Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2023ರ ಚುನಾವಣೆಯಲ್ಲಿ ಭಾಜಪ ಕಮಲ ಅರಳಲಿದೆ: ಬಸವರಾಜ ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 2023ರ ಚುನಾವಣೆಯಲ್ಲಿ ಭಾಜಪ ಕಮಲ ಅರಳಲಿದೆ: ಬಸವರಾಜ ಬೊಮ್ಮಾಯಿ

Bengaluru City

2023ರ ಚುನಾವಣೆಯಲ್ಲಿ ಭಾಜಪ ಕಮಲ ಅರಳಲಿದೆ: ಬಸವರಾಜ ಬೊಮ್ಮಾಯಿ

Public TV
Last updated: March 10, 2022 9:36 pm
Public TV
Share
2 Min Read
BASAVARJ BOMMAI
SHARE

ಬೆಂಗಳೂರು: 2024 ಚುನಾವಣೆ ನಮ್ಮ ಮುಂದೆ ಇದೆ. ಅಂತೆಯೇ ಜವಾಬ್ದಾರಿಯೂ ಬಹಳಷ್ಟಿದೆ. ಈಗ ಕರ್ನಾಟಕವನ್ನು 2023ರಲ್ಲಿ ಮತ್ತೊಮ್ಮೆ ಭಾಜಪದ ಕಮಲವನ್ನು ಅರಳಿಸುವ ಸಮಯ ಬಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.

ಅವರು ಇಂದು ಐದು ರಾಜ್ಯಗಳಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿರುವ ಹಿನ್ನೆಲೆಯಲ್ಲಿ ಪಕ್ಷದ ಕಚೇರಿಗೆ ಭೇಟಿ ನೀಡಿ ವಿಜಯೋತ್ಸವ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ನಮ್ಮೆಲ್ಲರ ಜವಾಬ್ದಾರಿ ಹೆಚ್ಚಾಗಲಿದೆ. ಇನ್ನಷ್ಟು ಚುರುಕಾಗಿ ಜಾಗೃತವಾಗಿ ಮತದಾರರ ಬಳಿಗೆ ಹೋಗಿ ಬಜೆಟ್‌ನಲ್ಲಿ ಘೋಷಣೆ ಮಾಡಿರುವ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಬೇಕಿದೆ. ಅಧಿಕಾರಿಗಳಿಗೆ ನಾನು ಈಗಾಗಲೇ ಸೂಚನೆಯನ್ನು ನೀಡಿದ್ದೇನೆ. ಈ ತಿಂಗಳಿನೊಳಗೆ ಕಡತಗಳು ಸಿದ್ಧವಾಗಬೇಕು. ಏಪ್ರಿಲ್ ತಿಂಗಳ ಒಳಗೆ ಬಜೆಟ್‍ನಲ್ಲಿ ಏನೇನು ಕಾರ್ಯಕ್ರಮಗಳನ್ನು ಇಲಾಖೆಗಳಿಗೆ ಕೊಟ್ಟಿದ್ದೇವೆ ಅವೆಲ್ಲವುಗಳಿಗೆ ಕಾರ್ಯಾದೇಶ ಆಗಬೇಕು ಎಂದು ಸೂಚಿಸಲಾಗಿದೆ. ಕೂಡಲೇ ಎಲ್ಲಾ ಯೋಜನೆಗಳನ್ನು ಪ್ರಾರಂಭಿಸಿ, ಅನುಷ್ಠಾನಗೊಳಿಸುತ್ತೇವೆ. ಕಟ್ಟಕಡೆಯ ವ್ಯಕ್ತಿಗೂ ಯೋಜನೆಗಳನ್ನು ತಲುಪಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು. ಇದನ್ನೂ ಓದಿ: ಕಚ್ಚಾ ತೈಲ ಬೆಲೆಯಲ್ಲಿ ಭಾರೀ ಇಳಿಕೆ

MODI YOGI

ರಾಜ್ಯ ಪ್ರವಾಸ: ಯೋಜನೆಗಳ ಪ್ರಚಾರವನ್ನೂ ಬೂತ್ ಮಟ್ಟದಿಂದ ಕಾರ್ಯಕರ್ತರು ಮಾಡಬೇಕು. ಅವುಗಳ ಪ್ರಯೋಜನ ಪಡೆದುಕೊಳ್ಳುವಂತೆ ಮಾಡಬೇಕು. ಭಾಜಪದ ಸದೃಢ ಸಂಘಟನೆ ಮತ್ತು ನಮ್ಮ ಸರ್ಕಾರದ ಜನಪರ ಕಾರ್ಯಕ್ರಮಗಳು ಮುಂದಿನ ಚುನಾವಣೆಯಲ್ಲಿ ಬಳಕೆ ಮಾಡಿ ಜನರ ಹೃದಯವನ್ನು ಗೆದ್ದು 2023ರ ಚುನಾವಣೆಯಲ್ಲಿ ಭಾಜಪದ ಕಮಲವನ್ನು ಅರಳಿಸಿ, ಮುಂದಿನ 5 ವರ್ಷ ಸುಭಿಕ್ಷವಾದ ನಾಡನ್ನು ಕಟ್ಟುವ ಸಂಕಲ್ಪವನ್ನು, ಪಣವನ್ನು ತೊಟ್ಟಿದ್ದೇವೆ. ಇದನ್ನೂ ಓದಿ: 12 ಸಾವಿರ ರಷ್ಯಾ ಸೈನಿಕರ ಸಾವು – 20 ಲಕ್ಷ ಉಕ್ರೇನಿಯನ್ನರು ಪಲಾಯನ

