Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚುನಾವಣೆ ಬಳಿಕ ಸುಮಲತಾ ಭೇಟಿ ಆದ್ರೆ ಪಕ್ಷ ವಿರೋಧಿ ಚಟುವಟಿಕೆ ಹೇಗಾಗುತ್ತೆ: ಚಲುವರಾಯ ಸ್ವಾಮಿ ಪ್ರಶ್ನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಚುನಾವಣೆ ಬಳಿಕ ಸುಮಲತಾ ಭೇಟಿ ಆದ್ರೆ ಪಕ್ಷ ವಿರೋಧಿ ಚಟುವಟಿಕೆ ಹೇಗಾಗುತ್ತೆ: ಚಲುವರಾಯ ಸ್ವಾಮಿ ಪ್ರಶ್ನೆ

Bengaluru City

ಚುನಾವಣೆ ಬಳಿಕ ಸುಮಲತಾ ಭೇಟಿ ಆದ್ರೆ ಪಕ್ಷ ವಿರೋಧಿ ಚಟುವಟಿಕೆ ಹೇಗಾಗುತ್ತೆ: ಚಲುವರಾಯ ಸ್ವಾಮಿ ಪ್ರಶ್ನೆ

Public TV
Last updated: May 3, 2019 5:50 pm
Public TV
Share
2 Min Read
kpcc siddaramaiah 1
SHARE

ಬೆಂಗಳೂರು: ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಬೆನ್ನಲ್ಲೇ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಅವರೊಂದಿಗೆ ಡಿನ್ನರ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ಮಾಜಿ ಸಚಿವ ಚಲುವರಾಯಸ್ವಾಮಿ ಅವರು ಇಂದು ಕೆಪಿಸಿಸಿ ಕಚೇರಿಗೆ ಆಗಮಿಸಿದ್ದರು. ಈ ವೇಳೆ ಸುಮಲತಾ ಅವರ ಭೇಟಿಯ ಕುರಿತು ದಿನೇಶ್ ಗುಂಡೂರಾವ್ ಅವರಿಗೆ ವಿವರಣೆ ನೀಡಿ ಸ್ಪಷ್ಟನೆ ನೀಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಇಂದು ಚಲುವರಾಯ ಸ್ವಾಮಿ ಅವರಿಗೆ ತುರ್ತು ಬುಲಾವ್ ನೀಡಿದ್ದರು. ಇದರಂತೆ ಚಲುವರಾಯ ಸ್ವಾಮಿ ಅವರು ಕಚೇರಿಗೆ ಆಗಮಿಸಿದ್ದರು. ಈ ವೇಳೆ ಸಚಿವ ಜಮೀರ್ ಅಹಮ್ಮದ್ ಅವರು ಹಾಜರಿದ್ದರು.

Dinesh Gundu Rao

ಚಲುವರಾಯಸ್ವಾಮಿ ಸಮರ್ಥನೆ: ಈ ವೇಳೆ ಸುಮಲತಾ ಅವರ ಭೇಟಿಯ ಬಗ್ಗೆ ದಿನೇಶ್ ಗುಂಡೂರಾವ್ ಅವರು ವಿವರಣೆ ಪಡೆದಿದ್ದಾರೆ. ಸುಮಲತಾ ಜೊತೆ ಅವರ ಭೇಟಿ ಯಾಕೆ? ಸಭೆಗೆ ಹೋಗಿದ್ದ ಕಾರಣವೇನು? ಸಭೆಯಲ್ಲಿ ಏನೆಲ್ಲಾ ಚರ್ಚೆ ನಡೆದಿತ್ತು? ಎಂದು ಪ್ರಶ್ನೆ ಮಾಡಿದ್ದಾರೆ. ದಿನೇಶ್ ಗುಂಡೂರಾವ್ ಅವರ ಪ್ರಶ್ನೆಗಳಿಗೆ ಉತ್ತರಿಸಿರುವ ಚಲುವರಾಯ ಸ್ವಾಮಿ ಅವರು, ಚುನಾವಣೆ ಬಳಿಕ ನಾವು ಸುಮಲತಾ ಅವರನ್ನ ಭೇಟಿ ಮಾಡಿದ್ದರಲ್ಲಿ ತಪ್ಪು ಏನಿದೆ? ಅಲ್ಲದೇ ಪಕ್ಷ ವಿರೋಧಿ ಚಟುವಟಿಕೆ ಹೇಗೆ ಆಗುತ್ತೆ? ಅಂದು ಇಂಡವಾಳು ಸಚ್ಚಿದಾನಂದ ಅವರ ಹುಟ್ಟುಹಬ್ಬ ಇತ್ತು. ಈ ಕಾರಣದಿಂದ ಸಭೆಗೆ ಹಾಜರಾಗಿದ್ದು, ಸಭೆಯಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ. ಚುನಾವಣೆಯ ಆರಂಭದಿಂದಲೂ ನಾವು ಜೆಡಿಎಸ್‍ನಿಂದ ದೂರವೇ ಉಳಿದಿದ್ದೇವೆ. ಈ ಬಗ್ಗೆ ನಿಮ್ಮ ಗಮನಕ್ಕೂ ಮೊದಲೇ ತಂದಿದ್ದೇವೆ. ಏನು ಸಮಸ್ಯೆ ಆಗಿತ್ತು ಎನ್ನುವುದನ್ನು ತಿಳಿಸಿದ್ದೇವೆ. ನಾವು ಯಾವುದೇ ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ. ಸುಮಲತಾ ಪರ ನಾವು ಚುನಾವಣೆಯಲ್ಲಿ ಕೆಲಸ ಮಾಡಿಲ್ಲ ಎಂದು ಮನವರಿಕೆ ಮಾಡಿದ್ದಾರೆ ಎನ್ನಲಾಗಿದೆ.

