Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಎಸ್‍ವೈ ಮನೆಗೆ ನಾನು ಹೋಗಿದ್ದು ಏಕೆ – ಕಾರ್ಯಕರ್ತರಿಗೆ ಕಾರಣ ತಿಳಿಸಿದ ಜಿಟಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಬಿಎಸ್‍ವೈ ಮನೆಗೆ ನಾನು ಹೋಗಿದ್ದು ಏಕೆ – ಕಾರ್ಯಕರ್ತರಿಗೆ ಕಾರಣ ತಿಳಿಸಿದ ಜಿಟಿಡಿ

Karnataka

ಬಿಎಸ್‍ವೈ ಮನೆಗೆ ನಾನು ಹೋಗಿದ್ದು ಏಕೆ – ಕಾರ್ಯಕರ್ತರಿಗೆ ಕಾರಣ ತಿಳಿಸಿದ ಜಿಟಿಡಿ

Public TV
Last updated: August 14, 2019 5:29 pm
Public TV
Share
3 Min Read
GT DEVEGOWDA
SHARE

ಮೈಸೂರು: ಮಾಜಿ ಸಚಿವ ಜಿ.ಟಿ.ದೇವೇಗೌಡ ಅವರು ಇತ್ತೀಚೆಗೆ ಬಿಜೆಪಿ ನಾಯಕರೊಂದಿಗೆ ಬೆರೆಯುತ್ತಿರುವ ಬೆನ್ನಲ್ಲೇ ಸೋಮವಾರ ರಾತ್ರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಮನೆಗೆ ಭೇಟಿ ನೀಡಿದ್ದು ತೀವ್ರ ಕುತೂಹಲ ಕೆರಳಿಸಿತ್ತು. ಈ ಕುರಿತು ಜಿ.ಟಿ.ದೇವೇಗೌಡ ಅವರೇ ಸ್ಪಷ್ಟಪಡಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ(ಮೈಮುಲ್)ದ ಚುನಾವಣೆ ನಡೆದಿತ್ತು. ಇದಕ್ಕೆ ನನ್ನ ಆಪ್ತ ಸಿದ್ದೇಗೌಡ ಸ್ಪರ್ಧಿಸುತ್ತಿದ್ದ. ಅಲ್ಲದೆ, ಅಧ್ಯಕ್ಷ ಸ್ಥಾನಕ್ಕೆ ಸಿಎಂ ಬಿಎಸ್‍ವೈ ತಂಗಿ ಮಗ ಸಹ ಸ್ಪರ್ಧೆ ಮಾಡಿದ್ದರು. ಈ ವಿಚಾರ ಮಾತನಾಡಲು ಬಿಎಸ್‍ವೈ ಅವರ ಮನೆಗೆ ಹೋಗಿದ್ದೆ ಎಂದು ತಿಳಿಸಿದರು.

mys mymul

ಯಡಿಯೂರಪ್ಪ ಅವರ ತಂಗಿ ಮಗ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆಯಲು ಸೂಚಿಸುವಂತೆ ಮನವಿ ಮಾಡಲು ಅವರ ಮನೆಗೆ ತೆರಳಿದ್ದೆ. ಅವರು ನನ್ನನ್ನು ಪ್ರೀತಿಯಿಂದ ಮಾತನಾಡಿಸಿ, ಮನವಿ ಆಲಿಸಿದರು. ನಿಮ್ಮ ತಂಗಿ ಮಗನಿಗೆ ನೀವೆ ಹೇಳಿ ನಾಮಪತ್ರ ವಾಪಾಸ್ ತಗಿಸಿ ಅಂತ ಮನವಿ ಮಾಡಿಕೊಂಡಿದ್ದೆ. ಅದಕ್ಕೆ ಪ್ರತಿಯಾಗಿ ಅವರು ವಿಜಯೇಂದ್ರ ಅವರಿಗೆ ತಿಳಿಸಿ ಬಿಎಸ್‍ವೈ ತಂಗಿ ಮಗ ಅಶೋಕ್ ನಾಮಪತ್ರ ವಾಪಸ್ ಪಡೆಯುವಂತೆ ಸೂಚಿಸಿದರು ಎಂದು ಹೇಳಿದರು.

