ಭೂತಾನ್ ಪುಟ್ಟ ಯುವರಾಜನಿಗೆ ಚನ್ನಪಟ್ಟಣ ಗೊಂಬೆ ಗಿಫ್ಟ್ ಕೊಟ್ಟ ರಕ್ಷಣಾ ಸಚಿವೆ

Public TV
1 Min Read
DOLL GIFT

ನವದೆಹಲಿ: ಮೊದಲ ಬಾರಿಗೆ ಭಾರತ ಪ್ರವಾಸಕ್ಕೆ ಆಗಮಿಸಿದ್ದ ಭೂತಾನ್ ದೊರೆ ಜಿಗ್ಮೆ ನಾಮ್‍ಗೆಲ್ ವಾಗ್ಚುಕ್ ಅವರ ಒಂದೂವರೆ ವರ್ಷದ ಪುತ್ರನಿಗೆ ರಕ್ಷಣಾ ಸಚಿವೆ ನಿರ್ಮಲಾ ಸಿತಾರಾಮನ್ ಕರ್ನಾಟಕದ ವಿಶ್ವಪ್ರಸಿದ್ಧ ಚನ್ನಪಟ್ಟಣ ಗೊಂಬೆಗಳನ್ನು ಉಡುಗೊರೆಯಾಗಿ ನೀಡಿದ್ದಾರೆ.

ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಅವರು ಚನ್ನಪಟ್ಟಣದ ಗೊಂಬೆಗಳನ್ನು ಉಡುಗೊರೆಯಾಗಿ ನೀಡುವ ಮೂಲಕ ರಾಜ್ಯದ ಕೀರ್ತಿಯನ್ನು ಇನ್ನಷ್ಟು ಹೆಚ್ಚುವಂತೆ ಮಾಡಿದ್ದಾರೆ.

DOLL GIFT 4

ಮಹಾರಾಜ, ರಾಣಿ ಮತ್ತು ಯುವ ರಾಜಕುಮಾರನ ಬಳಿ ಇದ್ದ ಚನ್ನಪಟ್ಟಣದ ಗೊಂಬೆಯನ್ನು ನೋಡಿದ್ದಾರೆ. ಚನ್ನಪಟ್ಟಣದ ಗೊಂಬೆಯಂತೆಯೇ ಇರುವ ಯುವರಾಜನನ್ನು ನೋಡಲು ಸಂತೋಷವಾಗುತ್ತದೆಂದು ಹರ್ಷ ವ್ಯಕ್ತಪಡಿಸಿ ನಿರ್ಮಾಲಾ ಸೀತಾರಾಮನ್ ಟ್ವೀಟ್ ಮಾಡಿದ್ದಾರೆ.

ಬುಧವಾರ ರಾಜ ಪರಿವಾರದ ಗೌರವಾರ್ಥ ಪ್ರಧಾನಿ ನರೇಂದ್ರ ಮೋದಿ ಅವರು ಏರ್ಪಡಿಸಿದ್ದ ಓತಣಕೂಟದಲ್ಲಿ ಇತ್ತೀಚೆಗಷ್ಟೆ ಮುಕ್ತಾಯವಾದ 17 ವರ್ಷದೊಳಗಿನವರ ಫುಟ್ಬಾಲ್ ಪಂದ್ಯಾವಳಿಯ ಚೆಂಡೊಂದನ್ನು ಉಡುಗೊರೆಯನ್ನು ನೀಡಿದ್ದರು. ಈ ಓತಣ ಕೂಟದಲ್ಲೇ ಸಚಿವೆ ನಿರ್ಮಲಾ ಚನ್ನಪಟ್ಟಣದ ಗೊಂಬೆಯನ್ನು ಉಡುಗೊರೆಯಾಗಿ ನೀಡಿದ್ದಾರೆ.

ಮೊದಲ ಬಾರಿಗೆ ಭಾರತಕ್ಕೆ ಬಂದ ಪುಟ್ಟ ಯುವರಾಜಕುಮಾರ ಎಲ್ಲರ ಗಮನ ಕೇಂದ್ರಿಕರಿಸಿದ್ದರು. ವಿಶೇಷವಾಗಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಭೂತಾನ್ ರಾಜನ ಪರಿವಾರವನ್ನು ಬರಮಾಡಿಕೊಳ್ಳಲು ವಿಮಾನ ನಿಲ್ದಾಣಕ್ಕೆ ಹೋಗಿ ಯುವರಾಜನ ಕೈಹಿಡಿದು ನಿಂತಿದ್ದ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

 

DOLL GIFT 2

DOLL GIFT1

DNmuMFZU8AE3491

Share This Article
Leave a Comment

Leave a Reply

Your email address will not be published. Required fields are marked *