ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಶಕ್ತಿ ಯೋಜನೆ (Shakthi Yojane) ಗೆ ಸಿಎಂ ಸಿದ್ದರಾಮಯ್ಯ (Siddaramaiah) ಭಾನುವಾರ ಬೆಳಗ್ಗೆ 11 ಗಂಟೆಗೆ ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮದ ಘನ ಉಪಸ್ಥಿತಿಯನ್ನು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitaraman) ವಹಿಸಲಿದ್ದಾರೆ. ಕೇವಲ ಸಿದ್ದರಾಮಯ್ಯ ಸರ್ಕಾರದ ಮಂತ್ರಿಮಂಡಲದವರು ಮಾತ್ರವಲ್ಲ, ಡಿ.ವಿ.ಸದಾನಂದಗೌಡ (DV Sadananda Gowda), ತೇಜಸ್ವಿಸೂರ್ಯ ಸೇರಿದಂತೆ ಬಿಜೆಪಿ (BJP) ಸಂಸದರಿಗೂ ಆಹ್ವಾನ ನೀಡಲಾಗಿದೆ.
- Advertisement 2
ನಾಳೆಯ ಶಕ್ತಿ ಯೋಜನೆ ಕಾರ್ಯಕ್ರಮವನ್ನು ಹಬ್ಬದಂತೆ ಆಚರಿಸಲು ಸರ್ಕಾರ ಸಿದ್ದತೆ ಮಾಡಿದೆ. ಬಸ್ನಲ್ಲಿ ಸಿದ್ದರಾಮಯ್ಯ ನಾಲ್ಕು ಕಿಲೋಮೀಟರ್ವರೆಗೂ ರೌಂಡ್ಸ್ ಹಾಕಲಿದ್ದು, ಬಿಎಂಟಿಸಿಯ ಬಿಎ-6 ಬಸ್ನಲ್ಲಿ ಸಂಚರಿಸಲಿದ್ದಾರೆ. ನಾಲ್ಕು ಸಾರಿಗೆ ನಿಗಮಗಳ ಎಂಟು ಬಸ್ಗಳಿಗೆ ಸಿಎಂ ಚಾಲನೆ ನೀಡಲಿದ್ದಾರೆ. ಒಂದು ನಿಗಮದಿಂದ ಎರಡು ಬಸ್ಗಳಿಗೆ ವಿಧಾನಸೌಧ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ. ಸಿಎಂ ಹಾಗೂ ಮಂತ್ರಿಮಂಡಲ ವಿಧಾನಸೌಧ ಟು ವಿಧಾನಸೌಧಕ್ಕೆ ಬಸ್ನಲ್ಲಿ ಸಂಚಾರಿಸಲಿದ್ದಾರೆ. ಇದನ್ನೂ ಓದಿ: ಆರ್ಎಸ್ಎಸ್ ಸಂಸ್ಥೆಗಳಿಗೆ ಸರ್ಕಾರ ಮಂಜೂರು ಮಾಡಿದ್ದ ಭೂಮಿ ವಾಪಸ್ ಪಡೆಯುತ್ತೇವೆ: ದಿನೇಶ್ ಗುಂಡೂರಾವ್
- Advertisement 3
- Advertisement 4
ವಿಧಾನಸೌಧ-ಎಂಎಸ್ ಬಿಲ್ಡಿಂಗ್-ಮೈಸೂರು ಬ್ಯಾಂಕ್ ಸರ್ಕಲ್-ಮೆಜೆಸ್ಟಿಕ್- ವಿಧಾನಸೌಧಕ್ಕೆ ಬಸ್ ಸಂಚರಿಸಲಿದೆ. ಪ್ರಥಮ ಫ್ರೀ ಟಿಕೆಟ್ ಸಿಎಂ ಸಿದ್ದರಾಮಯ್ಯ ವಿತರಿಸಲಿದ್ದಾರೆ. ಶಕ್ತಿ ಯೋಜನೆ ಚಾಲನೆ ಸಂದರ್ಭದಲ್ಲಿ ಮಾಡೆಲ್ ಶಕ್ತಿ ಸ್ಮಾರ್ಟ್ ಕಾರ್ಡ್ ಪರಿಚಯಿಸಲು ಪ್ಲಾನ್ ಮಾಡಲಾಗಿದೆ. ಮಾಡೆಲ್ ಶಕ್ತಿ ಸ್ಮಾರ್ಟ್ ಕಾರ್ಡ್ (Smart Card) ನಲ್ಲಿ ಶಕ್ತಿ ಯೋಜನೆ ಅಂತಾ ಹೆಸರು, ಲೋಗೋ, ಮಹಿಳೆಯ ಹೆಸರು, ವಿಳಾಸ, ಬಾರ್ ಕೋಡ್ ಇರುತ್ತದೆ. ಈ ಸಂದರ್ಭದಲ್ಲಿ ಶಕ್ತಿ ಲೋಗೋ, ಲಾಂಚನ ಅನಾವರಣ ಮಾಡಲಿದ್ದಾರೆ.
ಉಚಿತ ಟಿಕೆಟ್ (Free Bus Ticket For Women) ಜೊತೆಗೆ ಮಹಿಳೆಯರಿಗೆ ಗುಲಾಬಿ (Rose) ಹೂವು ಕೊಡಬಹುದು. ಸಿಎಂ ಕೂಡ ಖುದ್ದು ಬೆಂಗಳೂರಿನಲ್ಲಿ ಮಹಿಳೆಯರಿಗೆ ಟಿಕೆಟ್ ವಿತರಿಸಿದರೆ ಜಿಲ್ಲೆಗಳಲ್ಲಿಯೂ ಸಚಿವರುಗಳು, ಶಾಸಕರು ಟಿಕೆಟ್ ವಿತರಿಸುವ ಮೂಲಕ ಲೋಕಾರ್ಪಣೆ ಮಾಡಲಿದ್ದಾರೆ. ಜೊತೆಗೆ ಮಹಿಳೆಯರಿಗೆ ಗುಲಾಬಿ ಹೂವು ನೀಡಲಿದ್ದಾರೆ. ಜಿಲ್ಲಾ ಕೇಂದ್ರದ ಬಸ್ ನಿಲ್ದಾಣದ ಸಮಾರಂಭಕ್ಕೆ ಒಂದು ಲಕ್ಷ, ತಾಲೂಕು ಕೇಂದ್ರಕ್ಕೆ 25 ಸಾವಿರ ವೆಚ್ಚ ಮಾಡೋಕೆ ಅನುಮೋದನೆ ಮಾಡಲಿದ್ದಾರೆ.