ಸುಟ್ಟು ಕರಕಲಾದ ಐಷರಾಮಿ ಕಾರಿನಲ್ಲಿ ಮೃತದೇಹ – ಸಜೀವ ದಹನದ ಶಂಕೆ

Public TV
1 Min Read
ckb car

ಚಿಕ್ಕಬಳ್ಳಾಪುರ: ಸಂಪೂರ್ಣ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಐಷಾರಾಮಿ ಕಾರಿನಲ್ಲಿ ಮೃತದೇಹವೊಂದು ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೇತನಾಯಕನಹಳ್ಳಿ ಬಳಿ ನಡೆದಿದೆ.

ಚಿಂತಾಮಣಿ-ದಿಬ್ಬೂರಹಳ್ಳಿ ಮಾರ್ಗದ ಕೇತನಾಯಕನಹಳ್ಳಿ ಬಳಿಯ ಮುಖ್ಯ ರಸ್ತೆಯ ಬದಿಯ ನೀಲಗಿರಿ ತೋಪಿನಲ್ಲಿ ಸುಟ್ಟು ಕರಕಲಾದ ಬ್ರಿಜಾ ಕಾರು ಪತ್ತೆಯಾಗಿದೆ. ಕಾರಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಸಹ ಪತ್ತೆಯಾಗಿದೆ.

ckb car2

ಸುಟ್ಟು ಕರಕಲಾದ ಕಾರು ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಘಟನಾ ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯ ವೃತ್ತನೀರೀಕ್ಷಕ ಶ್ರೀನಿವಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಟ್ಟು ಕರಕಲಾದ ಕಾರು ಬ್ರಿಜಾ ಕಾರಾಗಿದ್ದು, ಕಾರಿನ ನಂಬರ್ ಸಹ ಸಂಪೂರ್ಣ ಸುಟ್ಟು ಹೋಗಿದೆ. ಹೀಗಾಗಿ ಕಾರು ಯಾರದ್ದು, ಮೃತಪಟ್ಟವರು ಯಾರು ಎಂಬುದು ತಿಳಿದುಬಂದಿಲ್ಲ. ಸದ್ಯ ಇದು ಸಜೀವದಹನವೋ ಅಥವಾ ಯಾರಾದರೂ ಕೊಲೆ ಮಾಡಿ ಕಾರು ಸಮೇತ ವ್ಯಕ್ತಿಯನ್ನು ಸುಟ್ಟು ಹಾಕಿದರೋ ಎಂಬ ಅನುಮಾನ ಮೂಡಿದೆ.

Share This Article
Leave a Comment

Leave a Reply

Your email address will not be published. Required fields are marked *