Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚನ್ನಪಟ್ಟಣ ಉಪಚುನಾವಣೆ | ನಾಮಪತ್ರ ಸಲ್ಲಿಕೆ ಅವಧಿ ಮುಕ್ತಾಯ – 50 ಅಭ್ಯರ್ಥಿಗಳಿಂದ 62 ನಾಮಪತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಚನ್ನಪಟ್ಟಣ ಉಪಚುನಾವಣೆ | ನಾಮಪತ್ರ ಸಲ್ಲಿಕೆ ಅವಧಿ ಮುಕ್ತಾಯ – 50 ಅಭ್ಯರ್ಥಿಗಳಿಂದ 62 ನಾಮಪತ್ರ

Districts

ಚನ್ನಪಟ್ಟಣ ಉಪಚುನಾವಣೆ | ನಾಮಪತ್ರ ಸಲ್ಲಿಕೆ ಅವಧಿ ಮುಕ್ತಾಯ – 50 ಅಭ್ಯರ್ಥಿಗಳಿಂದ 62 ನಾಮಪತ್ರ

Public TV
Last updated: October 25, 2024 11:15 pm
Public TV
Share
3 Min Read
NikhilKumaraswamy
SHARE

ರಾಮನಗರ: ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಅವಧಿ ಇಂದು (ಗುರುವಾರ) ಮುಕ್ತಾಯವಾಗಿದ್ದು, ಉಪಚುನಾವಣೆಗೆ 50 ಮಂದಿ 62 ನಾಮಪತ್ರ ಸಲ್ಲಿಕೆಯಾಗಿದೆ.

ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಮೂರು ಸೆಟ್ ನಾಮಪತ್ರ ಸಲ್ಲಿಸಿದ್ದಾರೆ. ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ 4 ಸೆಟ್ ನಾಮಪತ್ರ ಸಲ್ಲಿಸಿದ್ದಾರೆ. SDPI ನಿಂದ ಫಾಸಿಜ್, ಕೆಜೆಪಿಯಿಂದ ಶಿವಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ. ಇಂಡಿಯನ್ ಪೊಲಿಟಿಕಲ್ ಕಾಂಗ್ರೆಸ್‌ನಿಂದ ಪ್ರೇಮ್ ಕುಮಾರ್ ಸೇರಿ ಇತರ ಪಕ್ಷಗಳು ಹಾಗೂ ಪಕ್ಷೇತರವಾಗಿ 50 ಮಂದಿಯಿಂದ ಉಮೇದುವಾರಿಕೆ ಸಲ್ಲಿಸಿದ್ದಾರೆ. ಅ.28ಕ್ಕೆ ನಾಮಪತ್ರ ಪರಿಶೀಲನೆ ನಡೆಯಲಿದ್ದು, ಅ.30ಕ್ಕೆ ನಾಮಪತ್ರ ಹಿಂಪಡೆಯಲು ಕೊನೆ ದಿನವಾಗಿದೆ.

ಚನ್ನಪಟ್ಟಣ ಉಪಚುನಾವಣೆ ರಣಕಣ:
ಉಪಚುನಾವಣೆ ಕಾವು ಏರುತ್ತಿದೆ. ನಾಮಪತ್ರ ಸಲ್ಲಿಸಲು ಕೊನೆ ದಿನವಾದ ಇಂದು ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ. ಅಲ್ಲಿಗೆ ಚನ್ನಪಟ್ಟಣ, ಸತತವಾಗಿ ಎರಡು ಬಾರಿ ಸೋಲುಂಡವರ ನಡುವಿನ ಕದನ ಕಣವಾಗಿ ಮಾರ್ಪಟ್ಟಿದೆ. ನಿಖಿಲ್ ನಾಮಪತ್ರ ಸಲ್ಲಿಕೆಗೆ ಮುನ್ನ ಜೆಡಿಎಸ್-ಬಿಜೆಪಿ ನಾಯಕರ ಜೊತೆಗೂಡಿ ರೋಡ್ ಶೋ ನಡೆಸಿದ್ರು. ಮೈತ್ರಿ ಸಮಾವೇಶ ನಡೆಸಿದ್ರು.. ನಿಖಿಲ್‌ರನ್ನು ನಿಮ್ಮ ಮಡಿಲಿಗೆ ಹಾಕ್ತೇನೆ ಎನ್ನುತ್ತಾ ಕುಮಾರಸ್ವಾಮಿ ಭಾವುಕರಾದ್ರು. ಈ ಕ್ಷೇತ್ರಕ್ಕೆ ಕನಕಪುರ ಬ್ರದರ್ಸ್ ಕೊಡುಗೆ ಏನು ಎಂದು ಪ್ರಶ್ನೆ ಮಾಡಿದ್ರು. ಬಿಜೆಪಿ ನಾಯಕರು, ನಿಖಿಲ್ ಗೆಲ್ಲಿಸುವ ಮಾತಾಡಿದ್ರು. ಯೋಗೇಶ್ವರ್ ವಿರುದ್ಧ ವಾಗ್ದಾಳಿ ನಡೆಸಿದ್ರು. ಈ ಮಧ್ಯೆ, ಕುಮಾರಸ್ವಾಮಿ ಭಾವನಾತ್ಮಕವಾಗಿ ಮಾತನಾಡೋದು, ಅಳೋದು ನೋಡಿ ನೋಡಿ ಜನರಿಗೆ ಸಾಕಾಗಿದೆ. ಇದಕ್ಕೆಲ್ಲ ಜನ ಮಾರುಹೋಗಲ್ಲ ಎಂದು ಸಿಎಂ ಟಕ್ಕರ್ ನೀಡಿದ್ದಾರೆ

