Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಂದನ್-ನಿವೇದಿತಾ ನಿಶ್ಚಿತಾರ್ಥ ಮಾಡ್ಕೊಂಡಿರೋದು ಅಕ್ಷಮ್ಯ ಅಪರಾಧ- ವಿ.ಸೋಮಣ್ಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಚಂದನ್-ನಿವೇದಿತಾ ನಿಶ್ಚಿತಾರ್ಥ ಮಾಡ್ಕೊಂಡಿರೋದು ಅಕ್ಷಮ್ಯ ಅಪರಾಧ- ವಿ.ಸೋಮಣ್ಣ

Karnataka

ಚಂದನ್-ನಿವೇದಿತಾ ನಿಶ್ಚಿತಾರ್ಥ ಮಾಡ್ಕೊಂಡಿರೋದು ಅಕ್ಷಮ್ಯ ಅಪರಾಧ- ವಿ.ಸೋಮಣ್ಣ

Public TV
Last updated: October 5, 2019 11:51 am
Public TV
Share
2 Min Read
V SOMANNA CHANCDAN SHETTY
SHARE

– ಅವರಿಬ್ಬರಿಗೂ ಚಾಮುಂಡಿ ತಾಯಿಯೇ 6 ತಿಂಗ್ಳಲ್ಲಿ ಶಿಕ್ಷೆ ನೀಡ್ತಾಳೆ

ಮೈಸೂರು: ಯುವ ದಸರಾ ವೇದಿಕೆಯಲ್ಲಿ ಗಾಯಕ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ನಿಶ್ಚಿತಾರ್ಥ ಮಾಡಿಕೊಂಡಿರುವುದು ಅಕ್ಷಮ್ಯ ಅಪರಾಧ. ನಾಡಿನ ಅಧಿದೇವತೆಯ ನಾಡಹಬ್ಬದ ವೇದಿಕೆಯಲ್ಲಿ ಈ ರೀತಿ ಆಗಬಾರದಿತ್ತು ಎಂದು ವಸತಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಕಿಡಿ ಕಾರಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಪ್ಪೆಸಗಿರುವ ಅವರಿಬ್ಬರಿಗೂ ಬರುವ ಆರು ತಿಂಗಳಲ್ಲಿ ದೇವಿಯೇ ಶಿಕ್ಷೆ ನೀಡುತ್ತಾರೆ. ಈ ರೀತಿ ಆಗುತ್ತದೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಇದಕ್ಕೆ ದಸರಾ ಉಪಸಮಿತಿ ಕಾರಣವಲ್ಲ. ಈ ಸಂಬಂಧ ಮೈಸೂರು ಜಿಲ್ಲಾ ಅಧೀಕ್ಷಕ ಹಾಗೂ ಯುವ ದಸರಾ ಉಪಸಮಿತಿಯ ಕಾರ್ಯಾಧ್ಯಕ್ಷರೂ ಆಗಿರುವ ರಿಷ್ಯಂತ್ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ. ಚಂದನ್ ಶೆಟ್ಟಿ ಮತ್ತು ನಿವೇದಿತಾರಿಗೆ ಕಾರಣ ಕೇಳಿ ಪೊಲೀಸ್ ಇಲಾಖೆಯಿಂದ ನೋಟಿಸ್ ನೀಡಲಾಗುತ್ತದೆ ಎಂದು ಸೋಮಣ್ಣ ಸ್ಪಷ್ಟಪಡಿಸಿದ್ದಾರೆ.

445795

ತಪ್ಪಿತಸ್ಥರ ವಿರುದ್ಧ ಕಾನೂನಿನ ಚೌಕಟ್ಟಿನಲ್ಲಿ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ. ಕಳೆದ ರಾತ್ರಿ ಯುವ ದಸರಾ ವೇದಿಕೆಯಲ್ಲಿ ನಡೆದ ಘಟನೆಗೆ ನಾನು ತೀವ್ರ ವಿಷಾದ ವ್ಯಕ್ತಪಡಿಸುತ್ತೇನೆ. ಚಂದನ್ ಶೆಟ್ಟಿ ಸುಸಂಸ್ಕೃತ ವ್ಯಕ್ತಿ ಎಂದುಕೊಂಡಿದ್ದೆ. ಆತ ನನ್ನ ಕ್ಷೇತ್ರದ ವ್ಯಾಪ್ತಿಗೆ ಬರುವ ಬೆಂಗಳೂರಿನ ನಾಗರಬಾವಿಯ ನಿವಾಸಿ. ಕಳೆದ ರಾತ್ರಿ ಯುವ ದಸರಾ ವೇದಿಕೆಯಲ್ಲಿ ಆತ ಮಾಡಿರುವುದು ಅತ್ಯಂತ ಹೇಯ ಕೃತ್ಯ ಎಂದು ಸಚಿವರು ಬೇಸರ ವ್ಯಕ್ತಪಡಿಸಿದ್ದಾರೆ.

