Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿಖಿಲ್ ಕುಮಾರಸ್ವಾಮಿ ಅವರನ್ನ ಗೆಲ್ಲಿಸಿಕೊಂಡು ಬರೋಣ: ಜೆಡಿಎಸ್ ಕಾರ್ಯಕರ್ತ ಜಯಮುತ್ತು
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ನಿಖಿಲ್ ಕುಮಾರಸ್ವಾಮಿ ಅವರನ್ನ ಗೆಲ್ಲಿಸಿಕೊಂಡು ಬರೋಣ: ಜೆಡಿಎಸ್ ಕಾರ್ಯಕರ್ತ ಜಯಮುತ್ತು

Public TV
Last updated: October 6, 2024 4:23 pm
Public TV
Share
3 Min Read
JDS Sabhe Channapatna
SHARE

– ಚನ್ನಪಟ್ಟಣ ‘ದೋಸ್ತಿ’ ಅಭ್ಯರ್ಥಿ ಫೈನಲ್?
– ಕುಮಾರಸ್ವಾಮಿ ಮುಂದೆಯೇ ಜೆಡಿಎಸ್ ಕಾರ್ಯಕರ್ತರ ಒತ್ತಾಯ

ರಾಮನಗರ: ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರನ್ನು ಗೆಲ್ಲಿಸಿಕೊಂಡು ಬರೋಣ ಎಂದು ಸಭೆಯಲ್ಲಿ ಜೆಡಿಎಸ್ ಕಾರ್ಯಕರ್ತ ಜಯಮುತ್ತು ಹೇಳಿಕೆ ನೀಡಿರುವುದು ಚರ್ಚೆ ಹುಟ್ಟುಹಾಕಿದೆ. ಚನ್ನಪಟ್ಟಣ ‘ದೋಸ್ತಿ’ ಅಭ್ಯರ್ಥಿ ಫೈನಲ್ ಆಗಿದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ.

ಚನ್ನಪಟ್ಟಣ (Channapatna) ಚುನಾವಣಾ ಕಣ ರಂಗೇರಿದ್ದು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಇಂದು ಕ್ಷೇತ್ರ ಪ್ರವಾಸ ಕೈಗೊಂಡಿದ್ದಾರೆ. ಸಂಜೆವರೆಗೂ ಐದು ಜಿಪಂ ವ್ಯಾಪ್ತಿಯಲ್ಲಿ ಕಾರ್ಯಕರ್ತರು, ಮುಖಂಡರ ಸಭೆ ನಡೆಸಲಾಗುತ್ತಿದೆ. ಅಭ್ಯರ್ಥಿ ಆಯ್ಕೆ ಬಗ್ಗೆ ಮುಖಂಡರು, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ ಮಾಡಲಾಗುತ್ತಿದೆ. ಇದನ್ನೂ ಓದಿ: ಸರ್ಕಾರ ಕೆಡವಲು 1,000 ಕೋಟಿ ರೆಡಿ ಮಾಡಿಕೊಂಡಿದ್ದಾರೆಂದು ಬಿಜೆಪಿ ನಾಯಕರೇ ಹೇಳಿದ್ದಾರೆ: ಶರಣ ಪ್ರಕಾಶ್ ಪಾಟೀಲ್

Nikhil Kumaraswamy

ಚನ್ನಪಟ್ಟಣದ ಕೋಡಂಬಳ್ಳಿ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಜೆಡಿಎಸ್ ಕಾರ್ಯಕರ್ತ ಜಯಮುತ್ತು ಮಾತನಾಡಿ, ಚನ್ನಪಟ್ಟಣ ಉಪಚುನಾವಣೆ ಬರ್ತಿದೆ. ಇದು ಜೆಡಿಎಸ್‌ನ ಕ್ಷೇತ್ರ. ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ಬೈಎಲೆಕ್ಷನ್ ನಡೀತಿದೆ. ಹಾಗಾಗಿ ಈ ಕ್ಷೇತ್ರ ಉಳಿಸಿಕೊಳ್ಳಬೇಕಾದ ಅನಿವಾರ್ಯವಿದೆ. ಈ ಕ್ಷೇತ್ರಕ್ಕೆ ನಿಖಿಲ್ ಕುಮಾರಸ್ವಾಮಿ ಅವರನ್ನೇ ಅಭ್ಯರ್ಥಿ ಮಾಡೋಣ. ಯಾವುದೇ ಭಿನ್ನಾಭಿಪ್ರಾಯ ಇದ್ದರೂ ಅದನ್ನ ಬಿಟ್ಟು ಒಗ್ಗಟ್ಟಾಗಿ ಕೆಲಸ ಮಾಡಿ. ನಿಖಿಲ್ ಕುಮಾರಸ್ವಾಮಿ ಅವರನ್ನ ಗೆಲ್ಲಿಸಿಕೊಂಡು ಬರೋಣ ಎಂದು ಹೇಳಿದರು.

ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ನಿಖಿಲ್ ಕುಮಾರಸ್ವಾಮಿ ಮಾತನಾಡಿ, 2019ರ ಲೋಕಸಭಾ ಚುನಾವಣೆಯ ಒಂದು ಕಹಿ ಘಟನೆ ಇತ್ತು. ಈ ಘಟನೆ ಮರೆಯಲು ಮತ್ತೊಮ್ಮೆ ಮಂಡ್ಯದಲ್ಲಿ ಜೆಡಿಎಸ್ ಬಾವುಟ ಹಾರಬೇಕು ಎಂಬ ಭಾವನೆ ಇತ್ತು. ಮಂಡ್ಯದ ಕಾರ್ಯಕರ್ತರು, ಮುಖಂಡರು ಕುಮಾರಣ್ಣ ಅವರ ಮೇಲೆ ಸಾಕಷ್ಟು ಒತ್ತಡ ಹೇರಿದ್ರು. ಹಾಗಾಗಿ ಕುಮಾರಣ್ಣ ಅವ್ರು ಮಂಡ್ಯದಲ್ಲಿ ಸ್ಪರ್ಧೆ ಮಾಡಬೇಕಾದ ಅನಿವಾರ್ಯ ಬಂತು ಎಂದರು. ಇದನ್ನೂ ಓದಿ: ರಾಜ್ಯದ 47.12 ಲಕ್ಷ ರೈತರ ಖಾತೆಗೆ 942 ಕೋಟಿ ಜಮೆ; ಪಿಎಂ ಕಿಸಾನ್ ಯೋಜನೆ ರೈತರ ಸಂಜೀವಿನಿ ಎಂದ ಜೋಶಿ

HD Kumaraswamy 2 1

ಮಂಡ್ಯದಲ್ಲಿ ಗೆದ್ದ ಬಳಿಕ ಕುಮಾರಣ್ಣ ಮೋದಿಯವರ ಸಂಪುಟದಲ್ಲಿ ಕೆಲಸ ಮಾಡ್ತಿದ್ದಾರೆ. ಮಂಡ್ಯ ಜಿಲ್ಲೆಯ ಜನರ ಆಶೀರ್ವಾದದಿಂದ ಕೇಂದ್ರ ಕೈಗಾರಿಕಾ ಸಚಿವರಾಗಿದ್ದಾರೆ. ಸಾಕಷ್ಟು ಯುವಜನತೆ ವಿದ್ಯಾವಂತರಿದ್ದಾರೆ. ಅವರಿಗೆ ಸಮರ್ಪಕ ಉದ್ಯೋಗಾವಕಾಶಗಳಿಲ್ಲ. ಇದೆಲ್ಲವನ್ನೂ ಕುಮಾರಸ್ವಾಮಿ ಅವರು ಮನಸ್ಸಿಗೆ ತೆಗೆದುಕೊಂಡು ಕಾರ್ಯೋನ್ಮುಖರಾಗಿದ್ದಾರೆ. ಮಂಡ್ಯದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜನೆ ಮಾಡಿದ್ದಾರೆ. ಹಲವಾರು ಕೈಗಾರಿಕೆಗಳ ಸ್ಥಾಪನೆಗೆ ಕೆಲಸ ಮಾಡ್ತಿದ್ದಾರೆ. ಚನ್ನಪಟ್ಟಣದಲ್ಲಿ ದೇವೇಗೌಡರು ಇಗ್ಗಲೂರು ಡ್ಯಾಂ ನಿರ್ಮಾಣ ಮಾಡಿದ್ದಾರೆ. ಇದು ತಾಲೂಕನ ರೈತಾಪಿ ವರ್ಗಕ್ಕೆ ದೇವೇಗೌಡರು ನೀಡಿರುವ ಕೊಡುಗೆ. ಇದನ್ನ ಜನ ಪ್ರತಿದಿನ ನೆನಪು ಮಾಡಿಕೊಳ್ತಾರೆ ಎಂದು ತಿಳಿಸಿದರು.

