Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಡಿಯೂರಪ್ಪನವರೇ ನಿಮ್ಮ ಮಕ್ಕಳನ್ನು ಹದ್ದುಬಸ್ತಿನಲ್ಲಿಟ್ಟುಕೊಳ್ಳಿ: ಹೆಚ್‍ಡಿಕೆ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chikkamagaluru

ಯಡಿಯೂರಪ್ಪನವರೇ ನಿಮ್ಮ ಮಕ್ಕಳನ್ನು ಹದ್ದುಬಸ್ತಿನಲ್ಲಿಟ್ಟುಕೊಳ್ಳಿ: ಹೆಚ್‍ಡಿಕೆ

Public TV
Last updated: August 19, 2019 8:01 pm
Public TV
Share
2 Min Read
HDK 2
SHARE

– ನಾನೂ ಸಾವಿರ ಟ್ವೀಟ್ ಮಾಡಬಲ್ಲೆ

ಚಿಕ್ಕಮಗಳೂರು: ಯಡಿಯೂರಪ್ಪನವರೇ ನಿಮ್ಮ ಮಕ್ಕಳನ್ನು ವ್ಯಾಪಾರಕ್ಕೆ ಬಿಡಬೇಡಿ, ಹದ್ದುಬಸ್ತಿನಲ್ಲಿಟ್ಟುಕೊಳ್ಳಿ, ನಾನೂ ಸಾವಿರ ಟ್ವೀಟ್ ಮಾಡಬಲ್ಲೆ ಎಂದು ಪರೋಕ್ಷವಾಗಿ ಸಂಸದ ಹಾಗೂ ಬಿಎಸ್‍ವೈ ಪುತ್ರ ಬಿ.ವೈ.ವಿಜಯೇಂದ್ರ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹರಿಹಾಯ್ದಿದ್ದಾರೆ.

ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಯಲಹಂಕಗೆ ವರ್ಗಾವಣೆ ಮಾಡಿರುವ ರಘುಮೂರ್ತಿ ಎಂಬ ವ್ಯಕ್ತಿ ನನ್ನ ಬಳಿಯು ಬಂದಿದ್ದ. ಮಿಡೀಯೇಟ್ ಮಾಡಿಕೊಂಡು ನನ್ನ ಬಳಿ ಬಂದಿದ್ದ, ನಾನು ತಲೆಕೆಡಿಸಿಕೊಂಡಿರಲಿಲ್ಲ. ಇದೀಗ ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಹೀಗಾಗಿ ನಿಮ್ಮ ಮಕ್ಕಳನ್ನು ಹದ್ದುಬಸ್ತಿನಲ್ಲಿಟ್ಟುಕೊಳ್ಳಿ, ವ್ಯಾಪಾರ ಮಾಡಲು ಬಿಡಬೇಡಿ. ವ್ಯಾಪಾರ ಮಾಡಲು ಬಿಟ್ಟರೆ 2010ರಲ್ಲಿ ಜೈಲಿಗೆ ಹೋಗಿ ಬಂದಂತೆ ಮತ್ತೆ ಅದೇ ಸ್ಥಾನಕ್ಕೆ ಹೋಗಬೇಕಾಗುತ್ತದೆ ಎಂದು ಬಿಎಸ್‍ವೈ ಹಾಗೂ ಪುತ್ರ ವಿಜಯೇಂದ್ರ ವಿರುದ್ಧ ಕಿಡಿ ಕಾರಿದರು.