ಪಾರಂಪರಿಕ ಮತ್ತು ಸಾಂಪ್ರದಾಯಿಕ ವೇದಿಕೆಯನ್ನು ಈ ರೀತಿ ದುರ್ಬಳಕೆ ಮಾಡಿಕೊಳ್ಳಬಾರದಿತ್ತು. ನಾನು ಸಹ ಯುವ ದಸರಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆ. ನಾನು ಅರಮನೆ ಕಾರ್ಯಕ್ರಮಕ್ಕೆ ಹೊರಡಲು ಮುಂದಾದಾಗ, ಚಂದನ್ ಶೆಟ್ಟಿ, ನಿವೇದಿತಾ ಪೋಷಕರು ನನ್ನನ್ನು ತಡೆದು ಇನ್ನೂ ಸ್ವಲ್ಪ ಸಮಯ ಇರುವಂತೆ ಒತ್ತಾಯಿಸಿದರು. ಆದರೆ ನಾನು ಅರಮನೆಗೆ ಹೋಗಬೇಕಾಗಿದ್ದರಿಂದ ಅಲ್ಲಿಂದ ನಿರ್ಗಮಿಸಿದೆ. ನಾನು ಹೊರಟ ನಂತರ ಈ ಘಟನೆ ನಡೆದಿರುವುದು ನನ್ನ ಗಮನಕ್ಕೆ ಬಂತು ಎಂದು ವಿವರಿಸಿದ್ದಾರೆ.

vlcsnap 2019 10 05 10h10m19s124

ಯುವ ದಸರಾ ವೇದಿಕೆಯಲ್ಲಿ ಶುಕ್ರವಾರ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಇಬ್ಬರೂ ಸಹ ಯುವ ದಸರಾ ವೇದಿಕೆಯಲ್ಲಿಯೇ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವಾಗಿತ್ತು.

ಈ ಕುರಿತು ಪ್ರತಿಕ್ರಿಯಿಸಿದ ಗಾಯಕ ಚಂದನ್ ಶೆಟ್ಟಿ, ತಪ್ಪಾಗಿದ್ದರೆ ಕ್ಷಮೆ ಇರಲಿ. ಪ್ರೇಮ ನಿವೇದನೆ ಮಾಡಿಕೊಳ್ಳಲು ಒಳ್ಳೆಯ ದಿನ ಅಂದುಕೊಂಡು, ನನ್ನ ಜೀವನದಲ್ಲಿ ಸಹ ಪ್ರಮುಖ ದಿನ ಎಂದುಕೊಂಡು ಮೈಸೂರಿನ ಯುವ ದಸರಾದಲ್ಲಿ ಈ ರೀತಿ ಮಾಡಿದೆ. ನನಗನ್ನಿಸಿದ್ದನ್ನು ನಾನು ಹೇಳಿದೆ, ಈ ಕುರಿತು ತಪ್ಪಾಗಿದ್ದಲ್ಲಿ ಖಂಡಿತವಾಗಿಯೂ ಕ್ಷಮೆ ಕೇಳುತ್ತೇನೆ. ಶುಕ್ರವಾರದ ಆ ಕಾರ್ಯಕ್ರಮಕ್ಕೆ ಸೇರಿದವರಲ್ಲಿ ಬಹುತೇಕರು ನಮ್ಮ ಹಿತೈಶಿಗಳು. ಸಪ್ರ್ರೈಸ್ ಕೊಡಬೇಕು ಎಂದುಕೊಂಡು, ಯುವ ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಿದೆ ಎಂದು ತಿಳಿಸಿದ್ದರು.

