Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂದಿನಿಂದ ಚಾಂಪಿಯನ್ಸ್ ಟ್ರೋಫಿ – ಭಾರತದ ಮೂವರು ʻಚಾಂಪಿಯನ್ಸ್‌ʼಗೆ ಕೊನೇ ಟೂರ್ನಿ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಇಂದಿನಿಂದ ಚಾಂಪಿಯನ್ಸ್ ಟ್ರೋಫಿ – ಭಾರತದ ಮೂವರು ʻಚಾಂಪಿಯನ್ಸ್‌ʼಗೆ ಕೊನೇ ಟೂರ್ನಿ!

Cricket

ಇಂದಿನಿಂದ ಚಾಂಪಿಯನ್ಸ್ ಟ್ರೋಫಿ – ಭಾರತದ ಮೂವರು ʻಚಾಂಪಿಯನ್ಸ್‌ʼಗೆ ಕೊನೇ ಟೂರ್ನಿ!

Public TV
Last updated: February 19, 2025 9:58 am
Public TV
Share
2 Min Read
Champions Trophy 1
SHARE

ಇಸ್ಲಾಮಾಬಾದ್‌: 8 ರಾಷ್ಟ್ರಗಳು ಭಾಗವಹಿಸಿರುವ ಐಸಿಸಿ ಪ್ರಾಯೋಜಿತ ಚಾಂಪಿಯನ್ಸ್ ಟ್ರೋಫಿ (Champions Trophy 2025) ಕ್ರೀಡಾಕೂಟ ಇಂದಿನಿಂದ ಶುರುವಾಗುತ್ತಿದೆ. ಮೊದಲ ಪಂದ್ಯ ಆತಿಥೇಯ ಪಾಕಿಸ್ತಾನ ಮತ್ತು ನ್ಯೂಜಿಲ್ಯಾಂಡ್ (Pak vs NZ) ವಿರುದ್ಧ ಕರಾಚಿ ಮೈದಾನದಲ್ಲಿ ಮಧ್ಯಾಹ್ನ 2:30ಕ್ಕೆ ಆರಂಭವಾಗಲಿದೆ.

ಎ- ಗುಂಪಿನಲ್ಲಿ ಭಾರತ, ನ್ಯೂಜಿಲೆಂಡ್‌, ಪಾಕಿಸ್ತಾನ, ಬಾಂಗ್ಲಾದೇಶ ಇದ್ದರೆ, ಬಿ-ಗುಂಪಿನಲ್ಲಿ ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ, ಅಫ್ಘಾನಿಸ್ತಾನ ಮತ್ತು ಇಂಗ್ಲೆಂಡ್‌ ತಂಡಗಳಿವೆ. ಭಾರತ ತನ್ನ ಮೊದಲ ಪಂದ್ಯವನ್ನು ದುಬೈನಲ್ಲಿ ಫೆ.20ರಂದು ಬಾಂಗ್ಲಾದೇಶದ ವಿರುದ್ಧ ಆಡಲಿದೆ ಮತ್ತು ಪಾಕಿಸ್ತಾನದ ವಿರುದ್ದದ ಹೈವೋಲ್ಟೇಜ್ ಪಂದ್ಯ ಫೆ.23ರ ಸೂಪರ್‌ ಸಂಡೇನಲ್ಲಿ ನಡೆಯಲಿದೆ.

Rohit

ನೇರ ಪ್ರಸಾರ ಎಲ್ಲಿ?
ಸ್ಟಾರ್ ಸ್ಫೋಟ್ಸ್‌ ವಾಹಿನಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳನ್ನು ನೇರ ಪ್ರಸಾರ ಮಾಡಲಿದೆ. ಜಿಯೋಹಾಟ್‌ಸ್ಟಾರ್ (ಆಪ್‌) ಚಾಂಪಿಯನ್ಸ್ ಟ್ರೋಫಿ ಪಂದ್ಯಗಳ ಲೈವ್ ಸ್ಟ್ರೀಮಿಂಗ್ ಮಾಡಲಿದೆ.

ಭಾರತದ ಮೂವರಿಗೆ ಕೊನೆಯ ಆಟ?
ಹೌದು. ಏಕದಿನ ಮಾದರಿಯ ಚಾಂಪಿಯನ್ಸ್‌ ಟ್ರೋಫಿ ಟೀಂ ಇಂಡಿಯಾ (Team India) ದಿಗ್ಗಜರಾದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಹಾಗೂ ಆಲ್‌ರೌಂಡರ್‌ ರವೀಂದ್ರ ಜಡೇಜಾ ಅವರಿಗೆ ಕೊನೆಯ ಟೂರ್ನಿ ಆಗುವ ಎಲ್ಲಾ ಸಾಧ್ಯತೆಗಳೂ ಇವೆ. ಕಳೆದ ವರ್ಷಾಂತ್ಯದಲ್ಲಿ ಆಸೀಸ್‌ ವಿರುದ್ಧ ಬಾರ್ಡರ್‌ ಗವಾಸ್ಕರ್‌ ಟೆಸ್ಟ್‌ ಟ್ರೋಫಿಯಲ್ಲಿ ಭಾರತ ಹೀನಾಯ ಸೋಲು ಕಂಡ ಬಳಿಕ ರೋಹಿತ್‌ ಟೆಸ್ಟ್‌, ಏಕದಿನ ಕ್ರಿಕೆಟ್‌ಗೂ ವಿದಾಯ ಹೇಳೋದಕ್ಕೆ ಮುಂದಾಗಿದ್ದರು. ಆದ್ರೆ ಬಿಸಿಸಿಐ ಒತ್ತಾಯದ ಮೇರೆಗೆ ಮುಂದುವರಿದಿದ್ದಾರೆ ಎಂದು ವರದಿಯಾಗಿದೆ. 2013ರಲ್ಲಿ ಎಂ.ಎಸ್‌ ಧೋನಿ ನಾಯಕತ್ವದಲ್ಲಿ ಭಾರತ ಟ್ರೋಫಿಗೆ ಮುತ್ತಿಟ್ಟಾಗಲೂ ಈ ಮೂವರು ಟೂರ್ನಿಯಲ್ಲಿದ್ದರು. ಈ ಬಾರಿ ಟ್ರೋಫಿ ಗೆದ್ದು ಗೆಲುವಿನ ವಿದಾಯ ಹೇಳುವರೇ ಎಂಬುದನ್ನು ಕಾದುನೋಡಬೇಕಿದೆ.

rohit sharma and gautam gambhir

ಕೊಹ್ಲಿ, ರೋಹಿತ್‌ ಫಾರ್ಮ್‌ನದ್ದೇ ಚಿಂತೆ:
2024ರ ಟಿ20 ವಿಶ್ವಕಪ್‌ ಟೂರ್ನಿ ಬಳಿಕ ರೋಹಿತ್‌, ಕೊಹ್ಲಿ, ಜಡ್ಡು ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದರು. ಆದ್ರೆ ಏಕದಿನ, ಟೆಸ್ಟ್‌ ಮಾದರಿಯ ಕ್ರಿಕೆಟ್‌ನಲ್ಲಿ ಮುಂದುವರಿದಿದ್ದಾರೆ. ಜಡೇಜಾ ಎಂದಿನಂತೆ ತಮ್ಮ ಬೌಲಿಂಗ್‌, ಬ್ಯಾಟಿಂಗ್‌ನಲ್ಲಿ ಸಾಮರ್ಥ್ಯ ಪ್ರದರ್ಶನ ತೋರಿದ್ದಾರೆ. ಆದ್ರೆ ಕಳೆದ ವರ್ಷಾಂತ್ಯದಲ್ಲಿ ಆಸೀಸ್‌ ವಿರುದ್ಧ ನಡೆದ ಬಾರ್ಡರ್‌ ಗವಾಸ್ಕರ್‌ ಟ್ರೋಫಿ ಟೆಸ್ಟ್‌ ಸರಣಿಯಲ್ಲಿ ಮೊದಲ ಪಂದ್ಯದಲ್ಲಿ ಶತಕ ಸಿಡಿಸಿದ್ದ ಕೊಹ್ಲಿ ಬಳಿಕ ಕಳಪೆ ಫಾರ್ಮ್‌ ಮುಂದುವರಿಸಿದ್ರು. ರಣಜಿ ಕ್ರಿಕೆಟ್‌ನಲ್ಲೂ ತಮ್ಮ ಸಾಮರ್ಥ್ಯ ಸಾಬೀತುಪಡಿಸುವಲ್ಲಿ ವಿಫಲರಾಗಿದ್ದರು. ಮತ್ತೊಂದೆಡೆ ಆಸೀಸ್‌ ವಿರುದ್ಧದ ಟೆಸ್ಟ್‌ನಿಂದ ನಿರಂತರ ಕಳಪೆ ಫಾರ್ಮ್‌ ಮುಂದುವರಿಸಿದ್ದರು. ಆದ್ರೆ ಇಂಗ್ಲೆಂಡ್‌ ವಿರುದ್ಧ ಏಕದಿನ ಸರಣಿಯ ನಿರ್ಣಾಯಕ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ತಮ್ಮ ಸಾಮರ್ಥ್ಯ ಸಾಬೀತು ಪಡಿಸಿದ್ರು, ಅದೇ ರೀತಿ ಸರಣಿಯ 3ನೇ ಪಂದ್ಯದಲ್ಲಿ ಕೊಹ್ಲಿ ಕೂಡ ಅರ್ಧಶತಕ ಸಿಡಿಸಿ ಟೀಕೆಗಳಿಗೆ ಬ್ಯಾಟ್‌ ಮೂಲಕ ಉತ್ತರ ಕೊಟ್ಟರು. ಇದೀಗ ಚಾಂಪಿಯನ್ಸ್‌ ಟ್ರೋಫಿಯಲ್ಲಿ ಅದೇ ಫಾರ್ಮ್‌ ಮುಂದುವರಿಸಲಿದ್ದಾರೆಯೇ ಎಂಬುದನ್ನು ಕಾದುನೋಡಬೇಕಿದೆ.