bjp - congress

ಅಧಿವೇಶನ ಮುಗಿದ ಕೂಡಲೇ ನಮ್ಮ ನಾಯಕರಾದ ಯಡಿಯೂರಪ್ಪನವರ ಸಮೇತ, ಕೇಂದ್ರದ ನಾಯಕರ ಜೊತೆ ಇಡೀ ರಾಜ್ಯವನ್ನು ಸುತ್ತಿ ಭಾಜಪದ ನೆಲೆಯನ್ನು ಇನ್ನಷ್ಟು ಗಟ್ಟಿಗೊಳಿಸುವ ಕೆಲಸ ಮಾಡುತ್ತೇವೆ. ಹೊಸ ಹೊಸ ಕ್ಷೇತ್ರಗಳಲ್ಲಿ ಭಾಜಪವನ್ನು ಆರಿಸುವವರೆಗೂ ಬಿಡುವುದಿಲ್ಲ. ಈಗಾಗಲೇ ಕಾರ್ಯಪ್ರವೃತ್ತವಾಗಿದ್ದೇವೆ. ಅದಕ್ಕಾಗಿ ಸರ್ಕಾರದ ವತಿಯಿಂದ ಎಲ್ಲಾ ಜನಪರವಾದ ಕಾರ್ಯಕ್ರಮಗಳನ್ನು ಮಾಡಲು ನಾವು ಸನ್ನದ್ಧರಾಗಿದ್ದೇವೆ. ಪಕ್ಷದ ಕಾರ್ಯಕರ್ತರು ಕೂಡ ಪಕ್ಷದ ಸಂಘಟನೆ, ಬಲಪಡಿಸುವುದು, ಭಾಜಪವನ್ನು ಅಧಿಕಾರಕ್ಕೆ ತರಲು ಎಲ್ಲಾ ಕಾರ್ಯಕ್ರಮಗಳಿಗೆ ಶಕ್ತಿ ತುಂಬಲು ಸನ್ನದ್ಧರಾಗಬೇಕೆಂದು ಕರೆ ನೀಡಿದರು.

modi yogi1

ಕರ್ನಾಟಕದಲ್ಲಿ ಕಾಂಗ್ರೆಸ್ ಮುಳುಗಲಿದೆ: ದೇಶದಲ್ಲಿ ಕಾಂಗ್ರೆಸ್ ಮುಳುಗಿಹೋಗಿದೆ. ಮುಂದೆ ಕರ್ನಾಟಕದಲ್ಲಿಯೂ ಮುಳುಗಲಿದೆ. ಕಾಂಗ್ರೆಸ್ ಪಕ್ಷದ ಅಸ್ತಿತ್ವಕ್ಕಾಗಿ ಹೋರಾಡಬೇಕಿದೆ, ರಾಷ್ಟ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ದಿಕ್ಕು ತೋಚದ, ದಿಕ್ಕಾಪಾಲಾಗಿರುವ ಧೂಳೀಪಟವಾಗಿರುವ ಪಕ್ಷ. ಇಡೀ ರಾಷ್ಟ್ರದಲ್ಲಿ ತನ್ನ ಅಸ್ತಿತ್ವವನ್ನು ಕಳೆದುಕೊಂಡಿದೆ. ಭಾಜಪ ದೇಶದ ಭವಿಷ್ಯಕ್ಕಾಗಿ ಹೋರಾಟ ಮತ್ತು ಕೆಲಸವನ್ನು ಮಾಡುತ್ತಿದ್ದೇವೆ. ಕಾಂಗ್ರೆಸ್‌ನವರು ತಮ್ಮ ಪಕ್ಷದ ಅಸ್ತಿತ್ವಕ್ಕಾಗಿ ಹೋರಾಟ ಮಾಡುತ್ತಾರೆ. ಇದು ವ್ಯತ್ಯಾಸ. ನಾಲ್ಕು ರಾಜ್ಯಗಳಲ್ಲಿ ವಿಜಯ ಗಳಿಸಿದೆ. ಮಂದೆ ಗುಜರಾತ್, ಪೂರ್ವದಲ್ಲಿ ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ, ಕರ್ನಾಟಕದಲಿ ಭಾಜಪ ಹುಟ್ಟುವುದು ಅಷ್ಟೇ ಸತ್ಯ ಎಂದರು.

