ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಯಲ್ಲಿ ಬದಲಾವಣೆ – ಆಗಸ್ಟ್ ಅಂತ್ಯಕ್ಕೆ ಮತ್ತಷ್ಟು ಶಾಕ್ ಸಾಧ್ಯತೆ

Public TV
1 Min Read
BSY AMITSHAH

ಬೆಂಗಳೂರು: ಚುನಾವಣೆ ಹೊಸ್ತಿಲಲ್ಲಿ ರಾಜ್ಯ ಬಿಜೆಪಿಗೆ ಹೈಕಮಾಂಡ್ ಬೂಸ್ಟರ್ ಡೋಸ್ ಕೊಟ್ಟಿದೆ. ಒಂದು ರೀತಿಯಲ್ಲಿ ಪೊಲಿಟಿಕಲ್ ಸರ್ಜಿಕಲ್ ಸ್ಟ್ರೈಕ್ ಶುರುವಾಗಿದೆ.

BJP FLAG

ಮಾಸ್ ಲೀಡರ್ ಯಡಿಯೂರಪ್ಪಗೆ ಬಿಜೆಪಿಯ ಸರ್ವೋಚ್ಛ ಸಮಿತಿಗಳಾದ ಕೇಂದ್ರ ಸಂಸದೀಯ ಮಂಡಳಿ ಮತ್ತು ಕೇಂದ್ರ ಚುನಾವಣಾ ಸಮಿತಿಯಲ್ಲಿ ಸ್ಥಾನ ನೀಡಿದೆ. ಈ ಬೆನ್ನಲ್ಲೇ ಬಿಜೆಪಿ ಸಂಘಟನೆಗೆ ಸರ್ಜರಿ ನಡೆದಿದೆ ಅನ್ನೋ ಮಾತುಗಳ ಕೇಳಿ ಬರುತ್ತಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಎದುರು ಯಡಿಯೂರಪ್ಪ ಮಾಸ್ ಇಮೇಜ್ ಅಸ್ತ್ರ – ಬಿಜೆಪಿ ಸಂಸದೀಯ ಮಂಡಳಿಗೆ ಬಿಎಸ್‍ವೈ ಆಯ್ಕೆ ಹಿಂದಿನ ಪ್ಲಾನ್ ಏನು?

Vijayendra Yeddyurappa 21

ಮುಂದಿನ ರಾಜ್ಯಾಧ್ಯಕ್ಷ ರೇಸ್‍ನಲ್ಲಿ ಯಾರ್ಯಾರು ಇದ್ದಾರೆ?, ನಾಲ್ವರು ಹೊಸ ಪ್ರಧಾನ ಕಾರ್ಯದರ್ಶಿಗಳ ನೇಮಕ ಆಗುತ್ತಾ ಅನ್ನೋ ಮಾತು ಕೇಳಿ ಬರುತ್ತಿದೆ. ಹೈಕಮಾಂಡ್ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ವಿಜಯೇಂದ್ರ ಹೆಸರು ಪರಿಗಣಿಸ್ತಾರಾ ಅಥವಾ ಆಗಸ್ಟ್ ಕಡೇ ವಾರದಲ್ಲಿ ಹೈಕಮಾಂಡ್‍ನಿಂದ ಮತ್ತೊಂದು ಶಾಕಿಂಗ್ ಸುದ್ದಿ ಹೊರಬೀಳುತ್ತಾ ಎಂಬುದನ್ನು ಕಾದದುನೋಡಬೇಕಿದೆ.

ct ravi 5

ಬಿಜೆಪಿ ನಿಯಮದಂತೆ ಆಗಸ್ಟ್ 28ಕ್ಕೆ ಕಟೀಲ್ ಅವಧಿ ಮುಕ್ತಾಯವಾಗಲಿದೆ. ಹೀಗಾಗಿ ಪಕ್ಷಕ್ಕೆ ಅಗತ್ಯವಿದ್ದರೆ ಅವಧಿ ವಿಸ್ತರಿಸಬಹುದು ಅಥವಾ ಪುನರ್ ಆಯ್ಕೆ ಮಾಡಬಹುದು. ಸದ್ಯದ ಬೆಳವಣಿಗೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಮಾಡುವ ಸಾಧ್ಯತೆಗಳಿವೆ. ರಾಜ್ಯಾಧ್ಯಕ್ಷರ ರೇಸ್‍ನಲ್ಲಿ ಮೂವರು ಹೆಸರುಗಳು ಮುಂಚೂಣಿ ಕೇಳಿಬರುತ್ತಿವೆ. ಸಿ.ಟಿ.ರವಿ, ಶೋಭಾ ಕರಂದ್ಲಾಜೆ ಹಾಗೂ ಸಚಿವ ಸುನೀಲ್ ಕುಮಾರ್ ಹೆಸರು ಮುಂಚೂಣಿಯಲ್ಲಿದೆ. ಇತ್ತ ಪಕ್ಷ ಸಂಘಟನೆ ಜವಾಬ್ದಾರಿ ನೀಡುವಂತೆ ಅರವಿಂದ್ ಲಿಂಬಾವಳಿ ಮನವಿ ಮಾಡಿಕೊಂಡಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *