Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಷ್ಟಾದ್ರೂ ಹಣ ಸುರಿದು ಚುನಾವಣೆ ಮಾಡೋದು ಹೆಚ್‌ಡಿಕೆ ಬಳಿ ಇರೋ ಅಸ್ತ್ರ: ಸಿಪಿವೈ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಎಷ್ಟಾದ್ರೂ ಹಣ ಸುರಿದು ಚುನಾವಣೆ ಮಾಡೋದು ಹೆಚ್‌ಡಿಕೆ ಬಳಿ ಇರೋ ಅಸ್ತ್ರ: ಸಿಪಿವೈ

Districts

ಎಷ್ಟಾದ್ರೂ ಹಣ ಸುರಿದು ಚುನಾವಣೆ ಮಾಡೋದು ಹೆಚ್‌ಡಿಕೆ ಬಳಿ ಇರೋ ಅಸ್ತ್ರ: ಸಿಪಿವೈ

Public TV
Last updated: October 27, 2024 9:31 pm
Public TV
Share
3 Min Read
CP Yogeshwar 2
SHARE

– ಕಣ್ಣೀರು ಹಾಕಿ ನಾಟಕ ಮಾಡಲು ನನಗೆ ಬರಲ್ಲ ಎಂದ ಯೋಗೇಶ್ವರ್‌

ರಾಮನಗರ: ಕಣ್ಣೀರು ಹಾಕಲು ನನಗೆ ಬರಲ್ಲ. ನಾನು ಕಣ್ಣಿರು ಹಾಕಲ್ಲ. ನನಗೆ ನಾಟಕ ಮಾಡಲು ಬರಲ್ಲ ಎಂದು ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ (CP Yogeshwar) ಪರೋಕ್ಷವಾಗಿ ಹೆಚ್‌ಡಿಕೆಗೆ ಟಾಂಗ್ ಕೊಟ್ಟಿದ್ದಾರೆ.

ಕೋಡಂಬಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಸಮನ್ವಯ ಸಭೆ ನಡೆಸಿ ಮಾತನಾಡಿದ ಅವರು, ಚನ್ನಪಟ್ಟಣ ತಾಲೂಕಿನಲ್ಲಿ ಇದು ನನ್ನ 10ನೇ ಚುನಾವಣೆ. ಈ ಉಪಚುನಾವಣೆ ಬರುತ್ತದೆ ಎಂದು ನಾನು ಅಂದುಕೊಂಡಿರಲಿಲ್ಲ. ಕುಮಾರಸ್ವಾಮಿ (HD Kumaraswamy) ರಾಜಕೀಯ ಮಹತ್ವಾಕಾಂಕ್ಷೆಯಿಂದ ಬೈ ಎಲೆಕ್ಷನ್ ಬಂತು. ಎಂಎಲ್‌ಎ ಆಗಿ ಅವರು ಒಮ್ಮೆಯೂ ಕ್ಷೇತ್ರಕ್ಕೆ ಬಂದಿಲ್ಲ. ಮೊನ್ನೆ 150 ಕೆರೆ ತುಂಬಿಸಿದ್ದೇವೆ ಎನ್ನುತ್ತಿದ್ದರು. ಅವರಿಗೆ ಚನ್ನಪಟ್ಟಣದಲ್ಲಿ (Channapatna) ಎಷ್ಟು ಕೆರೆ ಇದೆ ಅಂತ ಗೊತ್ತಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ತೇಜಸ್ವಿ ಸೂರ್ಯ ಈಗ ಐರನ್ ಮ್ಯಾನ್ – 70.3 ರೇಸ್‌ನಲ್ಲಿ ವಿಜೇತರಾದ ಪ್ರಥಮ ಜನಪ್ರತಿನಿಧಿ!

