Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭರತ್ ಶೆಟ್ಟಿ ವಿರುದ್ಧ ಕೇಸ್ – ಇನ್ಸ್‌ಪೆಕ್ಟರ್‌ ಫೋನ್‌ಕಾಲ್ ಡಿಟೇಲ್ಸ್ ಚೆಕ್ ಮಾಡಿ: ಸದನದಲ್ಲಿ ಅಶೋಕ್ ಆಗ್ರಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಭರತ್ ಶೆಟ್ಟಿ ವಿರುದ್ಧ ಕೇಸ್ – ಇನ್ಸ್‌ಪೆಕ್ಟರ್‌ ಫೋನ್‌ಕಾಲ್ ಡಿಟೇಲ್ಸ್ ಚೆಕ್ ಮಾಡಿ: ಸದನದಲ್ಲಿ ಅಶೋಕ್ ಆಗ್ರಹ

Bengaluru City

ಭರತ್ ಶೆಟ್ಟಿ ವಿರುದ್ಧ ಕೇಸ್ – ಇನ್ಸ್‌ಪೆಕ್ಟರ್‌ ಫೋನ್‌ಕಾಲ್ ಡಿಟೇಲ್ಸ್ ಚೆಕ್ ಮಾಡಿ: ಸದನದಲ್ಲಿ ಅಶೋಕ್ ಆಗ್ರಹ

Public TV
Last updated: February 15, 2024 12:31 pm
Public TV
Share
2 Min Read
R Ashoka
SHARE

– ರಾಮನ ಅವಮಾನಿಸಿದ ಶಿಕ್ಷಕಿ ಮೇಲೆ ಏಕೆ FIR ಹಾಕಿಲ್ಲ – ಭರತ್ ಶೆಟ್ಟಿ ಪ್ರಶ್ನೆ

ಬೆಂಗಳೂರು: ಮಂಗಳೂರಿನ ಪಾಂಡೇಶ್ವರ್ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಶಾಸಕ ಭರತ್ ಶೆಟ್ಟಿ (Bharat Shetty) ವಿರುದ್ಧ ಪ್ರಕರಣ ದಾಖಲಿಸಿದ ಇನ್ಸ್‌ಪೆಕ್ಟರ್‌ ಫೋನ್‌ಕಾಲ್ ಡಿಟೇಲ್ಸ್ ಪರಿಶೀಲನೆ ನಡೆಸುವಂತೆ ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashoka) ಸದನದಲ್ಲಿ ಒತ್ತಾಯಿಸಿದರು.

ಮಂಗಳೂರಿನಲ್ಲಿ (Mangaluru) ಪ್ರೌಢಶಾಲೆ ಮುಂದೆ ನಿಂತು ಜೈಶ್ರೀರಾಮ್ ಘೋಷಣೆ ಕೂಗಿ, ಕ್ರೈಸ್ತ ಧರ್ಮದ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂಬ ಆರೋಪದ ಮೇಲೆ ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ಕುರಿತು ವಿಧಾನಸಭೆಯಲ್ಲಿ ಶೂನ್ಯವೇಳೆಯಲ್ಲಿ ಶಾಸಕ ಭರತ್ ಶೆಟ್ಟಿ ಪ್ರಸ್ತಾಪಿಸಿದರು.

R Ashoka 2

ಈ ವೇಳೆ ಆರ್.ಅಶೋಕ್ ಮಾತನಾಡಿ, ಭರತ್ ಶೆಟ್ಟಿ ಸ್ಥಳದಲ್ಲೇ ಇರಲಿಲ್ಲ ಅಂದ್ಮೇಲೆ ಕೇಸ್ ಹೇಗೆ ಹಾಕ್ತಾರೆ? ಸರ್ಕಾರಕ್ಕೆ ಕಾಮನ್ ಸೆನ್ಸ್ ಇಲ್ಲ, ಯಾರ ಚಿತಾವಣೆಯಿಂದ ಕೇಸ್ ಹಾಕಿದ್ದಾರೆ? ಆ ಇನ್ಸ್‌ಪೆಕ್ಟರ್‌ನ (Police Inspector) ಅಮಾನತು ಮಾಡಿ, ಅವರ ಫೋನ್ ಕಾಲ್ ಡಿಟೇಲ್ಸ್ ತೆಗೆಯಿರಿ ಎಂದು ಆಗ್ರಹಿಸಿದರು. ಇದನ್ನೂ ಓದಿ: ಕ್ರಿಶ್ಚಿಯನ್‌ ಶಾಲೆ ಮುಂದೆ ಜೈ ಶ್ರೀರಾಮ್ ಘೋಷಣೆ – ವೇದವ್ಯಾಸ ಕಾಮತ್, ಭರತ್ ಶೆಟ್ಟಿ ಸೇರಿ ಐವರ ವಿರುದ್ಧ FIR

MNG BHARATH SHETTI AV 4

ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ ಭರತ್ ಶೆಟ್ಟಿ, ಪಾಂಡೇಶ್ವರ್ ಪೊಲೀಸ್ ಠಾಣೆಯಲ್ಲಿ ನನ್ನ ಮೇಲೆ, ವೇದವ್ಯಾಸ ಕಾಮತ್ ಮೇಲೆ ಎಫ್‌ಐಐಆರ್ ಹಾಕಿದ್ದಾರೆ. ಒಂದು ಶಾಲೆಯಲ್ಲಿ ಒಬ್ಬ ಶಿಕ್ಷಕಿ 7ನೇ ತರಗತಿ ಮಕ್ಕಳಿಗೆ ಪಾಠ ಮಾಡುವಾಗ ಶ್ರೀರಾಮನ ಬಗ್ಗೆ ಅವಹೇಳನ ಮಾಡಿದ್ದಾರೆ ಅಂತಾ ಪೋಷಕರು ಆರೋಪಿಸಿದ್ರು. ಆಗ ನಾನು ಡಿಡಿಪಿಐಗೆ ವಿಚಾರಣೆ ಮಾಡುವಂತೆ ಆಗ್ರಹಿಸಿದೆ. ಅಲ್ಲಿಂದ ನಾನು ಏರ್‌ಪೋರ್ಟ್ಗೆ ಹೋದರೆ ನಂತರ ವೇದವ್ಯಾಸ ಕಾಮತ್ ಶಾಲೆಯ ಬಳಿಗೆ ಪೋಷಕರ ಜೊತೆ ಹೋಗಿದ್ರು, ಅಲ್ಲಿ ಪ್ರತಿಭಟನೆ ನಡೆದಿದೆ. ಬಳಿಕ ಅಲ್ಲಿ ಶಿಕ್ಷಕಿಯನ್ನ ಅಮಾನತು ಮಾಡಿದ್ದಾರೆ. ಈ ವೇಳೆ ಪ್ರತಿಭಟನಾಕಾರರು ಜೈಶ್ರೀರಾಮ್ ಘೋಷಣೆ ಕೂಗಿದ್ದಾರೆ. ನಾನು ಶಾಲೆ ಬಳಿ ಇರಲೇ ಇಲ್ಲ, ಆದ್ರೂ ನನ್ನ ಮೇಲೆ ಎಫ್‌ಐಆರ್ ಆಗಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ‘ಮಿಂಟೋ’ ಆಸ್ಪತ್ರೆಯ ಕರ್ಮಕಾಂಡ – ಆಸ್ಪತ್ರೆಗೆ ಬೀಗ ಹಾಕಿ ರಸ್ತೆಯಲ್ಲೇ ರೋಗಿಗಳಿಗೆ ಚಿಕಿತ್ಸೆ

ವೆಲೆನ್ಸಿಯಾ ಸೇಂಟ್ ಜೆರೋಸಾ ಪ್ರೌಢಶಾಲೆಯ ಶಿಕ್ಷಕಿ ಮೇಲೆ ಎಫ್‌ಐಆರ್ ಏಕೆ ಹಾಕಿಲ್ಲ, ನಮ್ಮ ಮೇಲೆ ಮಾತ್ರ ಏಕೆ ಎಫ್‌ಐಆರ್ ಆಗಿದೆ. ಅದು ಜಾಮೀನು ರಹಿತ ವಾರಂಟ್ ಪ್ರಕರಣ ದಾಖಲಿಸಿದ್ದಾರೆ ಎಂದು ಆಕ್ರೋಶ ಹೊರಹಾಕಿದರು. ಈ ವೇಳೆ ಕಾಂಗ್ರೆಸ್ ಶಾಸಕರು ಹಾಗೂ ಬಿಜೆಪಿ ಶಾಸಕರ ನಡುವೆ ಮಾತಿನ ಚಕಮಕಿ ನಡೆಯಿತು. ಆಗ ಸಚಿವ ದಿನೇಶ್ ಗುಂಡೂರಾವ್, ಮಂಗಳೂರಲ್ಲಿ ಹೇಗೆ ಪ್ರಚೋದನೆ ಮಾಡಿಸ್ತಿದ್ದಾರೆ ಅಂತ ಗೊತ್ತಿದೆ. ದೂರು ಕೊಟ್ಟಿದ್ದಕ್ಕೆ ಎಫ್‌ಐಆರ್ ಆಗಿದೆ ಅದರಲ್ಲೇನು ಎಂದು ಕುಟುಕಿದರು.

ಇದಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ ಶಾಸಕ ಸುನೀಲ್ ಕುಮಾರ್, ಅಧಿವೇಶನಕ್ಕೆ ಬಂದಂತಹ ಶಾಸಕರ ಮೇಲೆ ಎಫ್‌ಐಆರ್ ಹಾಕ್ತಾರೆ ಅಂದರೆ ಹೇಗೆ? ಯಾರೋ ದೂರು ಕೊಟ್ಟರೆ ಶಾಸಕರು ಅಧಿವೇಶನದಲ್ಲಿ ಇದ್ದಾಗ ಎಫ್‌ಐಆರ್ ಹೇಗೆ ಹಾಕ್ತಾರೆ? ಶಾಸಕರ ರಕ್ಷಣೆಗೆ ನೀವು ಬರಬೇಕು ಎಂದು ಸ್ಪೀಕರ್‌ಗೆ ಮನವಿ ಮಾಡಿದರು. ಇದನ್ನೂ ಓದಿ: ಬಿಜೆಪಿಯಿಂದ 2, ಜೆಡಿಎಸ್‌ನಿಂದ 4 ಮಂದಿ ಕಾಂಗ್ರೆಸ್‌ಗೆ ಮತ ಹಾಕಲು ಸಿದ್ದರಿದ್ದಾರೆ: ಡಿಕೆಶಿ

TAGGED:Bharat Shettychristian schooldakshina kannadaJai Shri RamMangaluruVeda Vyasa Kamathಕ್ರಿಶ್ಚಿಯನ್‌ ಶಾಲೆಜೈ ಶ್ರೀರಾಮ್ಮಂಗಳೂರುವೇದವ್ಯಾಸ ಕಾಮತ್‌. ಭರತ್‌ ಶೆಟ್ಟಿ
Share This Article
Facebook Whatsapp Whatsapp Telegram

Cinema news

Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories

You Might Also Like

ಸ್ವಾಮಿನಾರಾಯಣ ದೇವಸ್ಥಾನ, ಕ್ಯಾಲಿಫೋರ್ನಿಯಾ
Latest

US ಹಿಂದೂ ದೇವಾಲಯಗಳ ಮೇಲಿನ ದಾಳಿ ಬಗ್ಗೆ ಮಾತನಾಡಲ್ಲ – ಅಮೆರಿಕದ ಸರ್ಕಾರದ USCIRF ವರದಿಗೆ ಭಾರತ ಕಿಡಿ

Public TV
By Public TV
1 hour ago
rain
Bidar

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Public TV
By Public TV
1 hour ago
CM Siddaramaiah
Bengaluru City

ಕುರ್ಚಿ ಕದನದ ಮಧ್ಯೆ ಸಚಿವರಿಗೆ ಸಿಎಂ ಡಿನ್ನರ್‌ – ಭಾಗವಹಿಸಿದ 14 ಮಂದಿ ಯಾರು?

Public TV
By Public TV
2 hours ago
Hassan Students
Districts

ಸೆಕೆಂಡ್‌ ಪಿಯು ಪರೀಕ್ಷೆಯಲ್ಲಿ ರಿಪೀಟರ್ಸ್‌ ಪ್ರಶ್ನೆಪತ್ರಿಕೆ ನೀಡಿ ಯಡವಟ್‌- ವಿದ್ಯಾರ್ಥಿಗಳಿಗೆ ಶಾಕ್‌

Public TV
By Public TV
2 hours ago
sharanuprakash patil
Bengaluru City

ನೀಟ್ ವ್ಯವಸ್ಥೆ ರಾಜ್ಯದಲ್ಲಿ ರದ್ದು ಮಾಡೋದಿಲ್ಲ: ಶರಣ ಪ್ರಕಾಶ್ ಪಾಟೀಲ್

Public TV
By Public TV
3 hours ago
KSRTC
Bengaluru City

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?