Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೌಶಲ್ಯ ರಥಕ್ಕೆ ಬೊಮ್ಮಾಯಿ ಚಾಲನೆ – 2.5 ಲಕ್ಷ ಯುವ ಜನತೆಗೆ ತರಬೇತಿ ನೀಡುವ ಗುರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕೌಶಲ್ಯ ರಥಕ್ಕೆ ಬೊಮ್ಮಾಯಿ ಚಾಲನೆ – 2.5 ಲಕ್ಷ ಯುವ ಜನತೆಗೆ ತರಬೇತಿ ನೀಡುವ ಗುರಿ

Districts

ಕೌಶಲ್ಯ ರಥಕ್ಕೆ ಬೊಮ್ಮಾಯಿ ಚಾಲನೆ – 2.5 ಲಕ್ಷ ಯುವ ಜನತೆಗೆ ತರಬೇತಿ ನೀಡುವ ಗುರಿ

Public TV
Last updated: April 22, 2022 12:28 pm
Public TV
Share
3 Min Read
Bommai 3
SHARE

ಕಲಬುರಗಿ: ರಾಜ್ಯದ ಗ್ರಾಮೀಣ ಭಾಗದ ಪ್ರದೇಶದಲ್ಲಿ ವಾಸಿಸುತ್ತಿರುವ ಯುವಜನತೆಗೆ ಕೌಶಲ್ಯ ತರಬೇತಿಯನ್ನು ನೀಡಲು ಸಿದ್ಧಗೊಂಡಿರುವ ಸುಸಜ್ಜಿತ ಕೌಶಲ್ಯ ರಥಗಳಿಗೆ ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದಿಂದ ಆಯೋಜಿಸಿದ ಕಾರ್ಯಕ್ರಮದಲ್ಲಿ ನಾಲ್ಕು ತರಬೇತಿ ನೀಡುವ ಬಸ್ಸುಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಸಕ್ತ ವರ್ಷ 2.5 ಲಕ್ಷ ಯುವ ಜನತೆಗೆ ಕೌಶಲ್ಯ ತರಬೇತಿ ನೀಡುವ ಗುರಿ ಹೊಂದಲಾಗಿದೆ. ದೇಶದಲ್ಲಿರುವ ಒಟ್ಟಾರೆ ಜನಸಂಖ್ಯೆಯಲ್ಲಿ ಯುವ ಜನತೆಯ ಪ್ರಮಾಣ ಶೇ.46 ರಷ್ಟಿದೆ. ಹೀಗಾಗಿ ಇವರಿಗೆ ಉತ್ತಮ ಶಿಕ್ಷಣ ಮತ್ತು ಕೌಶಲ್ಯ ನೀಡಿ ಉದ್ಯೋಗ ಒದಗಿಸುವುದು ಸರ್ಕಾರದ ಕರ್ತವ್ಯ. ಕೇಂದ್ರ ಸರ್ಕಾರವು ಪಂಡಿತ್ ದೀನ್ ದಯಾಳ್ ಯೋಜನೆಯಡಿ ಕೌಶಲ್ಯ ತರಬೇತಿ ನೀಡುತ್ತಿದೆ. ಅದೇ ರೀತಿ ರಾಜ್ಯ ಸರ್ಕಾರ ಕೌಶಲ್ಯ ಕರ್ನಾಟಕ ಯೋಜನೆಯಡಿ ಯುವಕ-ಯುವತಿಯರಿಗೆ ಸೂಕ್ತ ತರಬೇತಿ ನೀಡಿ ಸ್ವಾವಲಂಬಿಯನ್ನಾಗಿಸುವ ಪ್ರಯತ್ನ ಮುಂದುವರೆದಿದೆ ಎಂದರು.  ಇದನ್ನೂ ಓದಿ: ಪ್ರಧಾನಿ ಭೇಟಿಗೂ ಮುನ್ನ ಜಮ್ಮುವಿನಲ್ಲಿ ಎನ್‌ಕೌಂಟರ್ – ಇಬ್ಬರು ಉಗ್ರರ ಹತ್ಯೆ

