ಮಂಗಳೂರು: ಕನ್ನಡದ ಸೂಪರ್ ಹಿಟ್ ಸಿನಿಮಾ ಚಾರ್ಲಿ-777 ಚಿತ್ರದ ನಿರ್ದೇಶಕ ಕಿರಣ್ ರಾಜ್ (Kiranraj) ಅವರು ಅನಯಾ ವಸುಧಾ (Anaya Vasudha) ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದು, ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.
Advertisement
ಮಂಗಳೂರಿನ (Mangaluru) ಖಾಸಗಿ ಹೋಟೆಲ್ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಉಂಗುರ ಬದಲಾಯಿಸುವುದರ ಮೂಲಕ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಸ್ನೇಹಿತರು ಫ್ಯಾಮಿಲಿಯವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದನ್ನೂ ಓದಿ: ಜಮ್ಮು-ಕಾಶ್ಮೀರ | ವರ್ಷಪೂರ್ತಿ ಸಂಪರ್ಕ ಕಲ್ಪಿಸುವ ಝಡ್-ಮೋರ್ಹ್ ಸುರಂಗ ಮಾರ್ಗ ಉದ್ಘಾಟಿಸಿದ ಮೋದಿ
Advertisement
ಕಿರಣ್ ರಾಜ್ ಮಂಗಳೂರು ಗಡಿಭಾಗ ಕಾಸರಗೋಡು ಮೂಲದವರಾಗಿದ್ದು, ಅನಯ ವಸುಧಾ ಕೂಡ ಕಾಸರಗೋಡು ಮೂಲದವರು. ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಟನೆಯ ಚಾರ್ಲಿ 777 ಸಿನಿಮಾವನ್ನು ಕಿರಣ್ ನಿರ್ದೇಶನ ಮಾಡಿ ಸಣ್ಣ ಪಾತ್ರವೊಂದರಲ್ಲಿ ಅಭಿನಯಿಸಿದ್ದರು. ವಿಭಿನ್ನ ಕಥಾ ಹಂದರವಿದ್ದ, ಚಾರ್ಲಿ ಸಿನಿಮಾ ಸೂಪರ್ ಹಿಟ್ ಆಗಿ ಕಿರಣ್ ಅವರಿಗೆ ಚಂದನವನದಲ್ಲಿ ಹೆಸರು ತಂದುಕೊಟ್ಟಿತ್ತು. ಇದನ್ನೂ ಓದಿ: ಹಿಂದೂ ಅನ್ನೋದು ಅವಮಾನಕರ ಶಬ್ದ – ಚಿಂತಕ ಕೆ.ಎಸ್ ಭಗವಾನ್ ಮತ್ತೆ ವಿವಾದಾತ್ಮಕ ಹೇಳಿಕೆ