ಗಂಭೀರ್‌ ನಾಯಕತ್ವಕ್ಕೂ ಸವಾಲು:
2024ರ ಟಿ20 ವಿಶ್ವಕಪ್‌ ಟೂರ್ನಿ ಬಳಿಕ ಟೀಂ ಇಂಡಿಯಾ ಮುಖ್ಯಕೋಚ್‌ ಆಗಿ ಗೌತಮ್‌ ಗಂಭೀರ್‌ ಅಧಿಕಾರ ವಹಿಸಿಕೊಂಡನಂತರ ಭಾರತ ಏಕದಿನ ಹಾಗೂ ಟೆಸ್ಟ್‌ ಕ್ರಿಕೆಟ್‌ನಲ್ಲಿ ಸಂಪೂರ್ಣ ನೆಲ ಕಚ್ಚಿತ್ತು. ಶ್ರೀಲಂಕಾ ವಿರುದ್ಧ ಏಕದಿನ ಸರಣಿ, ನ್ಯೂಜಿಲೆಂಡ್‌, ಆಸೀಸ್‌ ವಿರುದ್ಧದ ಸರಣಿಗಳನ್ನು ಸೋತಿತ್ತು. ಬಿಸಿಸಿಐ ಆಟಗಾರರಿಗೆ ಕಟ್ಟುನಿಟ್ಟಿನ ನಿಯಮಗಳನ್ನು ವಿಧಿಸಿದ ಬಳಿಕ ಇತ್ತೀಚೆಗೆ ಇಂಗ್ಲೆಂಡ್‌ ವಿರುದ್ಧ ನಡೆಸಿದ್ದ ಸರಣಿಯನ್ನು ಕ್ಲೀನ್‌ ಸ್ವೀಪ್‌ ಮಾಡಿಕೊಂಡಿತ್ತು. ಇನ್ನೂ ಗಂಭೀರ್‌ ನೇತೃತ್ವದಲ್ಲಿ ಭಾರತ ಎದುರಿಸುತ್ತಿರುವ ಮೊದಲ ಐಸಿಸಿ ಟೂರ್ನಿ ಇದಾಗಿದೆ. ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಲು ಟ್ರೋಫಿ ಗೆಲುವು ಅನಿವಾರ್ಯವೂ ಆಗಿದೆ.

