ಬೆಳ್ಳಂಬೆಳಗ್ಗೆ ಬಿಎಸ್‍ವೈ ನಿವಾಸಕ್ಕೆ ದೌಡಾಯಿಸಿದ ಸಿಎಂ ಬೊಮ್ಮಾಯಿ

Public TV
1 Min Read
BSY BASAVARAJ BOMMAI

ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನಿವಾಸಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ದೌಡಾಯಿಸಿದ್ದು, ಕುತೂಹಲಕ್ಕೀಡು ಮಾಡಿತ್ತು.

BSY BOMMAI

ಆದರೆ ಬಿಎಸ್‍ವೈ ಹಾಗೂ ಸಿಎಂ ಭೇಟಿ ಹಿಂದೆ ಮೋದಿ ಆಗಮನದ ಚರ್ಚೆ ಇದ್ದಿರುವುದಾಗಿ ಮೂಲಗಳು ತಿಳಿಸಿವೆ. ಸೆಪ್ಟೆಂಬರ್ 2 ಕ್ಕೆ ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮೋದಿ ಸಮಾವೇಶದ ಕುರಿತು ಯಡಿಯೂರಪ್ಪರ ಜೊತೆ ಸಿಎಂ ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

MODI 1 1

ಸಮಾವೇಶಕ್ಕೆ ಎರಡು ಲಕ್ಷ ಜನ ಸೇರಿಸಿ ಯಶಸ್ವಿಗೊಳಿಸುವ ಬಗ್ಗೆ ಚರ್ಚಿಸಲಾಗಿದೆ. ಸೆಪ್ಟೆಂಬರ್ 8 ರಂದು ನಡೆಯಲಿರುವ ಜೊತೆಗೆ ದೊಡ್ಡಬಳ್ಳಾಪುರ ಜನೋತ್ಸವ ಸಮಾವೇಶದ ಬಗ್ಗೆಯೂ ಚರ್ಚಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಜನೋತ್ಸವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಆದಾಯಕ್ಕಾಗಿ ಕಮ್ಯುನಿಸ್ಟ್ ಸರ್ಕಾರ ಹಿಂದೂ ದೇಗುಲವನ್ನು ವಶಪಡಿಸಿಕೊಳ್ತಿದೆ: ಸುಪ್ರಿಂಕೋರ್ಟ್ ಮಾಜಿ ಜಡ್ಜ್ ವೀಡಿಯೋ ವೈರಲ್

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *