Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ಬಿಎಸ್‍ವೈ ಮನೆಗೆ ನಾನು ಹೋಗಿದ್ದು ಏಕೆ – ಕಾರ್ಯಕರ್ತರಿಗೆ ಕಾರಣ ತಿಳಿಸಿದ ಜಿಟಿಡಿ

Public TV
Last updated: August 14, 2019 5:29 pm
Public TV
Share
3 Min Read
GT DEVEGOWDA
SHARE

ಮೈಸೂರು: ಮಾಜಿ ಸಚಿವ ಜಿ.ಟಿ.ದೇವೇಗೌಡ ಅವರು ಇತ್ತೀಚೆಗೆ ಬಿಜೆಪಿ ನಾಯಕರೊಂದಿಗೆ ಬೆರೆಯುತ್ತಿರುವ ಬೆನ್ನಲ್ಲೇ ಸೋಮವಾರ ರಾತ್ರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಮನೆಗೆ ಭೇಟಿ ನೀಡಿದ್ದು ತೀವ್ರ ಕುತೂಹಲ ಕೆರಳಿಸಿತ್ತು. ಈ ಕುರಿತು ಜಿ.ಟಿ.ದೇವೇಗೌಡ ಅವರೇ ಸ್ಪಷ್ಟಪಡಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ(ಮೈಮುಲ್)ದ ಚುನಾವಣೆ ನಡೆದಿತ್ತು. ಇದಕ್ಕೆ ನನ್ನ ಆಪ್ತ ಸಿದ್ದೇಗೌಡ ಸ್ಪರ್ಧಿಸುತ್ತಿದ್ದ. ಅಲ್ಲದೆ, ಅಧ್ಯಕ್ಷ ಸ್ಥಾನಕ್ಕೆ ಸಿಎಂ ಬಿಎಸ್‍ವೈ ತಂಗಿ ಮಗ ಸಹ ಸ್ಪರ್ಧೆ ಮಾಡಿದ್ದರು. ಈ ವಿಚಾರ ಮಾತನಾಡಲು ಬಿಎಸ್‍ವೈ ಅವರ ಮನೆಗೆ ಹೋಗಿದ್ದೆ ಎಂದು ತಿಳಿಸಿದರು.

mys mymul

ಯಡಿಯೂರಪ್ಪ ಅವರ ತಂಗಿ ಮಗ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆಯಲು ಸೂಚಿಸುವಂತೆ ಮನವಿ ಮಾಡಲು ಅವರ ಮನೆಗೆ ತೆರಳಿದ್ದೆ. ಅವರು ನನ್ನನ್ನು ಪ್ರೀತಿಯಿಂದ ಮಾತನಾಡಿಸಿ, ಮನವಿ ಆಲಿಸಿದರು. ನಿಮ್ಮ ತಂಗಿ ಮಗನಿಗೆ ನೀವೆ ಹೇಳಿ ನಾಮಪತ್ರ ವಾಪಾಸ್ ತಗಿಸಿ ಅಂತ ಮನವಿ ಮಾಡಿಕೊಂಡಿದ್ದೆ. ಅದಕ್ಕೆ ಪ್ರತಿಯಾಗಿ ಅವರು ವಿಜಯೇಂದ್ರ ಅವರಿಗೆ ತಿಳಿಸಿ ಬಿಎಸ್‍ವೈ ತಂಗಿ ಮಗ ಅಶೋಕ್ ನಾಮಪತ್ರ ವಾಪಸ್ ಪಡೆಯುವಂತೆ ಸೂಚಿಸಿದರು ಎಂದು ಹೇಳಿದರು.

ಇಂದು ಸಿಎಂ ತಂಗಿ ಮಗ ನಾಮಪತ್ರ ವಾಪಸ್ ಪಡೆದರು. ನಮ್ಮ ಮನವಿಗೆ ಸ್ಪಂದಿಸಿದ ಯಡಿಯೂರಪ್ಪನವರಿಗೆ ಧನ್ಯವಾದಗಳು. ನಾನು ಇದೊಂದೆ ವಿಚಾರಕ್ಕೆ ಸಿಎಂ ಮನೆಗೆ ಹೋಗಿದ್ದೆ. ಆ ಸಂದರ್ಭದಲ್ಲಿ ಕೆಲ ನಾಯಕರು ಅಲ್ಲೇ ಇದ್ದರು. ಈ ವಿಚಾರ ಹೊರತು ಪಡಿಸಿ ಬೇರೆನೂ ರಾಜಕೀಯ ಮಾತಾಡಿಲ್ಲ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.

