ವಿಜಯಪುರ: ಜಿಲ್ಲೆಯ ಬಸವನಬಾಗೇವಾಡಿ (Basavana Bagewadi) ತಾಲೂಕಿನ ಇಂಗಳೇಶ್ವರ (Ingaleshwar) ಗ್ರಾಮದ ವಿರಕ್ತಮಠದ ಚನ್ನಬಸವ ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಚನ್ನಬಸವ ಸ್ವಾಮೀಜಿ ಅವರು 97ನೇ ವಯಸ್ಸಿನಲ್ಲಿ ಲಿಂಗೈಕ್ಯರಾಗಿದ್ದಾರೆ.ಇದನ್ನೂ ಓದಿ: ಬಿಡಿಎ ಕಾರ್ಯಾಚರಣೆ – ಸುಮಾರು 140 ಕೋಟಿ ರೂ. ಆಸ್ತಿ ವಶ
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಇಂಗಳೇಶ್ವರ ವಿರಕ್ತ ಮಠದ ಚನ್ನಬಸವ ಮಹಾಸ್ವಾಮಿಗಳು ಲಿಂಗೈಕ್ಯರಾದ ಸುದ್ದಿ ತಿಳಿದು ದುಃಖವಾಯಿತು.
ಇಂಗಳೇಶ್ವರದ ವಚನ ಶಿಲಾಶಾಸನ ಮಂಟಪದಲ್ಲಿ ಕಲ್ಲುಗಳ ಮೇಲೆ ವಚನಗಳನ್ನು ಕೆತ್ತಿಸಿ, ಶರಣರ ಪರಂಪರೆ ಹಾಗೂ ವಿಚಾರಧಾರೆಯನ್ನು ಸಮಾಜಕ್ಕೆ ಸಾರುವ ಕಾರ್ಯವನ್ನು ನಿಸ್ವಾರ್ಥದಿಂದ ಮಾಡುತ್ತಾ ಬಂದವರು.… pic.twitter.com/dQWISmyZ2P
— Siddaramaiah (@siddaramaiah) December 11, 2025
ಬಸವಾದಿ ಶರಣರ ವಚನಗಳು, ಮಾನವೀಯತೆ, ಸಮಾನತೆ ಸಂದೇಶಗಳನ್ನ ಶಿಲೆಯಲ್ಲಿ ಶ್ರೀಗಳು ಕೆತ್ತಿಸಿದ್ದರು. ಅಲ್ಲದೇ ಅವುಗಳನ್ನ ಶಿಲಾಮಂಟಪದಲ್ಲಿ ಪ್ರತಿಷ್ಠಾಪಿಸುವ ಕಾರ್ಯದಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇನ್ನೂ ಇಂಗಳೇಶ್ವರದಿಂದ ಶ್ರೀಕ್ಷೇತ್ರ ಉಳವಿಯವರೆಗೆ ಪಾದಯಾತ್ರೆ ನಡೆಸಿ, ವಚನ ಸಾರಗಳನ್ನ ಜನಸಾಮಾನ್ಯರಲ್ಲಿ ಬಿತ್ತುವ ಕಾರ್ಯಮಾಡಿದ್ದರು.
ಸ್ವಾಮೀಜಿ ಅಗಲಿಕೆಗೆ ಸಿಎಂ ಸಿದ್ದರಾಮಯ್ಯ, ಸಚಿವ ಎಂ.ಬಿ ಪಾಟೀಲ್, ಶಿವಾನಂದ ಪಾಟೀಲ್ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ನಾಳೆ ಸಾಯಂಕಾಲ ಸರ್ಕಾರಿ ಗೌರವಗಳೊಂದಿಗೆ ಸ್ವಾಮೀಜಿಗಳ ಅಂತ್ಯಕ್ರಿಯೆ ನೆರವೇರಲಿದೆ.ಇದನ್ನೂ ಓದಿ: ಸಿದ್ದರಾಮಯ್ಯ ವಾಯುಯಾನಕ್ಕೆ 47 ಕೋಟಿ ಖರ್ಚು