TAGGED:Champions Trophy 2025ICCRavindra JadejaRohit SharmaTeam indiavirat kohliಐಸಿಸಿಚಾಂಪಿಯನ್ಸ್ ಟ್ರೋಫಿಟೀಂ ಇಂಡಿಯಾರವೀಂದ್ರ ಜಡೇಜಾರೋಹಿತ್ ಶರ್ಮಾವಿರಾಟ್ ಕೊಹ್ಲಿ
Share This Article
Facebook Whatsapp Whatsapp Telegram

Cinema news

anupama gowda
ಬಿಗ್‌ಬಾಸ್ ಮನೆಗೆ ಮಾಜಿ ಸ್ಪರ್ಧಿ ಅನುಪಮಾ ಗೌಡ ಎಂಟ್ರಿ
Cinema Districts Karnataka Latest Top Stories TV Shows
suraj bigg boss
Bigg Boss: ಕಿಚ್ಚನ ಅನುಪಸ್ಥಿತಿಯಲ್ಲಿ ಬಿಗ್‌ ಬಾಸ್‌ ಮನೆಯಿಂದ ಸೂರಜ್‌ ಔಟ್‌
Cinema Latest Top Stories TV Shows
Sanvi Sudeep 1
ನನ್ನ ದೇಹ ಚರ್ಚೆಯ ವಿಷಯವಲ್ಲ: ಟ್ರೋಲರ್ಸ್‌ಗೆ ಸಾನ್ವಿ ಸುದೀಪ್ ಕೌಂಟರ್
Cinema Latest Sandalwood Top Stories
allu arjun 7
ಪುಷ್ಪಾ-2 ಕಾಲ್ತುಳಿತ ಕೇಸ್ – ನಟ ಅಲ್ಲು ಅರ್ಜುನ್‌ ಸೇರಿ 23 ಮಂದಿ ವಿರುದ್ಧ ಚಾರ್ಜ್‌ ಶೀಟ್‌ ಸಲ್ಲಿಕೆ
Cinema Latest Main Post National

You Might Also Like

Karwar Droupadi Murmu INS Vagsheer Submarine
Districts

ಕಾರವಾರ ತೀರದಲ್ಲಿ ರಾಷ್ಟ್ರಪತಿ ಮುರ್ಮು ಸಬ್‌ಮೆರಿನ್ ಯಾನ

Public TV
By Public TV
36 minutes ago
Hampi
Bellary

ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು – ಮಾತಂಗ ಬೆಟ್ಟದಲ್ಲಿ ಸೂರ್ಯೋದಯ ಕಣ್ತುಂಬಿಕೊಂಡ ಜನಸಾಗರ

Public TV
By Public TV
44 minutes ago
Siddaramaiah 5
Bengaluru City

ಡಿ.30ಕ್ಕೆ ಸಿಎಂ ಕೇರಳ ಪ್ರವಾಸ – ಕೆಸಿವಿ ಕಾರ್ಯಕ್ರಮದಲ್ಲಿ ಭಾಗಿ, ಪವರ್ ಫೈಟ್‌ಗೆ ಬ್ರೇಕ್ ಹಾಕೋಕೆ ತಂತ್ರ

Public TV
By Public TV
1 hour ago
pm modi mann ki baat
Latest

ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಮೋದಿ ಮಾತು; ದುಬೈನಲ್ಲಿ ಕನ್ನಡಾಭಿಮಾನಕ್ಕೆ ಪ್ರಧಾನಿ ಶ್ಲಾಘನೆ

Public TV
By Public TV
1 hour ago
Anekal Accident
Bengaluru Rural

ರಸ್ತೆಬದಿ ನಡೆದುಕೊಂಡು ಹೋಗ್ತಿದ್ದಾಗ ಗುದ್ದಿದ ಸಿಮೆಂಟ್ ಮಿಕ್ಸರ್ ಲಾರಿ – ವ್ಯಕ್ತಿ ಸಾವು

Public TV
By Public TV
2 hours ago
Paraglider Crash Pilot Died
Latest

ಪ್ಯಾರಾಗ್ಲೈಡರ್ ಟೇಕಾಫ್‌ ಆದ ಕೆಲಹೊತ್ತಲ್ಲೇ ಅಪಘಾತ; ಪೈಲಟ್ ಸಾವು, ಪ್ರವಾಸಿಗನಿಗೆ ಗಾಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?