vlcsnap 2019 10 05 10h09m47s48

ಆಗ ನನ್ನ ಹಾಗೂ ಅಲ್ಲಿ ಸೇರಿದ್ದ ಪ್ರತಿಯೊಬ್ಬರ ಮನಸ್ಸಿನಲ್ಲಿ ಖುಷಿ ಇತ್ತು. ಅಂತಹ ದೊಡ್ಡ ಕಾರ್ಯಕ್ರಮದಲ್ಲಿ ಸಪ್ರ್ರೈಸ್ ನೀಡುವುದರ ಜೊತೆಗೆ ನಮ್ಮಿಬ್ಬರ ಕುರಿತ ಊಹಾಪೋಹಗಳಿಗೆ ಸ್ಪಷ್ಟನೆ ನೀಡಬೇಕಾಗಿತ್ತು. ಈ ರೂಮರ್ಸ್‍ಗೆ ಅಂತ್ಯ ಹಾಡುವ ನಿಟ್ಟಿನಲ್ಲಿ ವೇದಿಕೆಯ ಮೇಲೆ ಪ್ರಪೋಸ್ ಮಾಡಿದೆ. ನಾನೂ ಮೈಸೂರಿನಲ್ಲಿಯೇ ಓದಿದವನು, ಹೀಗಾಗಿ ದಸರಾದಲ್ಲಿ ಪ್ರಪೋಸ್ ಮಾಡಿದೆ ಎಂದು ತಮ್ಮ ನಿಲುವನ್ನು ವ್ಯಕ್ತಪಡಿಸಿದ್ದರು.

TAGGED:Chandan ShettyDasaraEngagedMinister V. SomannamysoreNivedita GowdaPublic TVಚಂದನ್ ಶೆಟ್ಟಿದಸರಾನಿವೇದಿತಾ ಗೌಡನಿಶ್ಚಿತಾರ್ಥಪಬ್ಲಿಕ್ ಟಿವಿಮೈಸೂರುಸಚಿವ ವಿ.ಸೋಮಣ್ಣ
Share This Article
Facebook Whatsapp Whatsapp Telegram

Cinema news

I Want Nayanthara AIADMK MPs Dig At MK Stalins Initiative Sparks Row
ನನಗೆ ನಯನತಾರ ಬೇಕು, ಕನಸು ಈಡೇರಿಸುವಿರಾ – ಎಐಎಡಿಎಂಕೆ ಸಂಸದನ ಪ್ರಶ್ನೆ
Cinema Latest National South cinema Top Stories
darshan 1
ದರ್ಶನ್ ಒಳಸಂದರ್ಶನಕ್ಕೆ ಕೋರ್ಟ್ ಅಸ್ತು – ಅಂತಿಮ ನಿರ್ಧಾರ ಜೈಲು ಅಧೀಕ್ಷಕರಿಗೆ ಬಿಟ್ಟದ್ದು ಎಂದ ನ್ಯಾಯಾಲಯ
Bengaluru City Cinema Court Districts Karnataka Latest Top Stories
Nora Fatehi
ʻಸರ್ಸೆ ಸರ್ಸೆ ಸೆರಗ ಸರ್ಸೆʼ ಹಾಡಿನ ವಿವಾದ – ಮಹಿಳಾ ಆಯೋಗದಿಂದ ಫಿಲ್ಮ್ ಚೇಂಬರ್‌ಗೆ ಪತ್ರ
Bollywood Cinema Latest Sandalwood Top Stories
Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories

You Might Also Like

PRAJWAL REVANNA 1
Bengaluru City

ಪ್ರಜ್ವಲ್ ರೇವಣ್ಣ ಕೇಸ್ – ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ 13,712 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

Public TV
By Public TV
46 minutes ago
Delhi Palam Residential Building Fire
Latest

Delhi | ಪಾಲಂನ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ – 8 ಮಂದಿ ಸಾವು

Public TV
By Public TV
56 minutes ago
KIM JONG UN
Latest

ಉ.ಕೊರಿಯಾ ಚುನಾವಣೆ: 99.93% ಮತ ಪಡೆದು ಮತ್ತೆ ಭರ್ಜರಿ ಗೆಲುವು ಸಾಧಿಸಿದ ಕಿಮ್‌ ಜಾಂಗ್‌ ಉನ್‌

Public TV
By Public TV
56 minutes ago
sslc exam madhu bangarappa
Bengaluru City

ಇಂದಿನಿಂದ SSLC ಪರೀಕ್ಷೆ 1 ಪ್ರಾರಂಭ – ವಿದ್ಯಾರ್ಥಿಗಳಿಗೆ ಶುಭಕೋರಿದ ಸಚಿವ ಮಧುಬಂಗಾರಪ್ಪ

Public TV
By Public TV
2 hours ago
Bevu bella
Latest

ಯುಗಾದಿ ಸ್ಪೆಷಲ್‌ – ಬೇವು, ಬೆಲ್ಲ ಮಾಡುವ ವಿಧಾನ

Public TV
By Public TV
3 hours ago
GT Devegowda
Districts

ಜೆಡಿಎಸ್‌ನಲ್ಲಿ ಇದ್ದೀನಿ, ಮುಂದೆಯೂ ಇರ್ತೀನಿ – ಕ್ಷೇತ್ರದಲ್ಲಿ ಭಾವನಾತ್ಮಕ ದಾಳ ಪ್ರಯೋಗಿಸಿದ ಜಿಟಿಡಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?