ ದಾಖಲೆಗಳು ನುಚ್ಚುನೂರು

TAGGED:Champions Trophy 2025dubaipakistanTeam indiaಚಾಂಪಿಯನ್ಸ್‌ ಟ್ರೋಫಿ 2025ಟೀಂ ಇಂಡಿಯಾದುಬೈಪಾಕಿಸ್ತಾನ
Share This Article
Facebook Whatsapp Whatsapp Telegram

Cinema Updates

Ram Charan Peddi
ಪೆದ್ದಿ ಚಿತ್ರಕ್ಕಾಗಿ ದೇಹ ಹುರಿಗೊಳಿಸಿದ ರಾಮ್ ಚರಣ್ : ಮತ್ತೆ ಶೂಟಿಂಗ್ ಶುರು
Cinema Latest Top Stories
Bhargavi LLB Nandagokula Colors kannada Mahasangama Today 1
ಭಾರ್ಗವಿ LL.B, ನಂದಗೋಕುಲ ಮಹಾ ಸಂಗಮ: ಮನಮಿಡಿಯುವ ಕಥೆ
Cinema TV Shows
darshan and kapil sibal
ದರ್ಶನ್‌ ಕೇಸ್‌ – ಸುಪ್ರೀಂ ಕೋರ್ಟ್‌ಗೆ ಹಿರಿಯ ವಕೀಲ ಕಪಿಲ್ ಸಿಬಲ್ ಗೈರು
Bengaluru City Cinema Court Karnataka Latest Sandalwood States Top Stories
Actor Darshan
ಸುಪ್ರೀಂ ಕೋರ್ಟ್‌ನಲ್ಲಿ ನಟ ದರ್ಶನ್‌ ಅರ್ಜಿ ವಿಚಾರಣೆ ಮುಂದೂಡಿಕೆ – ಗುರುವಾರ ಜಾಮೀನು ಭವಿಷ್ಯ
Cinema Court Latest Main Post Sandalwood
darshan renukaswamy pavithra gowda
ಥಾಯ್ಲೆಂಡ್‌ನಲ್ಲಿ ಜಾಲಿ ಮೂಡಲ್ಲಿರೋ ದರ್ಶನ್‌ ಬೇಲ್‌ ಭವಿಷ್ಯ ಇಂದು?
Cinema Court Karnataka Latest Main Post

You Might Also Like

Prahlad Joshi 1
Latest

ಸಣ್ಣ ವ್ಯಾಪಾರಸ್ಥರಿಗೆ ಜಿಎಸ್‌ಟಿ ನೋಟಿಸ್ ಕೇಂದ್ರದ್ದಲ್ಲ: ಪ್ರಹ್ಲಾದ್ ಜೋಶಿ ಸ್ಪಷ್ಟನೆ

Public TV
By Public TV
18 minutes ago
pawan kalyan
Latest

ಐತಿಹಾಸಿಕ ತಪ್ಪುಗಳನ್ನು ಪಠ್ಯಪುಸ್ತಕಗಳು ಮರೆಮಾಚಿವೆ – ಪವನ್ ಕಲ್ಯಾಣ್ ಟೀಕೆ

Public TV
By Public TV
20 minutes ago
Supreme Court
Court

ಆಧಾರ್, ಮತದಾರರ ಗುರುತಿನ ಚೀಟಿ, ಪಡಿತರ ಚೀಟಿಗಳು ವಿಶ್ವಾಸಾರ್ಹ ದಾಖಲೆಗಳಲ್ಲ: ಸುಪ್ರೀಂಗೆ ಚುನಾವಣಾ ಆಯೋಗ ಅಫಿಡವಿಟ್‌

Public TV
By Public TV
24 minutes ago
eshwar khandre
Bengaluru City

ರಾಜ್ಯದ ಅರಣ್ಯಗಳಲ್ಲಿ ಸಾಕುಪ್ರಾಣಿ, ದನಕರುಗಳನ್ನ ಮೇಯಿಸುವುದು ನಿಷೇಧಿಸಲು ಈಶ್ವರ ಖಂಡ್ರೆ ಆದೇಶ

Public TV
By Public TV
41 minutes ago
supreme Court 1
Court

ಕನ್ವರ್ ಯಾತ್ರೆಯ ಮಾರ್ಗದಲ್ಲಿ ಹೋಟೆಲ್‌ಗಳಿಗೆ ಕ್ಯೂಆರ್ ಕೋಡ್ ಕಡ್ಡಾಯ – ಆದೇಶ ಎತ್ತಿ ಹಿಡಿದ ಸುಪ್ರೀಂ

Public TV
By Public TV
1 hour ago
Uncle brutally kills child Hungund Bagalkote
Bagalkot

ಅಣ್ಣ ಬುದ್ಧಿ ಹೇಳಿದ್ದಕ್ಕೆ ಮಗುವನ್ನು ಬರ್ಬರವಾಗಿ ಕೊಂದ ಚಿಕ್ಕಪ್ಪ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?