ಶಿಗ್ಗಾಂವಿ ಉಪಚುನಾವಣೆ:
ಶಿಗ್ಗಾಂವಿ ಬೈಎಲೆಕ್ಷನ್‌ಗೆ ಟ್ವಿಸ್ಟ್ ಸಿಕ್ಕಿದೆ. ಶಿಗ್ಗಾಂವಿ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅಜ್ಜಂಪೀರ್ ಖಾದ್ರಿ ಬಂಡಾಯ ಸ್ಪರ್ಧಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇನ್ನೇನೂ ನಾಮಪತ್ರ ಸಲ್ಲಿಕೆ ಅವಧಿ ಮುಗಿಯಬೇಕು ಎನ್ನುವಾಗ ಬೈಕ್‌ನಲ್ಲಿ ಧಾವಿಸಿದ ಅಜ್ಜಂ ಫೀರ್ ಖಾದ್ರಿ ಉಮೇದುವಾರಿಕೆ ಸಲ್ಲಿಸಿದ್ರು. ಯಾಸೀರ್ ಪಠಾಣ್ ರೌಡಿಶೀಟರ್ ಎಂದು ಆಕ್ರೋಶ ಹೊರಹಾಕಿದ್ರು. ಇದಕ್ಕೂ ಮುನ್ನ, ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಯಾಸೀರ್ ಪಠಾಣ್ ನಾಮಪತ್ರ ಸಲ್ಲಿಕೆ ವೇಳೆ ಸಚಿವ ಶಿವಾನಂದ ಪಾಟೀಲ್ ಹೊರತುಪಡಿಸಿ ಪ್ರಮುಖರ‍್ಯಾರು ಕಾಣಿಸಿಕೊಳ್ಳಲಿಲ್ಲ. ಬಳಿಕ ನಡೆದ ರ‍್ಯಾಲಿಯಲ್ಲಿ ಸಚಿವ ಖಂಡ್ರೆ, ಜಮೀರ್, ಜಾರಕಿಹೊಳಿ ಕಾಣಿಸಿಕೊಂಡ್ರು. ಈ ನಡುವೆ ಬಂಡಾಯ ಎದ್ದಿರುವ ಖಾದ್ರಿ ಓಲೈಸಲು ಜಮೀರ್ ನೋಡಿದ್ರೂ, ಸದ್ಯಕ್ಕೆ ಪ್ರಯೋಜನವಾಗಿಲ್ಲ. ಸಿಎಂ ಮಾತ್ರ ಬಂಡಾಯ ಶಮನದ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಯಾಸೀನ್ ಕಾರ್ ಮೇಲೆ ಖಾದ್ರಿ ಬೆಂಬಲಿಗರು ದಾಳಿ ನಡೆಸಿದ್ದಾರೆ. ಮತ್ತೊಂದ್ದೆಡೆ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಕೂಡ ನಾಮಿನೇಷನ್ ಹಾಕಿದ್ರು. ಈ ಕ್ಷಣಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಯಡಿಯೂರಪ್ಪ ಸೇರಿ ಪಕ್ಷದ ಪ್ರಮುಖರು ಸಾಕ್ಷಿಯಾದ್ರು. ಕಾಂಗ್ರೆಸ್ ಟೀಕೆಗಳನ್ನು ಬೊಮ್ಮಾಯಿ ಅಲ್ಲಗಳೆದ್ರು.. ಬಿಜೆಪಿ ಕುಟುಂಬ ರಾಜಕೀಯ ಮಾಡ್ತಿಲ್ಲ ಎಂದು ಜೋಶಿ ಸಮರ್ಥನೆ ಮಾಡಿಕೊಂಡಿದ್ದಾರೆ.

ಸಂಡೂರು ಉಪಚುನಾವಣೆ:
ಸಂಡೂರು ಉಪಸಮರದ ಕಾವೇರುತ್ತಿದೆ. ಇಂದು ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ನಾಮಪತ್ರ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಭರ್ಜರಿ ರೋಡ್ ಶೋ ನಡೆಸಿದ್ರು. ವಿಜಯೇಂದ್ರ, ಜನಾರ್ದನ ರೆಡ್ಡಿ ಜೊತೆಗೆ ಶ್ರೀರಾಮುಲು ಕೂಡ ಕಾಣಿಸಿಕೊಂಡ್ರು. ಈ ವೇಳೆ ಬಳ್ಳಾರಿ ಲೋಕಸಭೆ ಎಲೆಕ್ಷನ್‌ಗೆ ವಾಲ್ಮೀಕಿ ನಿಗಮದ ಹಣ ಬಳಕೆಯಾಗಿರೋ ಆರೋಪವನ್ನೇ ಮುಂದಿಟ್ಟು ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿಗರು ವಾಗ್ದಾಳಿ ನಡೆಸಿದ್ರು. ಸಂಸದ ತುಕಾರಾಂ ಅವರಿಗೆ ಇದು ಕೊನೆ ಚುನಾವಣೆ. ಲೋಕಸಭೆ ಚುನಾವಣೆಯಲ್ಲಿ ಸಂಡೂರು ಜನರನ್ನ ಮರುಳು ಮಾಡಿ ಕಾಂಗ್ರೆಸ್ ಗೆದ್ದಿದೆ. ಈ ಬಾರಿ ಗೆದ್ದು ತೋರಿಸಲಿ ನೋಡೋಣ ಅಂತ ಸವಾಲ್ ಹಾಕಿದ್ರು. ಸಂಡೂರಿನಲ್ಲಿ ಈ ಬಾರಿ ಕಮಲ ಅರಳಿಸುವ ವಿಶ್ವಾಸವನ್ನು ವಿಜಯೇಂದ್ರ ವ್ಯಕ್ತಪಡಿಸಿದ್ದಾರೆ.

TAGGED:bjpChannapatnaChannapatna bypollscongressjds
Share This Article
Facebook Whatsapp Whatsapp Telegram

Cinema news

Asha Bhosle 2
10ನೇ ವಯಸ್ಸಿನಲ್ಲಿ ಶುರುವಾದ ಗಾಯನದ ಬದುಕು – `ಸ್ವರʼ ನಿಲ್ಲಿಸಿದ ಆಶಾ ಭೋಸ್ಲೆ
Cinema Latest Main Post National
Actor Harish
ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ – ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು
Cinema Crime Karnataka Kodagu Latest Sandalwood Top Stories
Asha Bhosle and Narendra Modi
ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಶ್ರೀಮಂತಗೊಳಿಸಿದವರು ಆಶಾ ಭೋಸ್ಲೆ: ಮೋದಿ ಕಂಬನಿ
Bollywood Cinema Latest Main Post National
Asha Bhosle
ಹೃದಯ ಸ್ತಂಭನದಿಂದ ಖ್ಯಾತ ಗಾಯಕಿ ಆಶಾ ಭೋಸ್ಲೆ ನಿಧನ
Bollywood Cinema Latest Main Post National

You Might Also Like

Donald Trump 1
Latest

ಟ್ರಂಪ್‌ ಎಚ್ಚರಿಕೆ ಬೆನ್ನಲ್ಲೇ ಹಾರ್ಮುಜ್ ದಾಟದೇ ಯೂಟರ್ನ್‌ ಹೊಡೆದ 2 ಪಾಕ್‌ ತೈಲ ಟ್ಯಾಂಕರ್‌ಗಳು

Public TV
By Public TV
7 minutes ago
MALLIKARJUN KHARGE NARENSRA MODI
Latest

33% ಮಹಿಳಾ ಮೀಸಲಾತಿ ಮಸೂದೆಗೆ ಬೆಂಬಲ ಕೋರಿದ ಮೋದಿ – ಸರ್ವಪಕ್ಷ ಸಭೆಗೆ ಖರ್ಗೆ ಆಗ್ರಹ

Public TV
By Public TV
11 minutes ago
02 11
Latest

ಬಿಗ್‌ ಬುಲೆಟಿನ್‌ 12 April 2026 ಭಾಗ-2

Public TV
By Public TV
21 minutes ago
Rahul Gandhi 3
Latest

ಸಮಾನತೆ ಇರಬಾರದು ಅನ್ನೋ ಕಾರಣಕ್ಕೆ ಸಂವಿಧಾನ ಮುಗಿಸುವುದು RSS, ಬಿಜೆಪಿಯ ಮುಖ್ಯ ಉದ್ದೇಶ: ರಾಗಾ ಕಿಡಿ

Public TV
By Public TV
22 minutes ago
Virat Kohli IPL 2026
Cricket

ಹೆಲ್ಮೆಟ್‌, ಗ್ಲೌಸ್‌ ಎಸೆದು ಕೊಹ್ಲಿ ಆಕ್ರೋಶ

Public TV
By Public TV
24 minutes ago
siddaramaiah 2
Bengaluru City

ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ದೆಹಲಿಗೆ ಭೇಟಿ ನೀಡೋದ್ರಲ್ಲಿ ತಪ್ಪಿಲ್ಲ: ಸಿದ್ದರಾಮಯ್ಯ

Public TV
By Public TV
34 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?