ಇಂದು ಸಿಎಂ ತಂಗಿ ಮಗ ನಾಮಪತ್ರ ವಾಪಸ್ ಪಡೆದರು. ನಮ್ಮ ಮನವಿಗೆ ಸ್ಪಂದಿಸಿದ ಯಡಿಯೂರಪ್ಪನವರಿಗೆ ಧನ್ಯವಾದಗಳು. ನಾನು ಇದೊಂದೆ ವಿಚಾರಕ್ಕೆ ಸಿಎಂ ಮನೆಗೆ ಹೋಗಿದ್ದೆ. ಆ ಸಂದರ್ಭದಲ್ಲಿ ಕೆಲ ನಾಯಕರು ಅಲ್ಲೇ ಇದ್ದರು. ಈ ವಿಚಾರ ಹೊರತು ಪಡಿಸಿ ಬೇರೆನೂ ರಾಜಕೀಯ ಮಾತಾಡಿಲ್ಲ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.

CM BSY

ಬಿಎಸ್‍ವೈ ತಂಗಿ ಮಗ ನಾಮಪತ್ರ ವಾಪಸ್ ಪಡೆದ ಹಿನ್ನೆಲೆಯಲ್ಲಿ ಮೈಸೂರು ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ(ಮೈಮುಲ್)ದ ಅಧ್ಯಕ್ಷರಾಗಿ ಜಿಟಿಡಿ ಆಪ್ತ ಸಿದ್ದೇಗೌಡ ಆಯ್ಕೆಯಾದ ಸಿದ್ದೇಗೌಡರಿಗೆ ಜಿ.ಟಿ.ದೇವೇಗೌಡ ಅವರು ಅಭಿನಂದನೆ ಸಲ್ಲಿಸಿದರು.

ಇದೇ ವೇಳೆ ಫೋನ್ ಕದ್ದಾಲಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಯಾರು ರಾಜ್ಯಕ್ಕೆ ತಮ್ಮನ್ನು ತಾವು ಸಮರ್ಪಿಸಿಕೊಳ್ಳುವುದಿಲ್ಲವೋ ಅಂತವರು ಮಾತ್ರ ಫೋನ್ ಕದ್ದಾಲಿಕೆ ಮಾಡುತ್ತಾರೆ. ನನಗೆ ಯಾರು ಏನು ಮಾಡುತ್ತಾರೆ ಎನ್ನುವುದು ಬೇಕಾಗಿಲ್ಲ. ಅಲ್ಲದೆ ಅವರು ಏನು ಅಂತಾರೆ, ಇವರೇನು ಅಂತಾನೆ ಎನ್ನುವುದನ್ನು ತಿಳಿದುಕೊಳ್ಳುವ ಅವಶ್ಯಕತೆ ನನಗೆ ಇಲ್ಲ. ಪೋನ್ ಕದ್ದಾಲಿಗೆ ಯಾಕೆ ಮಾಡ್ತಿದ್ದಾರೆ ಅಂತ ನನಗೆ ಅರ್ಥವಾಗುತ್ತಿಲ್ಲ. ಎಲ್ಲವನ್ನು ನೇರವಾಗಿ ಮಾತನಾಡುವವನು ನಾನು. ಹೀಗಾಗಿ ಇದಕ್ಕೆ ಹೆದರುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಫೋನ್ ಕದ್ದಾಲಿಕೆ ಕುರಿತು ಸೂಕ್ತ ತನಿಖೆಯಾಗಲಿ, ಹಿಂದೆಯೂ ಈ ಕುರಿತು ತನಿಖೆ ಆಗಿದೆ. ಈಗಲೂ ಸೂಕ್ತ ತನಿಖೆ ಆಗಲಿ. ವಿಶ್ವನಾಥ್ ಆರೋಪ ಹಾಗೂ ಕುಮಾರಸ್ವಾಮಿಯವರು ಮಾಡಿಸಿದ್ದಾರೆ ಎನ್ನುವುದು ನನಗೆ ಗೊತ್ತಿಲ್ಲ ಎಂದು ತಿಳಿಸಿದರು.

GTD HDK

ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ್ದ ಜಿಟಿಡಿ, ಮೈಸೂರು ಜಿಲ್ಲಾ ಹಾಲು ಒಕ್ಕೂಟದ ಚುನಾವಣೆ ಕಳೆದ ತಿಂಗಳ 9 ರಂದು ನಿಗದಿಯಾಗಿತ್ತು. ಆದರೆ ಚುನಾವಣೆಯಲ್ಲಿ ಗೊಂದಲ ಉಂಟಾಗಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಲು ಆಗಮಿಸಿದ್ದೆ. ಡೈರಿ ಚುನಾವಣೆ ನಡೆಯದ ಕಾರಣ ಹುದ್ದೆ ಖಾಲಿ ಇದ್ದು, ಪರಿಣಾಮ ರೈತರಿಗೆ ಬಿಡುಗಡೆಯಾಗಬೇಕಾದ ಹಣ ಲಭಿಸುತ್ತಿಲ್ಲ ಎಂದು ಹೇಳಿದ್ದರು.