tmk vijayendra 1

ಟ್ವೀಟ್ ಮಾಡೋದು ಸುಲಭ, ನಾನೂ ಸಹ ಸಾವಿರ ಟ್ವೀಟ್ ಮಾಡಬಲ್ಲೆ ಅದು ಮುಖ್ಯವಲ್ಲ. ನಿಮ್ಮ ಕ್ರಿಯೆ ಕಡೆ ಗಮನ ಕೊಡಿ. ರಘುಪತಿ ಎಂಬವನನ್ನು ವರ್ಗಾವಣೆ ಮಾಡಿಕೊಂಡು ಗೃಹ ಕಚೇರಿಯಲ್ಲಿ ಮಾರ್ಕೆಟ್ ದಂಧೆ ಮಾಡುತ್ತಿದ್ದೀರಾ? ಆ ದಂಧೆನಾ ನನ್ನ ಮಗನ ಕೈಲೂ ನಾನು ಮಾಡಿಸಿಲ್ಲ. ಸರ್ಕಾರ ಬೀಳಿಸೋಕೆ ನಿಮ್ಮ ಮಗ ಸಮಾಜಘಾತುಕ ಶಕ್ತಿಗಳ ಜೊತೆ ಹೊಂದಾಣಿಕೆ ಮಾಡಿಕೊಂಡು ಲೀಡ್ ತೋರಿಸಿದ್ದರು ಎಂದು ವಿಜಯೇಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನು ಯಾವ ರೀತಿ ಬದುಕಬೇಕು ಎಂಬುದನ್ನು ನಿಮ್ಮಿಂದ ಕಲಿಯಬೇಕಿಲ್ಲ. ಮರ್ಯಾದೆಗೆ ಬದುಕಿರೋರು ನಾವು, ನಿಮ್ಮ ರೀತಿಯಲ್ಲಿ ಬದುಕಿಲ್ಲ. ಟ್ವೀಟ್ ಮಾಡೋದು ಬಿಟ್ಟು ಮರ್ಯಾದೆಯಿಂದ ಬದುಕಲು ಕಲಿಯಿರಿ. ನಿಮಗೆ ಆತ್ಮಸಾಕ್ಷಿ ಇದ್ದರೆ, ಯಾವ ರೀತಿ ನಡೆದುಕೊಳ್ಳುತ್ತಿದ್ದೀರಿ ಎಂದು ನಿಮ್ಮ ಹೃದಯಕ್ಕೆ ಪ್ರಶ್ನೆ ಹಾಕಿಕೊಳ್ಳಿ. ಬಿಡಿಎ ಆಯುಕ್ತರನ್ನು ವರ್ಗಾಯಿಸಿಕೊಂಡು ಎಷ್ಟು ಹಣ ಪಡೆದಿದ್ದೀರಿ ಬಹಿರಂಗಪಡಿಸಿ ಎಂದು ಪ್ರಶ್ನೆ ಮಾಡಿದರು.

BSY

ವಿಜಯೇಂದ್ರ ಟ್ವೀಟ್ ಮಾಡಿದ್ದೇನು?
ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ವಿರುದ್ಧ ಹರಿಹಾಯ್ದು, ವರ್ಗಾವಣೆ ದಂಧೆ ಮಾಡಲು ಯಡಿಯೂರಪ್ಪನವರು ತಮ್ಮ ಮಗನನ್ನೇ ಬಿಟ್ಟಿದ್ದಾರೆ ಎಂದು ಆರೋಪಿಸಿದ್ದರು. ಇದಕ್ಕೆ ಬಿಎಸ್‍ವೈ ಪುತ್ರ ಬಿ.ವೈ.ವಿಜಯೇಂದ್ರ ಅವರು ಟ್ವೀಟ್ ಮಾಡುವ ಮೂಲಕ ಪ್ರತಿಕ್ರಿಯಿಸಿ, ಕಮಿಷನ್ ದಂಧೆ, ವರ್ಗಾವಣೆ ದಂಧೆ, ನೇಮಕಾತಿಗಳ ದಂಧೆಗಳ ಜನಕರು ಹಾಗೂ ಗುತ್ತಿಗೆದಾರರು ನೀವೆಂಬುದು ಇಡೀ ರಾಜ್ಯಕ್ಕೆ ತಿಳಿದಿದೆ ಕುಮಾರಸ್ವಾಮಿ ಅವರೇ ಎಂದು ಕಿಡಿಕಾರಿದ್ದರು.

ಕಮೀಷನ್ ದಂಧೆ ,ವರ್ಗಾವಣೆ ದಂಧೆ,ನೇಮಕಾತಿ ದಂಧೆಗಳ ಜನಕರು ಹಾಗೂ ಗುತ್ತಿಗೆದಾರರು ನೀವೆಂಬುದು ಇಡೀ ರಾಜ್ಯಕ್ಕೇ ತಿಳಿದಿದೆ ಕುಮಾರ ಸ್ವಾಮಿಯವರೇ, “ಕೋತಿ ತಾನು ತಿಂದು ಮೇಕೆ ಬಾಯಿಗೆವರೆಸಿ ದಂತಿದೆ “ನಿಮ್ಮ ಮಾತುಗಳು.
CBI ತನಿಖೆಗೆ ಹೆದರಿ ಹತಾಶ ಹೇಳಿಕೆ ನೀಡುತ್ತಿದ್ದೀರಿ ವಿಷಯಾಂತರಗೊಳಿಸಿ ಜನತೆಯ ಧಿಕ್ಕು ತಪ್ಪಿಸುವ ಕುತಂತ್ರದ ಮಾತು ನಿಲ್ಲಿಸಿ. pic.twitter.com/C9y5U1eCoa

— Vijayendra Yeddyurappa (@BYVijayendra) August 19, 2019

‘ಕೋತಿ ತಾನು ತಿಂದು ಮೇಕೆ ಬಾಯಿಗೆ ಒರೆಸಿದಂತಿದೆ ನಿಮ್ಮ ಮಾತುಗಳು’ ಎಂದು ಕಟುವಾಗಿ ಟೀಕಿಸಿದ್ದರು. ಸಿಬಿಐ ತನಿಖೆಗೆ ಹೆದರಿ ಹತಾಶ ಹೇಳಿಕೆ ನೀಡುತ್ತಿದ್ದೀರಿ, ವಿಷಯಾಂತರಗೊಳಿಸಿ ಜನತೆಯ ದಿಕ್ಕು ತಪ್ಪಿಸುವ ಕುತಂತ್ರದ ಮಾತು ನಿಲ್ಲಿಸಿ ಎಂದು ಖಾರವಾಗಿ ಟ್ವೀಟ್ ಮಾಡಿದ್ದರು. ಇದಕ್ಕೆ ಇದೀಗ ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿ, ಬಿಎಸ್‍ವೈ ಅವರೇ ನಿಮ್ಮ ಮಕ್ಕಳನ್ನು ಹದ್ದುಬಸ್ತಿನಲ್ಲಿಟ್ಟುಕೊಳ್ಳಿ ಎಂದು ಎಚ್ಚರಿಸಿದ್ದಾರೆ.

Share This Article
Facebook Whatsapp Whatsapp Telegram
Previous Article cng rain collage copy ವರುಣ ದೇವನ ಕೃಪೆಗೆ ಚಾಮರಾಜನಗರ ಮಂದಿ ಫುಲ್ ಖುಷ್ – ಚುರುಕುಗೊಂಡ ಕೃಷಿ ಚಟುವಟಿಕೆ
Next Article laddu ತಾಂತ್ರಿಕನ ಮಾತು ಕೇಳಿ ಪತಿಗೆ ಬರೀ ಲಾಡು ನೀಡ್ತಿದ್ದ ಪತ್ನಿ

