Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಚಾರ್ಲಿ 777 ತೆರಿಗೆ ವಿನಾಯತಿ: ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ ಅಸಮಾಧಾನ ಏಕೆ?

Public TV
Last updated: June 20, 2022 1:05 pm
Public TV
Share
4 Min Read
FotoJet 67
SHARE

ರಕ್ಷಿತ್ ಶೆಟ್ಟಿ ನಟನೆಯ ಚಾರ್ಲಿ 777 ಸಿನಿಮಾಗೆ ಕರ್ನಾಟಕ ಸರಕಾರವು ತೆರಿಗೆ ವಿನಾಯತಿ ಘೋಷಣೆ ಮಾಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈ ಸಿನಿಮಾವನ್ನು ವೀಕ್ಷಿಸಿ ಎರಡ್ಮೂರು ದಿನಗಳು ಕಳೆದ ನಂತರ ಇಂಥದ್ದೊಂದು ನಿರ್ಧಾರ ಪ್ರಕಟಿಸಿದ್ದಾರೆ. ಈ ಬೆನ್ನೆಲ್ಲೆ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ ಮುಖ್ಯಮಂತ್ರಿಗಳಿಗೆ ಪತ್ರವೊಂದನ್ನು ಬರೆದಿದ್ದಾರೆ. ಅದು ಈಗ ವೈರಲ್ ಆಗಿದೆ. ಅಷ್ಟಕ್ಕೂ ಮಂಸೋರೆ ಅವರ ಅಸಮಾಧಾನ ಯಾರ ಮೇಲೆ? ಅವರ ಪತ್ರವನ್ನೇ ಓದಿ..

ACT 1978 5 Mansore

ಕರ್ನಾಟಕದ ಮುಖ್ಯಮಂತ್ರಿಗಳಾದ Chief Minister of Karnataka ಬಸವರಾಜ ಬೊಮ್ಮಾಯಿ ಅವರಿಗೆ ನಮಸ್ಕಾರ.

ನನ್ ಹೆಸರು,

ಮಂಸೋರೆ,  ಕನ್ನಡ ಸಿನೆಮಾ ನಿರ್ದೇಶಕ.

ತಾವು ಕನ್ನಡ ಸಿನೆಮಾ, ಚಾರ್ಲಿ 777ಗೆ ನಿರ್ಮಾಪಕರ ಕೋರಿಕೆಯ ಮೇರೆಗೆ , ಸದರಿ ಸಿನೆಮಾಗೆ 100% ಜಿಎಸ್‌ಟಿ ಇಂದ ವಿನಾಯಿತಿ ಕೊಟ್ಟಿರುವುದು ತುಂಬಾ ಸಂತೋಷದ ವಿಷಯ. ಕನ್ನಡ ಸಿನೆಮಾಗಳ ಏಳಿಗೆಗೆ ಇದು ಅತ್ಯವಶ್ಯಕ. ಜೊತೆಗೆ ಈ ಹಿಂದೆ ಯಾವುದೋ ಅನ್ಯ ಭಾಷೆಯ ಸಿನೆಮಾಗು ತಾವು 100% ಜಿಎಸ್‌ಟಿ ತೆರಿಗೆ ವಿನಾಯಿತಿ ಕೊಟ್ಟಿದ್ದೀರಿ ಎಂದು ಯಾವುದೋ ಸುದ್ದಿ ಪತ್ರಿಕೆಯಲ್ಲಿ ಓದಿದ ನೆನಪು. ಈಗ ಈ ಪತ್ರವನ್ನು ತಮಗೆ ಬರೆಯುತ್ತಿರುವುದರ ಕಾರಣವನ್ನು ಮೊದಲಿಗೆ ತಮಗೆ ವಿವರಿಸುತ್ತೇನೆ. ತಾವು ಮುಖ್ಯಮಂತ್ರಿ ಆಗುವ ಮೊದಲು, ತಮ್ಮ ಬಿಜೆಪಿ ಸರ್ಕಾರ ಬರುವ ಮೊದಲು ಕನ್ನಡದ ಸಿನೆಮಾಗಳಿಗೆ ಕನ್ನಡದ ನೆಲದಲ್ಲೇ ಸಂಪೂರ್ಣವಾಗಿ ತಯಾರಾಗುವ (ಹೊರ ರಾಜ್ಯದಲ್ಲಿ ಚಿತ್ರೀಕರಣವಾಗುವುದಾದರೆ ಅದಕ್ಕೆ ಸೂಕ್ತ ಕಾರಣ ಕೊಡಬೇಕಿತ್ತು) ಎಲ್ಲಾ ಕನ್ನಡ ಸಿನೆಮಾಗಳಿಗೆ 100% ತೆರಿಗೆ ವಿನಾಯಿತಿ ಇತ್ತು ಎಂಬ ವಿಷಯ ತಮಗೆ ಗೊತ್ತಿತ್ತೇ?

