ಬೆಂಗಳೂರು: ಚಂದ್ರಯಾನ-3 ಕ್ಕೆ ಸಂಬಂಧಿಸಿದಂತೆ ಇಂದು (ಗುರುವಾರ) ಮಧ್ಯಾಹ್ನ ಒಂದು ಗಂಟೆಗೆ ಮಹತ್ವದ ಬೆಳವಣಿಗೆ ನಡೆಯಲಿದೆ ಎಂದು ನೆಹರು ತಾರಾಲಯದ ವಿಜ್ಞಾನಿ ಆನಂದ್ ಹೇಳಿದ್ದಾರೆ.
ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಇಂದು ಮಧ್ಯಾಹ್ನ 1 ಗಂಟೆಗೆ ಚಂದ್ರಯಾನ-3ರ (Chandrayaan-3) ಮಹತ್ತರ ಬೆಳವಣಿಗೆ ನಡೆಯಲಿದೆ. ಚಂದ್ರಯಾನ-3 ನೌಕೆ ಅಂತಿಮ ಕಕ್ಷೆಗೆ ಯಶಸ್ವಿಯಾಗಿ ಪ್ರವೇಶಿಸಿದೆ. ಉಡಾವಣಾ ವಾಹನದಲ್ಲಿರುವ ಲ್ಯಾಂಡರ್ ಮಾಡ್ಯೂಲ್ ಇಂದು ಮಧ್ಯಾಹ್ನ 1 ಗಂಟೆಗೆ ನೌಕೆಯಿಂದ ಬೇರ್ಪಡುವ ಕಾರ್ಯ ನಡೆಯಲಿದೆ ಎಂದರು. ಇದನ್ನೂ ಓದಿ: ಚಂದ್ರನ ಅಂತಿಮ ಕಕ್ಷೆ ಪ್ರವೇಶಿಸಿದ ಚಂದ್ರಯಾನ ನೌಕೆ
ಮುಂದಿನ ವಾರದಲ್ಲಿ ವಿಕ್ರಮ್ ಲ್ಯಾಂಡರ್ ನ ಸಾಫ್ಟ್ ಲ್ಯಾಂಡಿಂಗ್ ಸಾಧ್ಯವಾಗಲಿದೆ. ಆಗಸ್ಟ್ 23 ರಂದು ಚಂದ್ರಯಾನ -3 ಅಂತಿಮ ಸಕ್ಸಸ್ ಚಿತ್ರಣ ಗೊತ್ತಾಗಲಿದೆ. ಇಂತಹ ಲ್ಯಾಂಡರ್ ಮಾಡ್ಯೂಲ್ ‘ವಿಕ್ರಮ್’ ಅನ್ನು ಪ್ರತ್ಯೇಕಗೊಳಿಸುವ ಕಾರ್ಯ ನಡೆಯಲಿದೆ. ಈ ಪ್ರಕ್ರಿಯೆ ತುಂಬಾ ಪ್ರಮುಖವಾಗಿರೋದು. ಚಂದ್ರಯಾನ-3 ರ ಸಕ್ಸಸ್ ಗೆ ಇಡೀ ಭಾರತ ಕಾಯುತ್ತಿದೆ. ಹೀಗಾಗಿ ಇಂದು ಅತ್ಯಂತ ಮಹತ್ವದ ದಿನ ಎಂದು ಹೇಳಿದರು.
ಚಂದ್ರಯಾನ-3 ಮಿಷನ್ನ ರಾಕೆಟ್ ಜುಲೈ 14ರಂದು ಮಧ್ಯಾಹ್ನ 2:35ಕ್ಕೆ ಶ್ರೀಹರಿಕೋಟದ ಉಡ್ಡಯನ ಕೇಂದ್ರದಿಂದ ಲಾಂಚ್ ಆಗಿತ್ತು. ಭೂಮಿಯ ಕಕ್ಷೆಯಿಂದ ಒಂದೊಂದೇ ಹಂತದಲ್ಲಿ ಚಂದ್ರಯಾನ-3 ನೌಕೆ ಚಂದ್ರನೆಡೆಗೆ ಪ್ರಯಾಣ ಬೆಳೆಸಿದೆ. ಆಗಸ್ಟ್ 23ರಂದು ನೌಕೆ ಚಂದ್ರನ ಮೇಲೆ ಇಳಿಯುವ ಸಾಧ್ಯತೆಯಿದೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]