Latest Cinema News

Shivarajkumar Dad Movie
ನಂದಿಬೆಟ್ಟದಲ್ಲಿ ಶಿವರಾಜ್ ಕುಮಾರ್ ನಟನೆಯ ‘ಡ್ಯಾಡ್’ ಶೂಟಿಂಗ್
Cinema Latest Sandalwood Top Stories
Vishnuvardhan 3
ಡಾ.ವಿಷ್ಣುವರ್ಧನ್ 75ನೇ ಜನ್ಮದಿನ ಇಂದು – ಅಭಿಮಾನ್‌ ಸ್ಟುಡಿಯೋ ಬಳಿ 2 ಎಕರೆ ಜಾಗದಲ್ಲಿ ಬರ್ತ್‌ಡೇಗೆ ಸಿದ್ಧತೆ
Cinema Latest Sandalwood Top Stories
disha patani
ನಟಿ ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ – ಗೋಲ್ಡಿ ಬ್ರಾರ್ ಗ್ಯಾಂಗ್‌ನ ಇಬ್ಬರು ಎನ್‌ಕೌಂಟರ್‌ನಲ್ಲಿ ಹತ್ಯೆ
Bollywood Cinema Crime Latest Main Post National
Vedika
ಬಿಕಿನಿಯಲ್ಲಿ ಶಿವಲಿಂಗ ನಟಿ ಚಿಲ್‌ – ಪಡ್ಡೆ ಹೈಕ್ಳ ಮೈಬಿಸಿ ಹೆಚ್ಚಿಸಿದ ವೇದಿಕಾ
Cinema Latest Sandalwood Top Stories
Vishnuvardhan 4
ವಿಷ್ಣುವರ್ಧನ್ ಅಭಿಮಾನಿಗಳಿಗೆ ಗೆಲುವು – ಸಮಾಧಿ ಸಮೀಪ ಬರ್ತ್‌ಡೇಗೆ ಸಿಕ್ತು ಅನುಮತಿ
Cinema Latest Sandalwood Top Stories

You Might Also Like

adani group
Latest

ಹಿಂಡೆನ್‌ಬರ್ಗ್‌ ಶಾರ್ಟ್‌ ಸೆಲ್ಲಿಂಗ್‌ ಕೇಸ್‌ – ಅದಾನಿ ಗ್ರೂಪ್‌ಗೆ ಸೆಬಿಯಿಂದ ಕ್ಲೀನ್ ಚಿಟ್

3 minutes ago
Siddaramaiah 7
Bengaluru City

ಜಾತಿಗಣತಿಗೆ ಡಿಕೆಶಿ ಸೇರಿ ಹಲವು ಸಚಿವರ ಆಕ್ಷೇಪ, ನನಗೆ ಮೇಲ್ವರ್ಗದ ವಿರೋಧಿ ಅಂತಾ ಪಟ್ಟ ಕಟ್ಟುತ್ತಾರೆ: ಸಿಎಂ

11 minutes ago
Chalavadi narayanaswamy
Bengaluru City

ಮತಗಳ್ಳತನ ಸಂಬಂಧ ತೀರ್ಪಿನ ಬಳಿಕವೇ ತುರ್ತು ಪರಿಸ್ಥಿತಿ ಹೇರಿದ್ದ ಇಂದಿರಾ ಗಾಂಧಿ: ಛಲವಾದಿ ನಾರಾಯಣಸ್ವಾಮಿ

21 minutes ago
Anantha Nageswaran
Latest

ನ.30 ರ ನಂತರ ಭಾರತದ ಮೇಲಿನ ಶೇ.25 ರಷ್ಟು ದಂಡ ಸುಂಕವನ್ನು ಅಮೆರಿಕ ತೆಗೆಯಬಹುದು: CEA

30 minutes ago
MB Patil 1
Bengaluru City

ಲಿಂಗಾಯತರನ್ನು ತುಂಡು ತುಂಡು ಮಾಡಲು ಹೇಳಿದ್ಯಾರು- ಪೇಪರ್‌ ಎಸೆದು ಕ್ಯಾಬಿನೆಟ್‌ ಸಭೆಯಲ್ಲಿ ಎಂಬಿಪಿ ರೋಷಾವೇಶ

42 minutes ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?