ಕನ್ನಡದ ಸಿನೆಮಾಗಳಿಗೆ ಇದ್ದ ಈ ವಿನಾಯಿತಿಯನ್ನು ಕನ್ನಡಿಗರ ಕೈಯಿಂದ (ಕನ್ನಡದ ನಿರ್ಮಾಪಕರ ಹೊಟ್ಟೆ ಮೇಲೆ ಹೊಡೆದು ಕಿತ್ತುಕೊಂಡಿದ್ದು) ನಿಮ್ಮದೇ ಆದ ಬಿಜೆಪಿ ಸರ್ಕಾರ ಎಂಬುದು ನಿಮಗೆ ತಿಳಿದಿದೆಯೇ? ಅದು ಜಿಎಸ್‌ಟಿ ಎಂಬ ಹೆಮ್ಮಾರಿಯ ಹೆಸರಲ್ಲಿ ಎಂಬುದು ತಮಗೆ ತಿಳಿದಿದೆಯೇ? ಇದನ್ನೂ ಓದಿ:ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ ಹಾಕಿದವರ ಲಿಸ್ಟ್ ನಲ್ಲಿ ಕರಣ್ ಜೋಹರ್

rakshit shetty 2

ಈ ಹಿಂದೆ ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದ ರಾಮಕೃಷ್ಣ ಹೆಗಡೆ ಅವರು ಕನ್ನಡ ಸಿನೆಮಾಗಳ ಮೇಲೆ ಮನರಂಜನಾ ತೆರಿಗೆ ವಿಧಿಸಲು ಹೋದಾಗ, ನಮ್ಮೆಲ್ಲರ ಪಾಲಿನ ಅಣ್ಣಾವ್ರು, ಡಾ. ರಾಜ್ಕುಮಾರ್ ಅವರು ಕನ್ನಡ ಚಿತ್ರರಂಗವನ್ನೇ ತ್ಯಜಿಸಿ ತಮ್ಮ ಹಳ್ಳಿಗೆ ಹೋಗುವ ನಿರ್ಧಾರ ಮಾಡುತ್ತಾರೆ, ಆಗ ಮುಖ್ಯಮಂತ್ರಿಗಳೇ ಅಣ್ಣಾವ್ರ ಮನೆಗೆ ಹೋಗಿ ಅವರ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಅವರ ಮನವೊಲಿಸಿ ಅವರು ತಮ್ಮ ನಿರ್ಧಾರವನ್ನು ಹಿಂತೆಗೆದುಕೊಳ್ಳುವಮತೆ ಒಪ್ಪಿಸುತ್ತಾರೆ ಹಾಗು ತೆರಿಗೆ ವಿಧಿಸುವ ತಮ್ಮ ನಿಲುವನ್ನು ಹಿಂತೆಗೆದುಕೊಳ್ಳುತ್ತಾರೆ. (ಹಿರಿಯ ಪತ್ರಕರ್ತರಾದ ಬಿ.ವಿ.ವೈಕುಂಠರಾಜು ರವರ ಸಿನೆಮಾತು ಪುಸ್ತಕದಲ್ಲಿ ಇದರ ಬಗ್ಗೆ ಸ್ಪಷ್ಟವಾಗಿ  ಉಲ್ಲೇಖಿಸಲಾಗಿದೆ) ಅದೇ ಮುಂದೆ ಕನ್ನಡ ಹಾಗೂ ಕನ್ನಡ ನೆಲದಲ್ಲಿ ತಯಾರಾಗುವ ಎಲ್ಲಾ ಸಿನೆಮಾಗಳಿಗೂ 100% ತೆರಿಗೆ ವಿನಾಯಿತಿ ನೀಡಲಾಗುವ ನಿರ್ಧಾರ ಕೈಗೊಳ್ಳಲಾಗುತ್ತದೆ. ಅಂತಹ ಮಹಾನುಭಾವರ ನಿರ್ಧಾರದಿಂದ ಕನ್ನಡ ಚಿತ್ರರಂಗಕ್ಕೆ ಸಿಕ್ಕಿದ್ದ ಸೌಲಭ್ಯವನ್ನು ಕಿತ್ತುಕೊಂಡಿದ್ದು ಜಿಎಸ್‌ಟಿ ನೆಪದಲ್ಲಿ ನಿಮ್ಮದೇ ಬಿಜೆಪಿ ಸರ್ಕಾರ ಎಂಬುದು ತಮಗೆ ತಿಳಿದಿದೆಯೇ?

ಈಗ ವಾಪಸ್ಸು ನಿಮ್ಮ ಆಡಳಿತದ ಸರ್ಕಾರದ ವಿಷಯಕ್ಕೆ ಬರುವುದಾದರೆ, ಶ್ವಾನದ ಕಾಳಜಿಯಿಂದ ತಾವು ಆ ‘ಒಂದು’ ಕನ್ನಡ ಸಿನೆಮಾಗೆ ಮಾತ್ರ 100% ಜಿಎಸ್‌ಟಿ ತೆರಿಗೆ ವಿನಾಯಿತಿ ನೀಡಲು ಆ ಹಣವನ್ನು ತಾವು ತಮ್ಮ ಜೇಬಿನಿಂದ ನೀಡುತ್ತಿದ್ದೀರ ಎಂದು ತಿಳಿಯಲು ಡಾ.ಬಿ.ಆರ್.ಅಂಬೇಡ್ಕರ್ ಸರ್ ಬರೆದಿರುವ, ಸಾಂವಿಧಾನಿಕ ಹಕ್ಕನ್ನು ಪಡೆದಿರುವ ಕರ್ನಾಟಕದ ಪ್ರಜೆಗಳಾಗಿ ಕೇಳಿತ್ತಿದ್ದೇನೆ, ದಯವಿಟ್ಟು ತಿಳಿಸಿ.

BASAVARAJ BOMMAI 2

ಶ್ವಾನದಷ್ಟೇ ಅಮೂಲ್ಯವಾದ ಜೀವ ಪಡೆದಿರುವ ಮಾನವೀಯ, ಮನುಷ್ಯತ್ವದ ಅಂಶ ಎತ್ತಿ ಹಿಡಿಯುವ ನೂರಾರು ಕನ್ನಡ ಸಿನೆಮಾಗಳು ಪ್ರತೀ ವರ್ಷ ತಯಾರಾಗುತ್ತಿವೆ. ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಪ್ರದರ್ಶನವಾಗುತ್ತಿರುವ ಅನೇಕ ಕನ್ನಡ ಚಿತ್ರಗಳು ಕನ್ನಡ ನೆಲದಲ್ಲಿ ತಯಾರಾಗುತ್ತಿವೆ. ಉದಾ : ಪೆಡ್ರೋ, ಕೋಳಿತಾಲ್, ಡೊಳ್ಳು, ದಾರಿ ಯಾವುದಯ್ಯ ವೈಕುಂಟಕ್ಕೆ, ಅಮೃತಮತಿ, ನೀಲಿ ಹಕ್ಕಿ ಇನ್ನೂ ಬಹಳಷ್ಟು ಸಿನೆಮಾ ಇದೆ. ಜೊತೆಗೆ ಅಂತರ್ರಾಷ್ಟ್ರೀಯ ಚಿತ್ರೋತ್ಸವಕ್ಕೆ ಹೋಗದಿದ್ದರೂ ಸಹ, ಅನೇಕ ಕನ್ನಡ ಸಿನೆಮಾಗಳು ಅತ್ತ್ಯುತ್ತಮವಾದ ಮಾನವೀಯ ಗುಣವುಳ್ಳ ಸಿನೆಮಾಗಳು ಕಳೆದ ನಾಲ್ಲೈದು ವರ್ಷಗಳಲ್ಲೇ ಸಾಕಷ್ಟಿವೆ, ಅದು ಯಾವುದಕ್ಕೂ ನೀಡದ ೧೦೦% ತೆರಿಗೆ ವಿನಾಯಿತಿ ಕೇವಲ ಒಂದು ಸಿನೆಮಾಗೆ ನೀಡುವುದು ನಮ್ಮೆಲ್ಲರ ಮೆಚ್ಚಿನ ಅಣ್ಣಾವ್ರ ಆಶಯಕ್ಕೆ ತದ್ವಿರುದ್ಧವಾದದ್ದು ಎಂದು ತಮಗೆ ಮನವರಿಕೆ ಮಾಡಲು ಇಚ್ಚಿಸುತ್ತೇನೆ. ಚಾರ್ಲಿ ಸಿನೆಮಾದ ನಿರ್ಮಾಪಕರೂ ಸೇರಿದಂತೆ ಕನ್ನಡದ ಯಾರೊಬ್ಬ ನಿರ್ಮಾಪಕರು ಅಣ್ಣಾವ್ರ ಆಶಯ ಮೀರಿ, ಕನ್ನಡ ಚಿತ್ರರಂಗವನ್ನು ಹೊರಗಿಟ್ಟು, ಸ್ವಾರ್ಥಿಗಳಂತೆ ತಮ್ಮ ಸಿನೆಮಾಗೆ ಮಾತ್ರ ೧೦೦% ತೆರಿಗೆ ವಿನಾಯಿತಿ ಕೊಡಬೇಕೆಂದು ಹಂಬಲಿಸಲಾರರು, ತಮ್ಮಲ್ಲಿ ಬೇಡಿಕೊಳ್ಳಲಾರರು ಎಂದು ನನ್ನ ಬಲವಾದ ನಂಬಿಕೆ. ಇದು ಕನ್ನಡ ಚಿತ್ರರಂಗದ ಏಳಿಗೆಗಾಗಿ ಶ್ರಮಿಸುತ್ತಿರುವ ಪ್ರತಿಯೊಬ್ಬ ನಿರ್ಮಾಪಕರ, ತಂತ್ರಜ್ಞ, ಶ್ರಮಿಕ ಹಾಗೂ ಕಲಾವಿದರ ಅನ್ನದ ಪ್ರಶ್ನೆಯಾಗಿರುವುದರಿಂದ ಹಾಗೂ ನಮ್ಮ ನೆಚ್ಚಿನ ಅಣ್ಣಾವ್ರು ಡಾ. ರಾಜ್ಕುಮಾರ್ ಅವರ ಆಶಯವೂ ಆಗಿರುವ ಕಾರಣದಿಂದಾಗಿ ಕನ್ನಡದ, ಕನ್ನಡದ ನೆಲದಲ್ಲೇ ಸಂಪೂರ್ಣವಾಗಿ ತಯಾರಾಗುವ ಪ್ರತೀ ಸಿನೆಮಾಗೂ ಈ ಹಿಂದೆ ಇದ್ದಂತೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡುತ್ತೀರಾ ಎಂಬ ನಂಬಿಕೆಯಿಂದ ಈ ಪತ್ರ ಬರೆಯುತ್ತಿದ್ದೇನೆ.

ಸಿನೆಮಾ ನಿರ್ದೇಶಕ

ಮಂಸೋರೆ

Live Tv

TAGGED:Basavaraja BommaiCharlie 777MansoreRakshit ShettysandalwoodTax exemptionಚಾರ್ಲಿ 777ತೆರಿಗೆ ವಿನಾಯತಿಬಸವರಾಜ ಬೊಮ್ಮಾಯಿಮಂಸೋರೆರಕ್ಷಿತ್ ಶೆಟ್ಟಿಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

Cinema Updates

Shankar Mahadevan
IPL 2025 ಸಮಾರೋಪ ಸಮಾರಂಭದಲ್ಲಿ ʻಆಪರೇಷನ್ ಸಿಂಧೂರʼ ವಿಜಯೋತ್ಸವ – ಏನೆಲ್ಲಾ ವಿಶೇಷತೆ ಇರಲಿದೆ?
12 hours ago
anant nag
ಹಿರಿಯ ನಟ ಅನಂತ್ ನಾಗ್‌ಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ
9 hours ago
shine shetty
ಯಶಸ್ಸಿಗಾಗಿ ‘ವಿಲನ್’ ಆದ ‘ಬಿಗ್ ಬಾಸ್’ ಶೈನ್ ಶೆಟ್ಟಿ
14 hours ago
Kamal Haasan
ತಮಿಳಿನಿಂದ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕನ್ನಡಿಗರ ಆಕ್ರೋಶ
15 hours ago

You Might Also Like

Operation Sindoor Logo
Latest

ಯೋಧರಿಂದಲೇ `ಆಪರೇಷನ್ ಸಿಂಧೂರ’ ಲೋಗೋ ವಿನ್ಯಾಸ

Public TV
By Public TV
19 minutes ago
Abdul Rahim
Crime

ಅಬ್ದುಲ್‌ ರಹೀಂ ಹತ್ಯೆ| ರಾತ್ರಿ ಆಸ್ಪತ್ರೆ ಮುಂದೆ ಮುಸ್ಲಿಮರ ಪ್ರತಿಭಟನೆ – ಮಂಗಳೂರಿಗೆ ಹೆಚ್ಚುವರಿ ಪೊಲೀಸರ ನಿಯೋಜನೆ

Public TV
By Public TV
23 minutes ago
Jitesh Sharma
Cricket

IPL 2025 | ಜಿತೇಶ್‌ ನಾಯಕನ ಆಟಕ್ಕೆ ಲಕ್ನೋ ಧೂಳೀಪಟ – ಕ್ವಾಲಿಫೈಯರ್-1ಗೆ ಲಗ್ಗೆಯಿಟ್ಟ ಆರ್‌ಸಿಬಿ

Public TV
By Public TV
49 minutes ago
daily horoscope dina bhavishya
Astrology

ದಿನ ಭವಿಷ್ಯ 28-05-2025

Public TV
By Public TV
1 hour ago
pakistan Mohmand Dam
Latest

ಭಾರತ ಜಲಯುದ್ಧ; ಇತ್ತ ಅಫ್ಘಾನಿಸ್ತಾನದಿಂದಲೂ ಶಾಕ್‌ ಆತಂಕ, ಪಾಕ್‌ನಲ್ಲಿ ಚೀನಾ ಅಣೆಕಟ್ಟೆ ನಿರ್ಮಾಣ ಯಾಕೆ?

Public TV
By Public TV
7 hours ago
RCB 1
Cricket

9 ವರ್ಷಗಳ ಬಳಿಕ ಕ್ವಾಲಿಫೈಯರ್‌ 1ಗೆ ಲಗ್ಗೆಯಿಟ್ಟ ಆರ್‌ಸಿಬಿ

Public TV
By Public TV
7 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?