CM BSY

ಬಿಎಸ್‍ವೈ ತಂಗಿ ಮಗ ನಾಮಪತ್ರ ವಾಪಸ್ ಪಡೆದ ಹಿನ್ನೆಲೆಯಲ್ಲಿ ಮೈಸೂರು ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ(ಮೈಮುಲ್)ದ ಅಧ್ಯಕ್ಷರಾಗಿ ಜಿಟಿಡಿ ಆಪ್ತ ಸಿದ್ದೇಗೌಡ ಆಯ್ಕೆಯಾದ ಸಿದ್ದೇಗೌಡರಿಗೆ ಜಿ.ಟಿ.ದೇವೇಗೌಡ ಅವರು ಅಭಿನಂದನೆ ಸಲ್ಲಿಸಿದರು.

ಇದೇ ವೇಳೆ ಫೋನ್ ಕದ್ದಾಲಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಯಾರು ರಾಜ್ಯಕ್ಕೆ ತಮ್ಮನ್ನು ತಾವು ಸಮರ್ಪಿಸಿಕೊಳ್ಳುವುದಿಲ್ಲವೋ ಅಂತವರು ಮಾತ್ರ ಫೋನ್ ಕದ್ದಾಲಿಕೆ ಮಾಡುತ್ತಾರೆ. ನನಗೆ ಯಾರು ಏನು ಮಾಡುತ್ತಾರೆ ಎನ್ನುವುದು ಬೇಕಾಗಿಲ್ಲ. ಅಲ್ಲದೆ ಅವರು ಏನು ಅಂತಾರೆ, ಇವರೇನು ಅಂತಾನೆ ಎನ್ನುವುದನ್ನು ತಿಳಿದುಕೊಳ್ಳುವ ಅವಶ್ಯಕತೆ ನನಗೆ ಇಲ್ಲ. ಪೋನ್ ಕದ್ದಾಲಿಗೆ ಯಾಕೆ ಮಾಡ್ತಿದ್ದಾರೆ ಅಂತ ನನಗೆ ಅರ್ಥವಾಗುತ್ತಿಲ್ಲ. ಎಲ್ಲವನ್ನು ನೇರವಾಗಿ ಮಾತನಾಡುವವನು ನಾನು. ಹೀಗಾಗಿ ಇದಕ್ಕೆ ಹೆದರುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಫೋನ್ ಕದ್ದಾಲಿಕೆ ಕುರಿತು ಸೂಕ್ತ ತನಿಖೆಯಾಗಲಿ, ಹಿಂದೆಯೂ ಈ ಕುರಿತು ತನಿಖೆ ಆಗಿದೆ. ಈಗಲೂ ಸೂಕ್ತ ತನಿಖೆ ಆಗಲಿ. ವಿಶ್ವನಾಥ್ ಆರೋಪ ಹಾಗೂ ಕುಮಾರಸ್ವಾಮಿಯವರು ಮಾಡಿಸಿದ್ದಾರೆ ಎನ್ನುವುದು ನನಗೆ ಗೊತ್ತಿಲ್ಲ ಎಂದು ತಿಳಿಸಿದರು.

GTD HDK

ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ್ದ ಜಿಟಿಡಿ, ಮೈಸೂರು ಜಿಲ್ಲಾ ಹಾಲು ಒಕ್ಕೂಟದ ಚುನಾವಣೆ ಕಳೆದ ತಿಂಗಳ 9 ರಂದು ನಿಗದಿಯಾಗಿತ್ತು. ಆದರೆ ಚುನಾವಣೆಯಲ್ಲಿ ಗೊಂದಲ ಉಂಟಾಗಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಲು ಆಗಮಿಸಿದ್ದೆ. ಡೈರಿ ಚುನಾವಣೆ ನಡೆಯದ ಕಾರಣ ಹುದ್ದೆ ಖಾಲಿ ಇದ್ದು, ಪರಿಣಾಮ ರೈತರಿಗೆ ಬಿಡುಗಡೆಯಾಗಬೇಕಾದ ಹಣ ಲಭಿಸುತ್ತಿಲ್ಲ ಎಂದು ಹೇಳಿದ್ದರು.