channapatna cp yogeshwar congress meet

ನಾನು, ಸುರೇಶ್ ಸೇರಿ ಒಂದು ಹೊಸ ಯೋಜನೆ ಬಗ್ಗೆ ಆಲೋಚನೆ ಮಾಡಿದ್ದೇವೆ. ಕೆಆರ್‌ಎಸ್‌ನಿಂದ ಮಾರ್ಕೋನಹಳ್ಳಿ ಡ್ಯಾಂಗೆ ನೀರು ತಂದು ಅದನ್ನು ಕಣ್ವ, ಇಗ್ಗಲೂರು ಡ್ಯಾಂಗೆ ತರಬಹುದು. ಕುಮಾರಸ್ವಾಮಿ ಎರಡು ಬಾರಿ ಗೆದ್ದರೂ ಒಂದು ಕೆರೆ ತುಂಬಿಸಲಿಲ್ಲ. ಶಿವಲಿಂಗೇಗೌಡರಿಗೆ ಅವರ ಎಲ್ಲಾ ಮರ್ಮಗಳು ಗೊತ್ತು. ಅವರ ಪ್ಲಾನ್‌ಗಳು ನಮ್ಮ ಬಹುತೇಕ ನಾಯಕರಿಗೆ ಗೊತ್ತು. ನನ್ನ ಮೇಲೆ ಅವರ ಮನೆಯವರು ಯಾಕೆ ಹೀಗೆ ಮುಗಿಬೀಳುತ್ತಿದ್ದಾರೋ ಗೊತ್ತಿಲ್ಲ. ನಾನೇನು ತಪ್ಪು ಮಾಡಿದ್ದೀನಿ? ನನ್ನ ಮೇಲೆ ಯಾಕೆ ಹೀಗೆ ಬೀಳ್ತಾರೆ? ಕುಮಾರಸ್ವಾಮಿ ಬಂದ್ರು, ಅವರ ಪತ್ನಿ ಬಂದ್ರು ಈಗ ಮಗ ಬಂದ್ರು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ವಕ್ಫ್‌ ಆಸ್ತಿ ವಿವಾದ | 1964-1974ರ ದಾಖಲೆ ಪರಿಶೀಲಿಸಿ ಕ್ರಮವಹಿಸಲು ಟಾಸ್ಕ್ ಫೋರ್ಸ್ ರಚನೆ

ಮೊನ್ನೆ 500 ಬಸ್ ಮಾಡಿ ಜನ ಸೇರಿಸಿ ನಾಮಪತ್ರ ಸಲ್ಲಿಕೆ ಮಾಡಿದರು. ಕೇಂದ್ರದಲ್ಲಿ ಮಂತ್ರಿ ಆಗಿದ್ದಾರೆ. ಎಷ್ಟಾದ್ರೂ ಹಣ ತಂದು ಚುನಾವಣೆ ಮಾಡೋಕೆ ನಿಂತಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ಕೇಳಿದೆ. ಈಗ ಚುನಾವಣಾ ಆಯೋಗ ಕೇಸ್ ಹಾಕಿ 96 ಬಸ್ ಸೀಜ್ ಮಾಡಿ ಕ್ರಮ ಕೈಗೊಳ್ಳುತ್ತಾರೆ ಎಂದರು. ಇದನ್ನೂ ಓದಿ: ಯೂಟ್ಯೂಬ್‌ನಲ್ಲಿ ಸಕ್ರಿಯವಾಗಿದ್ದ ಕೇರಳ ದಂಪತಿ ಮನೆಯಲ್ಲಿ ಶವವಾಗಿ ಪತ್ತೆ; ಕಾರಣ ನಿಗೂಢ

ಯಥೇಚ್ಛವಾಗಿ ಹಣ ಸುರಿದು ಚುನಾವಣೆ ಮಾಡೋದು ಕುಮಾರಸ್ವಾಮಿಗೆ ಇರುವ ಒಂದೇ ಅಸ್ತ್ರ. ನನ್ನ ಬಳಿ ಅಷ್ಟು ಹಣ ಇಲ್ಲ, ಎರಡು ಬಾರಿ ಸೋತಿದ್ದೇನೆ. ಜನರೇ ನನ್ನ ಪರವಾಗಿ ಚುನಾವಣೆ ಮಾಡುತ್ತಾರೆ. ನನ್ನ ಎಲ್ಲರೂ ಪಕ್ಷಾಂತರಿ ಎನ್ನುತ್ತಾರೆ. ಯಾಕೆ ಕಾಂಗ್ರೆಸ್ ಬಿಟ್ಟು ಹೋಗಿದ್ರಿ ಎಂದು ಕೇಳುತ್ತಾರೆ. ಅವತ್ತು ನೀರಾವರಿ ಯೋಜನೆಗಾಗಿ ಪಕ್ಷ ಬಿಟ್ಟು ಹೋಗಿದ್ದೆ. ಕ್ಷೇತ್ರದ ಅಭಿವೃದ್ಧಿಗಾಗಿ ನಾನು ಪಕ್ಷಾಂತರ ಮಾಡಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಇಸ್ರೇಲ್‌ಗೆ ನಮ್ಮ ಶಕ್ತಿ ಏನೆಂದು ತೋರಿಸಬೇಕು: ಮತ್ತೆ ಯುದ್ಧದ ಎಚ್ಚರಿಕೆ ನೀಡಿದ ಇರಾನ್‌ ಸುಪ್ರೀಂ ಲೀಡರ್‌

ಸರ್ಕಾರದಲ್ಲಿ ನಾನು ಶಾಸಕನಾಗಿ ಸೇರಿಕೊಂಡ ನಂತರ ದಿನಗಳಲ್ಲಿ ಡಿಕೆ ಶಿವಕುಮಾರ್ ಅವರು ನೀರಾವರಿ ಸಚಿವರಾಗಿದ್ದಾರೆ. ನಾನು ಡಿಕೆ ಸುರೇಶ್ ಸೇರಿಕೊಂಡು ನೀರಾವರಿ ಯೋಜನೆಗೆ ಹೆಚ್ಚು ಒತ್ತು ಕೊಡುತ್ತೇವೆ. ನಾನು ಎರಡು ಬಾರಿ ಸೋತು ಸುಣ್ಣ ಆಗಿದ್ದೇನೆ. ಹಾಗಾಗಿ ನೀವು ಈ ಬಾರಿ ನನಗೆ ಆಶೀರ್ವಾದ ಮಾಡಬೇಕು. ನನ್ನ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರೆಲ್ಲರೂ ಒಟ್ಟಾಗಿ ಚುನಾವಣೆ ಎದುರಿಸಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಜಾತಿಗಣತಿ ವರದಿ ಆಧಾರದ ಮೇಲೆ ಹಳ್ಳಿಕಾರ್ ಸಮುದಾಯಕ್ಕೆ ನ್ಯಾಯ ಒದಗಿಸುತ್ತೇವೆ: ಸಿದ್ದರಾಮಯ್ಯ

TAGGED:by electionChannapatnacongressCP Yogeshwarhd kumaraswamyjdsramanagaraಕಾಂಗ್ರೆಸ್ಚನ್ನಪಟ್ಟಣಜೆಡಿಎಸ್ರಾಮನಗರಸಿಪಿ ಯೋಗೇಶ್ವರ್ಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post

You Might Also Like

DK Shivakumar 9
Bengaluru City

ಗ್ಯಾಸ್ ಬೆಲೆ ಏರಿಕೆ ಮಾಡಿ, ಸೌದೆ ಭಾಗ್ಯ ಕೊಡುತ್ತಿದ್ದಾರೆ: ಡಿಕೆಶಿ

Public TV
By Public TV
23 minutes ago
SM Krishna 3 2
Bengaluru City

ಎಸ್.ಎಂ.ಕೃಷ್ಣ ಅಧ್ಯಯನ ಪೀಠ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಿ: ಉನ್ನತ ಶಿಕ್ಷಣ ಸಚಿವ ಸುಧಾಕರ್ ಸೂಚನೆ

Public TV
By Public TV
24 minutes ago
West Bengal Election Voting Vote
Latest

ಪಶ್ಚಿಮ ಬಂಗಾಳದ 2 ಕ್ಷೇತ್ರಗಳ 15 ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ

Public TV
By Public TV
1 hour ago
family boycott
Bagalkot

ಹನುಮಂತ ದೇವರ ಓಕುಳಿ ಜಾತ್ರೆಗೆ 600 ರೂ. ಹಣ ಕೊಡಲಿಲ್ಲ ಅಂತ 7 ಕುಟುಂಬಕ್ಕೆ ಊರಿಂದ ಬಹಿಷ್ಕಾರ

Public TV
By Public TV
2 hours ago
Narmada River
Latest

ನರ್ಮದಾ ನದಿ ದೋಣಿ ದುರಂತದಲ್ಲಿ ಕರುಳು ಹಿಂಡುವ ದೃಶ್ಯ – 4 ವರ್ಷದ ಗಂಡು ಮಗು, ತಾಯಿ ಪರಸ್ಪರ ಅಪ್ಪಿಕೊಂಡೇ ಜಲಸಮಾಧಿ

Public TV
By Public TV
2 hours ago
d.k.shivakumar aisshwarya dks hegde
Bengaluru City

ಡಿಸಿಎಂ ಡಿಕೆಶಿ ಪುತ್ರಿ ಐಶ್ವರ್ಯ ಹೆಗ್ಡೆಗೆ ಹೆಣ್ಣು ಮಗು ಜನನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?