Bommai 4

ಕೌಶಲ್ಯ ರಥಗಳು ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಸಂಚರಿಸಿ ಸ್ಥಳದಲ್ಲಿಯೇ ಉಚಿತವಾಗಿ ಎಲೆಕ್ಟ್ರಿಕಲ್ ಟೆಕ್ನಿಷಿಯನ್ ಮತ್ತು ಬ್ಯೂಟಿ ಥೆರಾಪಿಸ್ಟ್ ಕುರಿತು ಯುವಕ-ಯುವತಿಯರಿಗೆ ಒಂದು ತಿಂಗಳ ಕಾಲ ತರಬೇತಿ ನೀಡಿ ಸರ್ಟಿಫಿಕೇಟ್ ನೀಡಲಾಗುತ್ತಿದೆ. ಇದರಿಂದ ಅವರಿಗೆ ಸ್ವಯಂ ಉದ್ಯೋಗಕ್ಕೆ ಅನುಕೂಲವಾಗಲಿದೆ. ತರಬೇತಿ ಪಡೆದವರನ್ನು ಮಿಕ್ಸಿ, ಗೃಹ ಬಳಕೆ ಮಿಕ್ಸಿ, ಮೋಟಾರ್ ವೈಂಡಿಂಗ್ ಹೀಗೆ ಸ್ಥಳೀಯವಾಗಿ ಕಂಪನಿಗಳೊಂದಿಗೆ ಜೋಡಿಸಿ ಉದ್ಯೋಗ ಒದಗಿಸುವ ಹ್ಯಾಂಡ್ ಹೋಲ್ಡಿಂಗ್ ಜವಾಬ್ದಾರಿ ಸಹ ಕೌಶಲ್ಯ ಅಭಿವೃದ್ಧಿ ನಿಗಮ ಮಾಡಲಿದೆ ಎಂದು ತಿಳಿಸಿದರು.

Bommai 2

ಮುಂದಿನ ದಿನದಲ್ಲಿ ಗ್ರಾಮೀಣ ಭಾಗದಲ್ಲಿ ಟ್ರಾನ್ಸ್ ಫಾರ್ಮರ್ (ಟಿ.ಸಿ) ಸಹ ಸ್ಥಳದಲ್ಲಿಯೇ ಯುವಕರು ದುರಸ್ತಿ ಮಾಡುವಂತಾಗಲು ಅಗತ್ಯ ಕೌಶಲ್ಯ ತರಬೇತಿ ನೀಡಬೇಕು ಎಂದು ಸ್ಥಳದಲ್ಲಿದ್ದ ನಿಗಮದ ಅಧಿಕಾರಿಗಳಿಗೆ ಮುಖ್ಯಮಂತ್ರಿ ನಿರ್ದೇಶನ ನೀಡಿದರು. ಇದರಿಂದ ರೈತಾಪಿ ವರ್ಗದ ಜನರಿಗೆ ತುಂಬಾ ಅನುಕೂಲವಾಗಲಿದೆ ಎಂದರು. ಇದನ್ನೂ ಓದಿ: ಎಲೆಕ್ಟ್ರಿಕ್ ವಾಹನಗಳ ಕಂಪನಿಗಳಿಗೆ ಖಡಕ್ ವಾರ್ನಿಂಗ್ ಕೊಟ್ಟ ನಿತಿನ್ ಗಡ್ಕರಿ

ಕಲ್ಯಾಣ ಕರ್ನಾಟಕ ಭಾಗಕ್ಕೆ ಹೆಚ್ಚಿನ ಗುರಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಯುವಕ-ಯುವತಿಯರಿಗೆ ತರಬೇತಿ ನೀಡಲು ಗುರಿ ಹೆಚ್ಚಿಸಲಾಗುವುದೆಂದು ಇದೇ ಸಂದರ್ಭದಲ್ಲಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

