ಮೈಸೂರು: ಕೇತುಗ್ರಸ್ತ ಸೂರ್ಯ ಗ್ರಹಣ (Solar Eclipse) ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ದೇಗುಲವನ್ನು ಬಂದ್ ಮಾಡಲಾಗಿದೆ.
ಆಡಳಿತ ಮಂಡಳಿಯು ಇಂದು ಬೆಳಗ್ಗೆ 8 ರಿಂದ ಮಧ್ಯಾಹ್ನ 1 ರವರೆಗೂ ದರ್ಶನಕ್ಕೆ ಅವಕಾಶ ಕಲ್ಪಿಸಿತ್ತು. ಇದೀಗ ಮಧ್ಯಾಹ್ನ ಒಂದು ಗಂಟೆಯ ಬಳಿಕ ದೇವರ ದರ್ಶನವಿರುವುದಿಲ್ಲ ಅಂತಾ ಪ್ರಕಟಣೆ ಹೊರಡಿಸಿದೆ. ಇದನ್ನೂ ಓದಿ: ಬೆಳಗಾವಿಯ ಬಹುತೇಕ ದೇಗುಲಗಳಲ್ಲಿ ದೇವರ ದರ್ಶನಕ್ಕೆ ಅವಕಾಶ, ಎಂದಿನಂತೆ ಪೂಜೆ
ಇದೀಗ ಒಂದು ಗಂಟೆಯಾದ ಹಿನ್ನೆಲೆಯಲ್ಲಿ ಚಾಮುಂಡಿ (Chamundi Devi) ತಾಯಿಯ ದರ್ಶನ ಬಂದ್ ಆಗಿದೆ. ಗ್ರಹಣ ಸ್ಪರ್ಶ, ಮೋಕ್ಷ ಕಾಲದಲ್ಲಿ ಚಾಮುಂಡಿ ತಾಯಿಗೆ ವಿಶೇಷ ಪೂಜೆ ನಡೆಯಲಿದೆ. ನಾಡಿನ ಒಳಿತಿಗಾಗಿ ವಿಶೇಷ ಪೂಜೆ ನಡೆಯಲಿದೆ ಎಂದು ತಿಳಿಸಲಾಗಿದೆ.