-ಇರುವಷ್ಟು ದಿನ ಸೌಹಾರ್ದಯುತವಾಗಿ ಉತ್ತಮ ಹೆಜ್ಜೆ ಇಡಲು ವಿನಂತಿ
ಬೆಂಗಳೂರು: ಮಂತ್ರಿಗಳು ಇನ್ನಾದರೂ ದ್ವೇಷದ ರಾಜಕಾರಣವನ್ನು ಬದಿಗಿಟ್ಟು, ಕೇಂದ್ರ ಸರ್ಕಾರದ ಜೊತೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (BY Vijayendra) ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿಗಳು ಇನ್ನಾದರೂ ದ್ವೇಷದ ರಾಜಕಾರಣವನ್ನು ಬದಿಗಿಡಬೇಕು. ಕೇಂದ್ರ ಸರ್ಕಾರದ ಜೊತೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು. ಇದರಿಂದ ರಾಜ್ಯಕ್ಕೆ ಮತ್ತು ಬಡವರಿಗೆ ಒಳ್ಳೆಯದಾಗುತ್ತದೆ. ಇರುವಷ್ಟು ದಿನ ಉತ್ತಮ ಹೆಜ್ಜೆ ಇಡಲಿ ವಿನಂತಿಸಿಕೊಂಡಿದ್ದಾರೆ.ಇದನ್ನೂ ಓದಿ: ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ: ಪರಮೇಶ್ವರ್
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸಿ ನೀಡಿದ ಆದೇಶವನ್ನು ರಾಜ್ಯದ ಹೈಕೋರ್ಟ್ ರದ್ದು ಮಾಡಿದೆ. ಜನೌಷಧಿ ಕೇಂದ್ರಗಳನ್ನು ಮತ್ತೆ ತೆರೆಯಲು ಸೂಚಿಸಿರುವುದನ್ನು ಸ್ವಾಗತಿಸುತ್ತೇವೆ. ಜನೌಷಧಿ ಕೇಂದ್ರಗಳು ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಒಂದು ಕಾರ್ಯಕ್ರಮ, ಒಂದು ಕೊಡುಗೆ. ಈ ರಾಜ್ಯದ, ದೇಶದ ಬಡಜನರಿಗೆ ಕೈಗೆಟಕುವ ದರದಲ್ಲಿ ಔಷಧಿಗಳು ಸಿಗಬೇಕು. ಇದರಿಂದ ಬಡವರಿಗೆ ಅನುಕೂಲ ಆಗಬೇಕೆಂಬ ಸದುದ್ದೇಶದಿಂದ ಆ ಕಾರ್ಯಕ್ರಮ ಜಾರಿಗೊಳಿಸಿದ್ದರು ಎಂದು ವಿವರಿಸಿದ್ದಾರೆ.
ಮೋದಿಜೀ ಅವರ ಜನಪ್ರಿಯತೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ರಾಜ್ಯದ ಕಾಂಗ್ರೆಸ್ ಸರ್ಕಾರ, ಸಿದ್ದರಾಮಯ್ಯನವರಿಗೆ ಮೋದಿಜೀ ಅವರ ಜನಪ್ರಿಯತೆ ಸಹಿಸಿಕೊಳ್ಳಲು ಸಾಧ್ಯ ಆಗುತ್ತಿಲ್ಲ. ಅಹಿಂದ ಮುಖ್ಯಮಂತ್ರಿ ಎಂದು ಬೊಬ್ಬೆ ಹೊಡೆಯುವ ಸಿದ್ದರಾಮಯ್ಯನವರು ಒಬ್ಬ ಹಿಂದುಳಿದ ಸಮುದಾಯಕ್ಕೆ ಸೇರಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಜೀ ಅವರು ಕೇಂದ್ರದಲ್ಲಿ ಸಾಕಷ್ಟು ಜನಪರ ಕಾರ್ಯಕ್ರಮಗಳನ್ನು, ಯೋಜನೆಗಳನ್ನು ಕೊಟ್ಟಿದ್ದಾರೆ. ಸ್ವಾತಂತ್ರ್ಯನಂತರದಲ್ಲಿ ಪ್ರಥಮ ಬಾರಿಗೆ ಸತತವಾಗಿ 3ನೇ ಬಾರಿಗೆ ಪ್ರಧಾನಿಯಾಗಿ ಅವರು ಸೇವೆ ಸಲ್ಲಿಸುತ್ತಿದ್ದಾರೆ. ಅವರು ಕೊಟ್ಟಿರುವ ಬಡವರ ಯೋಜನೆಗೆ ಕಲ್ಲು ಹಾಕುವ ಷಡ್ಯಂತ್ರ, ಹುನ್ನಾರ ಸಿದ್ದರಾಮಯ್ಯನವರ ಸರ್ಕಾರದ್ದಾಗಿತ್ತು ಎಂದು ಟೀಕಿಸಿದ್ದಾರೆ.ಇದನ್ನೂ ಓದಿ:ಅನಧಿ ಕೃತ ವಾಣಿಜ್ಯ ಉತ್ಪನ್ನಗಳ ಜಾಹೀರಾತಿಗೆ ಹೆಸರು ದುರುಪಯೋಗ: ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಸಲ್ಮಾನ್ ಖಾನ್