ರೈತರ ಸಮಸ್ಯೆಯಿಂದ ನಾನೇ ಬಂದು ಈ ಬಗ್ಗೆ ಸಿಎಂ ಅವರಿಗೆ ಮನವರಿಕೆ ಮಾಡಿದ್ದೇನೆ. ಸಿಎಂ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ ಎಂದರು. ಇದೇ ಸಂದರ್ಭದಲ್ಲಿ ಜೆಡಿಎಸ್ ಪಕ್ಷ ಬಿಡುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಈ ಹಿಂದೆಯೇ ಹಲವು ಬಾರಿ ಸ್ಪಷ್ಟ ಪಡಿಸಿದ್ದು, ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದಿದ್ದರು. ಬಳಿಕ ಮಾತನಾಡಿದ್ದ ಬಿಎಸ್‍ವೈ, ಈ ಭೇಟಿಯಲ್ಲಿ ಯಾವುದೇ ವಿಶೇಷ ಇಲ್ಲ. ಕ್ಷೇತ್ರದ ಸಮಸ್ಯೆ ಬಗ್ಗೆ ಮಾತನಾಡಲು ಅವರು ಬಂದಿದ್ದರು ಅಷ್ಟೇ ಎಂದು ಸ್ಪಷ್ಟಪಡಿಸಿದ್ದರು.

TAGGED:BS Yeddyurappa Housechief ministerGT DevegowdaMymulphone trapingPublic TVಜಿ.ಟಿ.ದೇವೇಗೌಡಪಬ್ಲಿಕ್ ಟಿವಿಫೋನ್ ಕದ್ದಾಲಿಕೆಬಿ.ಎಸ್.ಯಡಿಯೂರಪ್ಪ ಮನೆಮುಖ್ಯಮಂತ್ರಿಮೈಮುಲ್
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Jai Shankar
Latest

ಇರಾನ್, ಇಸ್ರೇಲ್ ಯುದ್ಧ – ಸಂಕಷ್ಟಕ್ಕೀಡಾದ ಭಾರತೀಯರ ರಕ್ಷಣೆಗೆ ಕೇಂದ್ರ ಬದ್ಧ: ಜೈಶಂಕರ್

Public TV
By Public TV
23 minutes ago
Kodagu Wild Elephant Attack Woman Death
Districts

ಹಾಡಹಗಲೇ ಕಾಡಾನೆ ದಾಳಿ – ಮಹಿಳೆ ಸಾವು

Public TV
By Public TV
30 minutes ago
CRIME
Chamarajanagar

ಚಿನ್ನದಾಸೆಗೆ ಒಂಟಿ ವೃದ್ಧೆ ಕೊಲೆ ಶಂಕೆ; ಚಿನ್ನದ ಸರ, ಓಲೆ, ಹಣ ಕಳವು

Public TV
By Public TV
41 minutes ago
karwar port Bitumen
Latest

ಕಾರವಾರ| ಇರಾಕ್‌ನಿಂದ ಬರುತ್ತಿದ್ದ ಕಚ್ಚಾ ಡಾಂಬರ್ ಸಂಪೂರ್ಣ ಬಂದ್

Public TV
By Public TV
1 hour ago
Chikkaballapura crime
Chikkaballapur

ಸ್ನೇಹಿತೆಯ ಪ್ರಿಯಕರನ ಕಾಲ್ ರಿಸೀವ್ ಮಾಡಿದ್ದಕ್ಕೆ ಗಲಾಟೆ – ನೇಣುಬಿಗಿದ ಸ್ಥಿತಿಯಲ್ಲಿ ಪತ್ನಿ ಶವ ಪತ್ತೆ

Public TV
By Public TV
2 hours ago
Shivaganga Basavaraj PA
Bengaluru City

ಶಾಸಕ ಬಸವರಾಜ್ ಶಿವಗಂಗಾ ಪಿಎ ಆತ್ಮಹತ್ಯೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?