ಚಿಕ್ಕಬಳ್ಳಾಪುರ: ಮುಂಬೈಗೆ ಹಾರಿದ್ದ ಶಾಸಕ ಡಾ. ಸುಧಾಕರ್ ಅವರು ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ.
ಇಂದು ಬೆಳಗ್ಗೆ ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರು ಮಾಧ್ಯಮಕ್ಕೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಅಲ್ಲದೆ ನೀವೇ ಎಲ್ಲ ಹಾಕ್ಕೊಟ್ಟಿದ್ದು ಎಂದು ಬೇಸರ ವ್ಯಕ್ತಪಡಿಸಿ ಬೆಂಗ್ಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ.
ಅಸಮಾಧಾನಿತರ ಪಟ್ಟಿಯಲ್ಲಿ ಡಾ. ಸುಧಾಕರರ್ ಅವರು ಕೂಡ ಇದ್ದು, ಎರಡು ದಿನದಿಂದ ಸದನಕ್ಕೆ ಹಾಜರಾಗಿರಲಿಲ್ಲ. ನಿನ್ನೆ ಮುಂಬೈಗೆ ತೆರಳಿದ್ದ ಅವರು ಇಂದು ಬೆಳಗ್ಗೆ ದಿಢೀರ್ ಎಂದು ಏರ್ ಪೋರ್ಟ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಬಳಿಕ ಬೆಂಗಳೂರಿಗೆ ವಾಪಸ್ಸಾಗಿದ್ದು, ಇದೀಗ ಸುಧಾಕರ್ ನಡೆ ತೀವ್ರ ಅನುಮಾನಕ್ಕೀಡು ಮಾಡಿದೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಭಾಗಿಯಾಗಲಿದ್ದಾರೆ. ಈ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಖಡಕ್ ಸೂಚನೆಯಿಂದ ಹೆದರಿ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ ಎನ್ನಲಾಗಿದೆ.
ಇತ್ತ ರಾಯಚೂರು ಗ್ರಾಮಾಂತರ ಶಾಸಕ ಬಸವನಗೌಡ ದದ್ದಲ್ಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮ ನೀಡಿ ಆದೇಶ ಹೊರಡಿಸಿದ್ದಾರೆ. ಪ್ರತಾಪ್ಗೌಡ ಹಾಗೂ ಬಸವನಗೌಡ ಈ ಇಬ್ಬರೂ ಶಾಸಕರು ಬಿಜೆಪಿ ಕಡೆಗೆ ವಾಲುವ ಅನುಮಾನ ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ ಇಬ್ಬರಿಗೂ ಸಂಪುಟ ದರ್ಜೆ ಸ್ಥಾನಮಾನ ನೀಡಿದ್ದಾರೆ. ಆದರೆ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಡಾ.ಸುಧಾಕರ್ಗೆ ಮಾಲಿನ್ಯ ನಿಯಂತ್ರಣ ಮಂಡಳಿ ಇನ್ನೂ ಮರೀಚಿಕೆಯಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನದ ಬಗ್ಗೆ ಇನ್ನೂ ಸಸ್ಪೆನ್ಸ್ ಇರಿಸಿದ್ದು, ಸುಧಾಕರ್ ನಡೆ ಕುತೂಹಲ ಮೂಡಿಸಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv