ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇಗುಲ ರಥೋತ್ಸವದ ವೇಳೆ ತೇರು ಮುರಿದು ಅವಘಡ

Public TV
1 Min Read
Bappanadu Sri Durga Parameshwar 2

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಸಮೀಪದ ಪ್ರಸಿದ್ಧ ಕ್ಷೇತ್ರ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇಗುಲ (Bappanadu Sri Durga Parameshwari Temple) ರಥೋತ್ಸವ ವೇಳೆ ತೇರು ಮುರಿದು ಅವಘಡ ಸಂಭವಿಸಿದೆ.

Bappanadu Sri Durga Parameshwar

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವಾರ್ಷಿಕ ಉತ್ಸವದ ಅಂಗವಾಗಿ ನಡೆಯುತ್ತಿದ್ದ ರಥೋತ್ಸವದ ವೇಳೆ ತೇರಿನ ಮೇಲ್ಭಾಗ ಏಕಾಏಕಿ ಕುಸಿದಿದೆ. ತೇರಿನ (Chariot) ಮೇಲ್ಬಾಗ ಕುಸಿಯುವ ವೇಳೆ ಅರ್ಚಕರು ತೇರಿನಲ್ಲೇ ಇದ್ದರೂ ಅದೃಷ್ಟವಶಾತ್ ಪಾರಾಗಿದ್ದಾರೆ. ಜೊತೆಗೆ ಸಾರ್ವಜನಿಕರಿಗೂ ಯಾವುದೇ ಗಂಭೀರ ಅನಾಹುತಗಳಾಗಿಲ್ಲ. ಇದನ್ನೂ ಓದಿ: ಜನಿವಾರ ಹಾಕಿದ್ದಕ್ಕೆ ಸಿಇಟಿ ಪರೀಕ್ಷೆಗೆ ನೋ ಎಂಟ್ರಿ – ಬೀದರ್ ವಿದ್ಯಾರ್ಥಿಗೆ ನ್ಯಾಯ ಕೊಡಿಸಲು ಕೆಇಎ ಸಿದ್ಧತೆ

ತಡರಾತ್ರಿ ರಾತ್ರಿ 1:45ರ ಸುಮಾರಿಗೆ ಘಟನೆ ಸಂಭವಿಸಿದ್ದು, ಇದರಿಂದ ಭಕ್ತ ಸಮೂಹದಲ್ಲೂ ಆತಂಕ ಸೃಷ್ಟಿಯಾಗಿದೆ. ಬಳಿಕ ಚಂದ್ರಮಂಡಲ ತೇರಿನಲ್ಲಿ ದೇವರ ಉತ್ಸವ ಮುಂದುವರಿಯಿತು. ಇದನ್ನೂ ಓದಿ: ರಾಹುಲ್ಲನನ್ನ ಬಿಟ್ಟು ಬದುಕಲ್ಲ – ಭಾವಿ ಅಳಿಯನೊಂದಿಗೆ ಒಟ್ಟಿಗೆ ಜೀವನ ನಡೆಲು ಮುಂದಾದ ಮಹಿಳೆ

Share This Article