Bommai 1 1

ಉನ್ನತ ಶಿಕ್ಷಣ, ಐ.ಟಿ-ಬಿ.ಟಿ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಅವರು ಮಾತನಾಡಿ, ಕಳೆದ ಅರ್ಥಿಕ ವರ್ಷದಲ್ಲಿ ಕೌಶಲ್ಯ ತರಬೇತಿ ನೀಡಲು 75 ಸಾವಿರ ಗುರಿ ನೀಡಲಾಗಿತ್ತು. 2022-23ನೇ ಸಾಲಿಗೆ 2.5 ಲಕ್ಷ ಜನರಿಗೆ ಕೌಶಲ್ಯತೆ ನೀಡುವ ಗುರಿ ಹೊಂದಲಾಗಿದೆ. ಶೇ.75 ರಷ್ಟು ಯುವ ಸಮುದಾಯ ಕೌಶಲ್ಯದಿಂದ ವಿಮುಖರಾಗಿದ್ದು, ಅವರೆಲ್ಲರಿಗೂ ಶಿಕ್ಷಣ, ಕೌಶಲ್ಯ ಹಾಗೂ ಜೀವನೋಪಾಯದ ತರಬೇತಿ ನೀಡುವ ಸಂಕಲ್ಪ ಮಾಡಿದ್ದೇವೆ. ಸ್ವ-ಸಹಾಯ ಸಂಘಗಳಿಗೆ 500 ಕೋಟಿ ರೂ. ನೀಡಲಾಗಿದೆ. ಇದಲ್ಲದೆ ಕೆ.ಜಿ.ಟಿ.ಟಿ.ಐ, ಜಿ.ಟಿ.ಟಿ.ಸಿ., ಐ.ಟಿ.ಐ, ಪಾಲಿಟೆಕ್ನಿಕ್ ಮೂಲಕವು ಸಹ ರಾಜ್ಯದಲ್ಲಿ ಲಕ್ಷಾಂತರ ಯುವಜನತೆಗೆ ಕೌಶಲ್ಯ ತರಬೇತಿ ನೀಡುತ್ತಿದ್ದೇವೆ ಎಂದರು. ಇದನ್ನೂ ಓದಿ: ದೆಹಲಿಯ ಸರ್ಕಾರಿ ಆಸ್ಪತ್ರೆಗಳಲ್ಲಿ ಬೂಸ್ಟರ್‌ ಡೋಸ್‌ ಉಚಿತ

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಮುರುಗೇಶ ನಿರಾಣಿ, ಕೆ.ಕೆ.ಅರ್.ಡಿ.ಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ್, ಕೆ.ಕೆ.ಅರ್.ಟಿ.ಸಿ ಅಧ್ಯಕ್ಷ ರಾಜ್‍ಕುಮಾರ್ ಪಾಟೀಲ್ ತೇಲ್ಕೂರ್, ಕೆ.ಯು.ಡಬ್ಲ್ಯೂ.ಎಸ್.ಡಿ.ಬಿ. ಅಧ್ಯಕ್ಷ ರಾಜು ಗೌಡ, ಸಂಸದ ಡಾ.ಉಮೇಶ್ ಜಾಧವ್, ಶಾಸಕ ಬಸವರಾಜ್ ಮತ್ತಿಮೂಡ, ಮಾಜಿ ಸಚಿವ ಲಕ್ಷ್ಮಣ ಸವದಿ, ಪ್ರಾದೇಶಿಕ ಆಯುಕ್ತ ಡಾ.ಎನ್.ವಿ.ಪ್ರಸಾದ್, ಡಿ.ಸಿ. ಯಶವಂತ್ ವಿ. ಗುರುಕರ್, ನಗರ ಪೆÇಲೀಸ್ ಆಯುಕ್ತ ಡಾ.ವೈ.ಎಸ್.ರವಿಕುನಾರ, ಜಿಲ್ಲಾ ಪಂಚಾಯತ್ ಸಿ.ಇ.ಓ ಡಾ.ದಿಲೀಷ್ ಸಾಸಿ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಶ್ವಿನ್ ಡಿ. ಗೌಡ, ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ನಾಗಾಬಾಯಿ ಡಿ. ದೊಡ್ಡಮನಿ, ಸಹಾಯಕ ನಿರ್ದೇಶಕ ಸುದರ್ಶನ್, ವ್ಯವಸ್ಥಾಪಕ ಸಂತೋಷ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ತರಬೇತಿ ವಿವರ: ಎಲೆಕ್ಟ್ರಿಕಲ್ ಟೆಕ್ನಿಷಿಯನ್ ಮತ್ತು ಬ್ಯೂಟಿ ಥೆರಾಪಿಸ್ಟ್ ಉಚಿತ ತರಬೇತಿಯ ಅವಧಿ ತಲಾ 208 ಗಂಟೆಯದ್ದಾಗಿದೆ. ಪ್ರತಿ ದಿನ 8 ಗಂಟೆ ತರಬೇತಿ ನೀಡಲಾಗುತ್ತದೆ. ಪ್ರತಿ ಬ್ಯಾಚಿನಲ್ಲಿ 15 ಜನರಿಗೆ ಅವಕಾಶವಿದ್ದು, ಒಂದು ತಿಂಗಳಿನಲ್ಲಿ 15 ಜನರಿಗೆ ತರಬೇತಿಗೆ ನೀಡಲಾಗುತ್ತದೆ.