ಕುಮಾರಣ್ಣ ರಾಜ್ಯದಲ್ಲಿ ಎರಡನೇ ಬಾರಿಗೆ ಸಿಎಂ ಆಗಲು ಚನ್ನಪಟ್ಟಣದ ಜನತೆ ಕಾರಣ. ಚನ್ನಪಟ್ಟಣ ತಾಲೂಕಿಗೆ ಒಂದೂವರೆ ಸಾವಿರ ಕೋಟಿ ಅನುದಾನ ತಂದಿದ್ರು. ಇದನ್ನ ಯಾರೂ ತಿರುಚಲು ಸಾಧ್ಯವಿಲ್ಲ. ರಾಜ್ಯದ ಉಪಮುಖ್ಯಮಂತ್ರಿಗಳಿಗೆ ಚನ್ನಪಟ್ಟಣ ತಾಲೂಕು ಗೊತ್ತಿರಲಿಲ್ಲ. ಈಗ ಉಪಚುನಾವಣೆ ಇರೋದ್ರಿಂದ ಚನ್ನಪಟ್ಟಣಕ್ಕೆ ನಿರಂತರ ಪ್ರವಾಸ ಮಾಡ್ತಿದ್ದಾರೆ. ಏನೋ ಅನುದಾನ ತಂದಿದ್ದೀವಿ ಅಂತ ದೊಡ್ಡ ದೊಡ್ಡ ಫ್ಲೆಕ್ಸ್ ಹಾಕಿಸ್ತಿದ್ದಾರೆ. ಕುಮಾರಸ್ವಾಮಿ ಅವರು ತಾವು ತಂದ 1,500 ಕೋಟಿ ಅನುದಾನದ ಬಗ್ಗೆ ಜಾಹೀರಾತು ಕೊಟ್ಟಿರಲಿಲ್ಲ. ಪಾಪ ಈಗ ಉಪಮುಖ್ಯಮಂತ್ರಿಗಳಿಗೆ ಚನ್ನಪಟ್ಟಣದ ಮೇಲೆ ಮಮಕಾರ ಬಂದಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಟಾಂಗ್ ಕೊಟ್ಟರು. ಇದನ್ನೂ ಓದಿ: ಜಾತಿ ಗಣತಿ ಜಾರಿಯಿಂದ ಸರ್ಕಾರ ಹೋಗುತ್ತೆ ಅನ್ನೋದಾದ್ರೆ ಹೋಗಲಿ: ಹರಿಪ್ರಸಾದ್‌ ಸ್ಫೋಟಕ ಹೇಳಿಕೆ

ಐದು ಗ್ಯಾರಂಟಿ, ಐದು ಗ್ಯಾರಂಟಿ ಅಂತ ಚರ್ಚೆ ಮಾಡ್ತಿದ್ದಾರೆ. ಅದನ್ನ ಸಮರ್ಪಕವಾಗಿ ಕೊಡ್ತಿದ್ದಾರಾ? ಗ್ಯಾರಂಟಿ ಹೆಸರಲ್ಲಿ ಸರ್ಕಾರ ಹಗಲು ದರೋಡೆ ಮಾಡ್ತಿದೆ. ರಾಜ್ಯದ ಜನತೆ ಇಂತಹ ಭ್ರಷ್ಟ ಸರ್ಕಾರ ನೋಡಿಲ್ಲ. ಕೇವಲ ಒಂದೂವರೆ ವರ್ಷದಲ್ಲಿ ಸರ್ಕಾರ ನಡವಳಿಕೆ ಗೊತ್ತಾಗ್ತಿದೆ. ಪರಿಶಿಷ್ಟ ಜಾತಿ, ಪಂಗಡದ 187 ಕೋಟಿ ಹಣವನ್ನ ಬೇರೆ ರಾಜ್ಯದ ಚುನಾವಣೆಗೆ ಬಳಸಿಕೊಂಡಿದೆ. ಸ್ವತಃ ಸಿಎಂ ಅವರೇ ಇದನ್ನ ಸದನದಲ್ಲಿ ಒಪ್ಪಿಕೊಂಡಿದ್ದಾರೆ. ಇದರ ಮಧ್ಯೆ ಪಾಪ ಡಿಸಿಎಂಗೆ ಚನ್ನಪಟ್ಟಣ ನೆನಪಿಗೆ ಬಂದಿದೆ. ಚನ್ನಪಟ್ಟಣ ತಾಲೂಕಿಗೆ ಕಾಂಗ್ರೆಸ್ ಕೊಡುಗೆ ಏನು? ಇದನ್ನ ನೀವು ಪ್ರಶ್ನೆ ಮಾಡಬೇಕು. ಕೇವಲ ಚುನಾವಣೆಗೋಸ್ಕರ ಮಾಡ್ತಿರೋ ದೊಂಬರಾಟ ಇದು ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

Share This Article
Facebook Whatsapp Whatsapp Telegram
Previous Article Israeli Airstrike On Mosque In Gaza Kills 26 ಗಾಜಾದ ಮಸೀದಿ ಮೇಲೆ ಇಸ್ರೇಲ್‌ ವೈಮಾನಿಕ ದಾಳಿ – 26 ಮಂದಿ ಸಾವು
Next Article Murudeshwar Beach ವಿದ್ಯಾರ್ಥಿ ಸಾವು ಬೆನ್ನಲ್ಲೇ ಅಲರ್ಟ್‌ – ಮುರುಡೇಶ್ವರ ಕಡಲ ತೀರದಲ್ಲಿ ಪ್ರವಾಸಿಗರಿಗೆ ನಿರ್ಬಂಧ

Latest Cinema News

vijay karur stampede
ನನ್ನ ಹೃದಯ ಚೂರಾಗಿದೆ.. ನೋವು, ದುಃಖದಲ್ಲಿ ನರಳುತ್ತಿದ್ದೇನೆ: ಕಾಲ್ತುಳಿತ ದುರಂತಕ್ಕೆ ವಿಜಯ್‌ ಮೊದಲ ಪ್ರತಿಕ್ರಿಯೆ
Cinema Latest Main Post National South cinema
rajinikanth karur stampede
ಅಮಾಯಕರ ಜೀವಹಾನಿ ಹೃದಯವನ್ನು ಕಲಕಿದೆ: ಕಾಲ್ತುಳಿತ ದುರಂತಕ್ಕೆ ರಜನಿಕಾಂತ್‌ ಕಂಬನಿ
Cinema Latest National South cinema Top Stories
Actor Vijays Rally
ತಮಿಳು ನಟ ವಿಜಯ್‌ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ – ಮಕ್ಕಳು ಸೇರಿ 33 ಮಂದಿ ಸಾವು
Cinema Latest Main Post National South cinema
Kapil Sharma
ಕಪಿಲ್ ಶರ್ಮಾಗೆ ಬೆದರಿಕೆಯೊಡ್ಡಿ 1 ಕೋಟಿ ಹಣಕ್ಕೆ ಬೇಡಿಕೆಯಿಟ್ಟದ್ದ ವ್ಯಕ್ತಿ ಬಂಧನ
Cinema Crime Latest Top Stories TV Shows
Thama Trailer Rashmika Mandanna
ದೆವ್ವವಾಗಿ ಕಾಡುವ ರಶ್ಮಿಕಾರನ್ನು ನೋಡಿದ್ರಾ?
Bollywood Cinema Latest Top Stories

You Might Also Like

karur stampede Anbil Mahesh Poyyamozhi
Latest

ಕಾಲ್ತುಳಿತಕ್ಕೆ 36 ಮಂದಿ ಬಲಿ- ಆಸ್ಪತ್ರೆಯಲ್ಲಿ ಕುಟುಂಬಸ್ಥರ ಗೋಳಾಟ ಕಂಡು ಕಣ್ಣೀರಿಟ್ಟ ಸಚಿವ ಅಂಬಿಲ್‌ ಮಹೇಶ್

6 hours ago
MK stalin
Latest

ಕರೂರು ಕಾಲ್ತುಳಿತ – ಮೃತರ ಕುಟುಂಬಸ್ಥರಿಗೆ 10 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸ್ಟಾಲಿನ್‌

7 hours ago
PM Modi 2
Latest

ಕರೂರು ಕಾಲ್ತುಳಿತ ತೀವ್ರ ದು:ಖವನ್ನುಂಟು ಮಾಡಿದೆ – ಪ್ರಧಾನಿ ಮೋದಿ ಸಂತಾಪ

8 hours ago
vijay rally tamil nadu
Latest

ʼ9 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ.. ಪೋಷಕರಿಗೆ ಹುಡುಕಿಕೊಡಿ ಪ್ಲೀಸ್‌ʼ: ರ‍್ಯಾಲಿ ವೇಳೆ ಮೈಕ್‌ನಲ್ಲಿ ಹೇಳಿದ್ದ ವಿಜಯ್‌

8 hours ago
Actor Vijay Rally 2
Latest

ವಿಜಯ್‌ಗಾಗಿ ಸತತ 7 ಗಂಟೆ ಕಾದಿದ್ದ ಜನ; ಬರೋಬ್ಬರಿ 1 ಲಕ್ಷ ಮಂದಿ ಜಮಾವಣೆ – ಭೀಕರ ಕಾಲ್ತುಳಿತ ಹೇಗಾಯ್ತು?

8 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?