ರೈತರ ಸಮಸ್ಯೆಯಿಂದ ನಾನೇ ಬಂದು ಈ ಬಗ್ಗೆ ಸಿಎಂ ಅವರಿಗೆ ಮನವರಿಕೆ ಮಾಡಿದ್ದೇನೆ. ಸಿಎಂ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ ಎಂದರು. ಇದೇ ಸಂದರ್ಭದಲ್ಲಿ ಜೆಡಿಎಸ್ ಪಕ್ಷ ಬಿಡುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಈ ಹಿಂದೆಯೇ ಹಲವು ಬಾರಿ ಸ್ಪಷ್ಟ ಪಡಿಸಿದ್ದು, ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದಿದ್ದರು. ಬಳಿಕ ಮಾತನಾಡಿದ್ದ ಬಿಎಸ್‍ವೈ, ಈ ಭೇಟಿಯಲ್ಲಿ ಯಾವುದೇ ವಿಶೇಷ ಇಲ್ಲ. ಕ್ಷೇತ್ರದ ಸಮಸ್ಯೆ ಬಗ್ಗೆ ಮಾತನಾಡಲು ಅವರು ಬಂದಿದ್ದರು ಅಷ್ಟೇ ಎಂದು ಸ್ಪಷ್ಟಪಡಿಸಿದ್ದರು.

TAGGED:BS Yeddyurappa Housechief ministerGT DevegowdaMymulphone trapingPublic TVಜಿ.ಟಿ.ದೇವೇಗೌಡಪಬ್ಲಿಕ್ ಟಿವಿಫೋನ್ ಕದ್ದಾಲಿಕೆಬಿ.ಎಸ್.ಯಡಿಯೂರಪ್ಪ ಮನೆಮುಖ್ಯಮಂತ್ರಿಮೈಮುಲ್
Share This Article
Facebook Whatsapp Whatsapp Telegram

Cinema Updates

Katrina Kaif
ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್‌ ರಾಯಭಾರಿ
3 hours ago
ZEE Kannada 2
ಹೊಸ ಅಧ್ಯಾಯಕ್ಕೆ ʻಜೀ ಕನ್ನಡʼ ಮುನ್ನುಡಿ…
16 hours ago
Deepika padukone
ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್ ಘೋಷಿಸಿದ ದೀಪಿಕಾ ಪಡುಕೋಣೆ
18 hours ago
Kamal Hassan Surya 2
ನಟ ಸೂರ್ಯ ಜೊತೆಗೆ ಬಿಗ್‌ ಬಜೆಟ್‌ ಸಿನಿಮಾಗೆ ಕಮಲ್‌ ಪ್ಲ್ಯಾನ್‌
22 hours ago

You Might Also Like

Ballari Tukaram
Bellary

ಬಳ್ಳಾರಿ ಚುನಾವಣೆಗೆ 21 ಕೋಟಿ ಹಣ ಬಳಕೆ ಆರೋಪ – ಸಂಸದ ತುಕಾರಾಂ ಇಡಿ ವಶಕ್ಕೆ

Public TV
By Public TV
27 minutes ago
rain weather
Bengaluru City

ರಾಜ್ಯದಲ್ಲಿ ಮುಂದಿನ 4 ದಿನಗಳವರೆಗೆ ಭಾರೀ ಮಳೆ – 30 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Public TV
By Public TV
57 minutes ago
tukaram 1 2
Bellary

ವಾಲ್ಮೀಕಿ ಹಗರಣ; ಸಂಸದ ತುಕಾರಾಂ, ಮೂವರು ಶಾಸಕರ ಮನೆ ಮೇಲೆ ED ದಾಳಿ

Public TV
By Public TV
1 hour ago
Meghalaya Honeymoon
Latest

ರಾಜಾ ರಘುವಂಶಿ ಕೊಲೆ ಪ್ರಕರಣ – ಹಂತಕಿ ಸೇರಿ ಐವರನ್ನು ಮೇಘಾಲಯಕ್ಕೆ ಕರೆತಂದ ಪೊಲೀಸರು

Public TV
By Public TV
2 hours ago
Kolar Srinivaspur Bandh Mango Price Drop
Districts

Kolar | ಮಾವಿನ ಹಣ್ಣಿಗೆ ಬೆಲೆ ಕುಸಿತ – ಇಂದು ಶ್ರೀನಿವಾಸಪುರ ತಾಲೂಕು ಬಂದ್

Public TV
By Public TV
2 hours ago
Shubhanshu Shukla 3
Latest

ತಾಂತ್ರಿಕ ದೋಷ – ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾತ್ರೆ ಮುಂದೂಡಿಕೆ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?