ಶಾಲೆಗೆ ಮದ್ಯ ಸೇವಿಸಿ ಬಂದ ಶಿಕ್ಷಕ – ವಿದ್ಯಾರ್ಥಿ ಮೇಲೆ ಬ್ಯಾಟ್‍ನಿಂದ ಹಲ್ಲೆ

Public TV
1 Min Read
school

ರಾಯ್‍ಪುರ: ಮದ್ಯ ಸೇವಿಸಿ ಶಾಲೆಗೆ ಬಂದ ಶಿಕ್ಷಕರೊಬ್ಬರು ವಿದ್ಯಾರ್ಥಿಗಳಿಗೆ ಕ್ರಿಕೆಟ್ ಬ್ಯಾಟ್‍ನಿಂದ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಛತ್ತೀಸ್‍ಗಢದ ಜಶ್‍ಪುರದಲ್ಲಿ ನಡೆದಿದೆ.

ಸಾಮಾನ್ಯವಾಗಿ ತಂದೆ, ತಾಯಿ ಬಳಿಕ ವಿದ್ಯೆ ಕಲಿಸುವ ಗುರುವಿಗೆ ಪೂಜ್ಯ ಸ್ಥಾನವನ್ನು ನೀಡಲಾಗುತ್ತದೆ. ಮಕ್ಕಳು ತಪ್ಪು ಮಾಡಿದಾಗ ತಿದ್ದಿಬುದ್ದಿ ಹೇಳಬೇಕಾದ ಗುರುವೇ ಶಾಲೆಗೆ ಮದ್ಯ ಸೇವಿಸಿ ಬರುವುದು ವಿಪರ್ಯಾಸ ಎಂದೇ ಹೇಳಬಹುದು. ಇದನ್ನೂ ಓದಿ: ನೈಸ್ ರಸ್ತೆಯಲ್ಲಿ ವ್ಯಕ್ತಿ ಸಹಿತ ಕಾರು ಸುಟ್ಟು ಕರಕಲು

Alcoholic Drink copy

ಮಾರ್ಚ್ 10 ರಂದು ಜಶ್‍ಪುರದ ಶಾಲೆವೊಂದರಲ್ಲಿ ಶಿಕ್ಷಕ ದಿನೇಶ್ ಕುಮಾರ್ ಲಕ್ಷ್ಮೆ ಮದ್ಯ ಸೇವಿಸಿ ಶಾಲೆಗೆ ಬಂದಿದ್ದರು. ಈ ವೇಳೆ ಮದ್ಯದ ಅಮಲಿನಲ್ಲಿದ್ದ ದಿನೇಶ್ ಶಾಲಾ ಆವರಣಕ್ಕೆ ಆಗಮಿಸುತ್ತಿದ್ದಂತೆಯೇ ಕ್ರಿಕೆಟ್ ಬ್ಯಾಟ್‍ನಿಂದ ಸುಮ್ಮನೆ ನಿಂತಿದ್ದ ವಿದ್ಯಾರ್ಥಿಗಳಿಗೆ ಥಳಿಸಿದ್ದಾರೆ. ಇದೀಗ ಈ ಕುರಿತಂತೆ ತನಿಖೆ ನಡೆಸಲಾಗುತ್ತಿದ್ದು, ಶಿಕ್ಷಕ ದಿನೇಶ್ ಕುಮಾರ್ ಅವರನ್ನು ಜಿಲ್ಲಾಧಿಕಾರಿಗಳು ಶನಿವಾರ ಕೆಲಸದಿಂದ ಅಮಾನತುಗೊಳಿಸಿದ್ದಾರೆ. ಇದನ್ನೂ ಓದಿ: ಗೊರಗುಂಟೆಪಾಳ್ಯ ಫ್ಲೈಓವರ್‌ನಲ್ಲಿ ರಾತ್ರಿ ಸಂಚಾರ ಬಂದ್

Share This Article
Leave a Comment

Leave a Reply

Your email address will not be published. Required fields are marked *