TAGGED:Basavaraj BommaiKalaburagiSkill on wheelsಕಲಬುರಗಿಕೌಶಲ್ಯ ರಥಬಸವರಾಜ್ ಬೊಮ್ಮಾಯಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories

You Might Also Like

Karnataka PUC Result Student passes with 111 marks out of 100 Hindi
Bengaluru City

2nd PUC Result 2026 – 100ಕ್ಕೆ 111 ಅಂಕ ನೀಡಿದ ಪಿಯು ಬೋರ್ಡ್‌!

Public TV
By Public TV
7 minutes ago
Train
Bengaluru City

ಮೈಸೂರು-ಜಲ್ಪೈಗುಡಿ ಜಂಕ್ಷನ್ ನಡುವೆ ವಿಶೇಷ ರೈಲುಗಳ ಸಂಚಾರ

Public TV
By Public TV
9 minutes ago
China Xi Jinping Taiwan Opposition leader cheng Li wun
Latest

ಚೀನಾ-ತೈವಾನ್‌ ಐತಿಹಾಸಿಕ ಮಾತುಕತೆ – ಈ ಭೇಟಿಗೆ ಇಷ್ಟೊಂದು ಮಹತ್ವ ಯಾಕೆ?

Public TV
By Public TV
13 minutes ago
Rohit Sharma
Cricket

ಮುಂಬೈ ಇಂಡಿಯನ್ಸ್‌ನಲ್ಲಿ 15 ವರ್ಷ ಪೂರೈಸಿದ ರೋಹಿತ್ – ಇತಿಹಾಸ ನಿರ್ಮಿಸಿದ ಹಿಟ್‌ಮ್ಯಾನ್‌

Public TV
By Public TV
13 minutes ago
Israeli Attack On Lebanon
Latest

ಟ್ರಂಪ್‌ ಮಾತಿಗಿಲ್ಲ ಕಿಮ್ಮತ್ತು – ಲೆಬನಾನ್‌ನ 2 ಪಟ್ಟಣಗಳ ಮೇಲೆ ಮತ್ತೆ ಇಸ್ರೇಲ್‌ ದಾಳಿ

Public TV
By Public TV
31 minutes ago
Love
Latest

ಪ್ರೀತಿ ಕೈಬೀಸಿ ಕರೆಯುವಾಗ ಎಲ್ಲವನ್ನೂ ಬಿಟ್ಬಿಡ್ಬೇಕಂತೆ..!

Public TV
By Public TV
42 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?