modi yogi
ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರ ನೋಂದಣಿ ಮಾಡಿಸುವವರಿಗೆ ಫ್ರಿಡ್ಜ್, ಟಿವಿಯನ್ನು ಸಿದ್ಧರಾಮಯ್ಯನವರ ಕ್ಷೇತ್ರ ಬಾದಾಮಿಯಲ್ಲಿ ನೀಡಲಾಗಿದೆ. ಕಾಂಗ್ರೆಸ್‌ನವರಿಗೆ  ತೆಗೆದುಕೊಳ್ಳುವುದು ಕೊಡುವುದು ಕರಗತವಾಗಿರುವಂಥದ್ದು. ಯಾವ ಕೆಲಸವೂ ಆಗುವುದಿಲ್ಲ. ಈಗೇನು ಕೊಡುತ್ತಾರೋ, ಅದಕ್ಕೆ ಹತ್ತುಪಟ್ಟು ಅಧಿಕಾರಕ್ಕೆ ಬಂದ ನಂತರ ತೆಗೆದುಕೊಳ್ಳುತ್ತಾರೆ. ಈ ದುಸ್ಥಿತಿಯಲ್ಲಿ ಅವರಿದ್ದಾರೆ. ಅಧಿಕಾರಕ್ಕೆ ಬರುವುದಿಲ್ಲ ಎಂದು ಗೊತ್ತಿದ್ದೇ, ಬೇಜಾವಾಬ್ದಾರಿಯಿಂದ ಬೇಕಾದ್ದನ್ನು ಹೇಳಿದ್ದರು. ನಮ್ಮ ಕಾಂಗ್ರೆಸ್ ನಾಯಕರು ಸರ್ಕಾರ ಮಾಡಲು ಗೋವಾಕ್ಕೆ ತೆರಳಿದ್ದಾರೆ. ಪರಿಸ್ಥಿತಿ ಬೇರೆನೇ ಆಗಿದೆ. ಅವರ ಕಾಲ್ಗುಣ ಸರಿಯಿಲ್ಲ ಎಂದರು.

TAGGED:assembly electionBasavaraj Bommaibengalurubjpcongresselectionಕಾಂಗ್ರೆಸ್ಬಸವರಾಜ ಬೊಮ್ಮಾಯಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Donald Trump sad unhappy
Latest

Iran War| ನಾಳೆಗೆ 60 ದಿನಗಳ ಡೆಡ್‌ಲೈನ್‌ ಅಂತ್ಯ – ಸಂಕಷ್ಟದಲ್ಲಿ ಟ್ರಂಪ್‌!

Public TV
By Public TV
9 minutes ago
Shivajinagar Rain Death Sufiyan copy
Bengaluru City

ರಕ್ಕಸ ಮಳೆಗೆ ಬೆಂಗಳೂರಿನಲ್ಲಿ 10 ಬಲಿ – ಅಮ್ಮನ ಮುಂದೆಯೇ ಪ್ರಾಣ ಬಿಟ್ಟ 17 ವರ್ಷದ ಮಗ

Public TV
By Public TV
34 minutes ago
West Bengal Election BJP button on EVM taped Perfume on buttons CEO Manoj Kumar Agarwal reports 77 EVM tampering cases hints at repoll on May 2 Diamond harbour falta
Latest

ಬಂಗಾಳದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್‌, ಸುಗಂಧ ದ್ರವ್ಯ| 77 ಇವಿಎಂನಲ್ಲಿ ಟ್ಯಾಂಪರಿಂಗ್‌ – ಮೇ 2ರ ಒಳಗಡೆ ಮರುಮತದಾನ

Public TV
By Public TV
48 minutes ago
DK Shivakumar Bowring Hospital Visit
Bengaluru City

ಕಾಂಪೌಂಡ್ ಕುಸಿದು 7 ಜನರ ಸಾವಿನಿಂದ ಆಘಾತ: ಡಿಕೆಶಿ

Public TV
By Public TV
1 hour ago
7 killed in heavy rains in Bengaluru What caused the Bowring Hospital wall to collapse
Bengaluru City

ಬೆಂಗಳೂರಿನಲ್ಲಿ ಸುರಿದ ಭೀಕರ ಮಳೆಗೆ 7 ಬಲಿ – ಗೋಡೆ ಕುಸಿತಕ್ಕೆ ಕಾರಣ ಏನು?

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ 30-04-2026

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?