ಈ ವೇಳೆ ಸಿಎಂ ಹೈಕಮಾಂಡ್‍ಗೆ ದೂರು ನೀಡಿರುವ ಬಗ್ಗೆ ದಿನೇಶ್ ಗುಂಡೂರಾವ್ ಪ್ರಸ್ತಾಪ ಮಾಡಿದ್ದು, ಇದಕ್ಕೂ ಉತ್ತರಿಸಿದ ಚಲುವರಾಯಸ್ವಾಮಿ ಅವರು, ಮಂಡ್ಯದಲ್ಲಿ ಕುಮಾರಸ್ವಾಮಿ ಏನಾದ್ರು ಕಾಂಗ್ರೆಸ್ ಪಕ್ಷವನ್ನ ಬೆಳೆಸ್ತಾರಾ? ನಾವೇ ತಾನೇ ಪಕ್ಷದ ಕಾರ್ಯಕರ್ತರಿಗೆ ಉತ್ತರ ಕೊಡಬೇಕು. ಅದಕ್ಕೆ ಜೆಡಿಎಸ್‍ನಿಂದ ಅಂತರ ಕಾಯ್ದುಕೊಂಡಿದ್ದೆವು ಅಷ್ಟೇ ಎಂದು ತಿಳಿಸಿದ್ದಾರೆ.

CM HDK 1

ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಚಲುವರಾಯಸ್ವಾಮಿ ಅವರು, ಪಕ್ಷದ ಅಧ್ಯಕ್ಷರನ್ನು ಭೇಟಿ ಮಾಡಿ ವಿಡಿಯೋ ಬಗ್ಗೆ ವಿವರಣೆ ನೀಡಿದ್ದೇವೆ. ನಮ್ಮದು ರಾಷ್ಟ್ರೀಯ ಪಕ್ಷವದ್ದರಿಂದ ಮುಂದೇ ಏನು ಮಾಡಬೇಕು ಎಂದು ನಾಯಕರು ತೀರ್ಮಾನ ಮಾಡುತ್ತಾರೆ. ಆದರೆ ವಿಡಿಯೋ ಈಗ ಏಕೆ ಬಿಡುಗಡೆ ಆಗಿದೆ ಎನ್ನುವುದು ತಿಳಿದಿಲ್ಲ. ಪೊಲೀಸರಿಗೆ ಯಾರು ಒತ್ತಡ ಹಾಕಿದ್ದರೋ, ಪೊಲೀಸರು ಹೋಟೆಲ್ ಅವರ ಮೇಲೆ ಏನು ಒತ್ತಡ ಹಾಕಿದ್ದರೋ? ಚುನಾವಣೆ ಮುನ್ನ ವಿಡಿಯೋ ಬಿಡುಗಡೆ ಆಗಿದ್ದರೆ ಹೆಚ್ಚಿನ ಪ್ರಭಾವ ಉಂಟಾಗುತಿತ್ತು. ಇದರೆ ಪ್ರಭಾವ ಏನು ಇಲ್ಲ ಎಂದು ಹೇಳಿದರು.

ಇದೇ ವೇಳೆ ಶಾಸಕ ಸುರೇಶ್ ಗೌಡ ಅವರ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿ, ನಾನು 25 ವರ್ಷದಿಂದ ರಾಜಕಾರಣ ಮಾಡಿದ್ದೇನೆ. ಯಾರ ವಿರುದ್ಧವೂ ಕ್ಷುಲ್ಲಕವಾಗಿ ಮಾತನಾಡಿಲ್ಲ. ನಾಗಮಂಗಲ ಕ್ಷೇತ್ರದಲ್ಲಿ ಸೋತಿದ್ದೇವೆ, ಗೆದ್ದಿದ್ದೇವೆ ನಾನು ಎಂದೂ ಆ ರೀತಿ ಒಬ್ಬರ ವಿರುದ್ಧ ಕೀಳು ಮಟ್ಟದ ಪದ ಬಳಕೆ ಮಾಡಲ್ಲ. ಅವರು ಮಾತನಾಡಿಕೊಳ್ಳಲಿ ಬಿಡಿ. ನಾವು ಸುಮಲತಾ ಪರ ಕೆಲಸ ಮಾಡಿಲ್ಲ, ಅಂತರ ಕಾಯ್ದುಕೊಂಡಿದ್ದೇವೆ. ಮೈತ್ರಿ ಅಭ್ಯರ್ಥಿ ವಿಚಾರದಲ್ಲೂ ಮೌನವಹಿಸಿದ್ದೇವೆ ಬಿಟ್ಟರೆ ನಾವು ಎಲ್ಲೂ ಅಪಪ್ರಚಾರ ಮಾಡಿಲ್ಲ ಎಂದರು.

TAGGED:Chaluvarasaswamydinesh gundu raoLok Sabha electionmandyaPublic TVSumalathaಚಲುವರಾಯಸ್ವಾಮಿದಿನೇಶ್ ಗುಂಡೂರಾವ್ಪಬ್ಲಿಕ್ ಟಿವಿಮಂಡ್ಯಲೋಕಸಭಾ ಚುನಾವಣೆಸುಮಲತಾ
Share This Article
Facebook Whatsapp Whatsapp Telegram

Cinema news

AMB Cinemas 2
ಬೆಂಗಳೂರಿನ ಕಪಾಲಿ ಥಿಯೇಟರ್ ಜಾಗದಲ್ಲಿ ಮಹೇಶ್ ಬಾಬು `ಎಎಂಬಿ ಸಿನಿಮಾಸ್’.. ಇದರ ಸ್ಪೆಷಾಲಿಟಿ ಏನು?
Bengaluru City Cinema Latest Main Post South cinema
Rajanikanth
ಸಂಕ್ರಾಂತಿ ದಿನವೇ ಅಭಿಮಾನಿಗಳಿಗೆ ಗುಡ್‌ನ್ಯೂಸ್ ಕೊಟ್ಟ ತಲೈವಾ.!
Cinema Latest South cinema Top Stories
Samruddhi Ram
ಗ್ಯಾಮ್ಲಿಂಗ್‌ನಲ್ಲಿ ಹಣ ಕಳೆದುಕೊಂಡೆ, 3 ವರ್ಷಗಳಿಂದ ಮನೆಯಿಂದಾಚೆಯಿದ್ದೀನಿ, ಇವರಿಂದ ಬದುಕೋಕೆ ಆಗ್ತಿಲ್ಲ: ಸಮೃದ್ಧಿ ರಾಮ್‌ ಕಣ್ಣೀರು
Bengaluru City Cinema Districts Karnataka Latest Main Post Sandalwood
Pratibha Shetty Samriddhi Ram Karunya Ram
ಮೋಸ ಮಾಡಿದವ್ರು ಉದ್ಧಾರ ಆಗಲ್ಲ – ಸಮೃದ್ಧಿ ರಾಮ್‌ ವಿರುದ್ಧ ಪ್ರತಿಭಾ ಶೆಟ್ಟಿ ಗರಂ
Bengaluru City Cinema Crime Karnataka Latest States Top Stories

You Might Also Like

02 14
Districts

Video | ಅಗ್ನಿ ಅವಘಡ – ಶೀಟ್‌ ಮನೆಯಲ್ಲಿದ್ದ 5 ಲಕ್ಷ ನಗದು ಭಸ್ಮ!

Public TV
By Public TV
4 hours ago
Delhi Weather 1
Latest

ಬೆಚ್ಚಿ ಬೀಳಿಸಿದ ವರದಿ – ದೆಹಲಿಯಲ್ಲಿ ಒಂದೇ ವರ್ಷ 9,000 ಕ್ಕೂ ಹೆಚ್ಚು ಸಾವು!

Public TV
By Public TV
4 hours ago
Mandya Sankranti Fire
Districts

ಸಂಕ್ರಾಂತಿ ವೇಳೆ ಕಿಚ್ಚು ಹಾಯಿಸುವಾಗ ಯಡವಟ್ಟು – ಜನರ ಮೇಲೆ ಎಗರಿದ ಎತ್ತುಗಳು, ಇಬ್ಬರಿಗೆ ಗಾಯ

Public TV
By Public TV
4 hours ago
Dinesh Gundu Rao 1
Bengaluru City

ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮದಲ್ಲಿ ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

Public TV
By Public TV
4 hours ago
Harleen Deol
Cricket

ಡಿಯೋಲ್‌ ಡಿಚ್ಚಿ, ಮುಂಬೈ ಮೇಲೆ ವಾರಿಯರ್ಸ್‌ ಸವಾರಿ – ಹ್ಯಾಟ್ರಿಕ್‌ ಸೋಲಿನ ಬಳಿಕ ಗೆದ್ದ ಯುಪಿ

Public TV
By Public TV
5 hours ago
01 14
Big Bulletin

ಬಿಗ್‌ ಬುಲೆಟಿನ್‌ 15 January 2026 ಭಾಗ-1

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?