– ಚುನಾವಣಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ
ರಾಮನಗರ: ಚನ್ನಪಟ್ಟಣ ಉಪಚುನಾವಣೆ (Channapatna By Election) ಹಿನ್ನೆಲೆ ಚುನಾವಣಾಧಿಕಾರಿಗಳು (Election Officers) ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಗೋಡೌನ್ನಲ್ಲಿ ಶೇಖರಿಸಿಟ್ಟಿದ್ದ ಬಂಡಲ್ಗಟ್ಟಲೇ ಸೀರೆ, ಪಂಚೆಗಳನ್ನು ಜಪ್ತಿ ಮಾಡಿದ್ದಾರೆ.
ಬಿಡದಿಯ (Bidadi) ಹೊಸದೊಡ್ಡಿ ಗ್ರಾಮದ ಬಳಿ ಇರುವ ಗೋಡೌನ್ನಲ್ಲಿ ಅಕ್ರಮವಾಗಿ ಸೀರೆ ಮತ್ತು ಪಂಚೆಗಳನ್ನು ಸಂಗ್ರಹಿಸಿ ಇಡಲಾಗಿತ್ತು. ಚನ್ನಪಟ್ಟಣ ಮತದಾರರಿಗೆ ಹಂಚಲು ಶೇಖರಿಸಿಟ್ಟಿರುವ ಶಂಕೆ ವ್ಯಕ್ತವಾಗಿದೆ. ಯಾವುದೇ ದಾಖಲೆ ಇಲ್ಲದೇ ಶೇಖರಿಸಿಟ್ಟಿದ್ದ ಲಕ್ಷಾಂತರ ಮೌಲ್ಯದ ಸೀರೆ ಮತ್ತು ಪಂಚೆಯನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ದೀಪಾವಳಿ ಹಬ್ಬಕ್ಕೆ ಸಾಗಿಸುತ್ತಿದ್ದ ‘ಈರುಳ್ಳಿ ಬಾಂಬ್’ ಸ್ಫೋಟಗೊಂಡು ಓರ್ವ ಸಾವು
ಇನ್ನು ಈ ಕುರಿತು ಚುನಾವಣೆನೀತಿ ಸಂಹಿತೆ ಉಲ್ಲಂಘನೆ ಅಡಿ ದೂರು ದಾಖಲಿಸಲಾಗಿದೆ. ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಾಲೀಕನ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಇದನ್ನೂ ಓದಿ: 44 ವರ್ಷಗಳ ನಂಟು ಕಡಿದುಕೊಂಡ ಮುಂಬೈ ಕಾಂಗ್ರೆಸ್ ಮುಖಂಡ – 5 ಬಾರಿ ಕಾರ್ಪೋರೇಟರ್ ಆಗಿದ್ದ ರವಿರಾಜ ಬಿಜೆಪಿ ಸೇರ್ಪಡೆ