Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಮ್ಮಿಶ್ರ ಸರ್ಕಾರ ಪತನಕ್ಕೆ ಮಾಜಿ ಸಿಎಂ ಹುನ್ನಾರವೇ ಕಾರಣ: ಕೆ.ಪಿ.ಬಚ್ಚೇಗೌಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಸಮ್ಮಿಶ್ರ ಸರ್ಕಾರ ಪತನಕ್ಕೆ ಮಾಜಿ ಸಿಎಂ ಹುನ್ನಾರವೇ ಕಾರಣ: ಕೆ.ಪಿ.ಬಚ್ಚೇಗೌಡ

Chikkaballapur

ಸಮ್ಮಿಶ್ರ ಸರ್ಕಾರ ಪತನಕ್ಕೆ ಮಾಜಿ ಸಿಎಂ ಹುನ್ನಾರವೇ ಕಾರಣ: ಕೆ.ಪಿ.ಬಚ್ಚೇಗೌಡ

Public TV
Last updated: September 24, 2019 10:51 pm
Public TV
Share
2 Min Read
Siddu K P Bachegowda
SHARE

– ನಿಖಿಲ್ ಹೆಗಲಿಗೆ ಚಿಕ್ಕಬಳ್ಳಾಪುರ ಉಪಚುನಾವಣೆ ಉಸ್ತುವಾರಿ
– ಜೆಡಿಎಸ್ ಅಭ್ಯರ್ಥಿಯಾಗಿ ಕೆ.ಪಿ.ಬಚ್ಚೇಗೌಡ ಆಯ್ಕೆ

ಚಿಕ್ಕಬಳ್ಳಾಪುರ: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯನವರ ಹುನ್ನಾರವೇ ಕಾರಣ ಎಂದು ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ ಆರೋಪಿಸಿದ್ದಾರೆ.

ನಗರದಲ್ಲಿ ಮಾತನಾಡಿದ ಮಾಜಿ ಶಾಸಕರು, ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಅವರು ಅಧಿಕಾರ ಕಳೆದುಕೊಂಡ ನಂತರ ಒಬ್ಬೊಬ್ಬರು ಒಂದೊಂದು ರೀತಿ ಟೀಕೆ ಮಾಡುತ್ತಿದ್ದಾರೆ. ಮೈತ್ರಿ ಸರ್ಕಾರದ ಅವಧಿಯಲ್ಲಿ ಸಿದ್ದರಾಮಯ್ಯ ಅವರು ತಮ್ಮ ಆಪ್ತ ವಲಯದ ಶಾಸಕರಿಂದ ಕುಮಾರಸ್ವಾಮಿ ಅವರಿಗೆ ಬೆದರಿಕೆ ಹಾಕಿಸಿದ್ದರು. ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ ತಾವು ಸಿಎಂ ಆಗಲು ಯತ್ನಿಸಿದ್ದರು. ಮೈತ್ರಿ ಸರ್ಕಾರದಿಂದ ಹೊರಗೆ ಬಂದ ಸಿದ್ದರಾಮಯ್ಯನವರ ಆಪ್ತ ಶಾಸಕರನ್ನು ಬಿಜೆಪಿಯವರು ಹಿಡಿದುಕೊಂಡರು. ಇದರಿಂದಾಗಿ ಕುಮಾರಸ್ವಾಮಿ ಅವರು ಸಿಎಂ ಸ್ಥಾನವನ್ನು ಕಳೆದುಕೊಂಡರು. ಅತ್ತ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗುವ ಆಸೆಯೂ ಆಸೆಯಾಗಿಯೇ ಉಳಿಯಿತು ಎಂದು ಹೇಳಿದರು.

nikhil

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ ಅವರನ್ನು ಆಯ್ಕೆ ಮಾಡಿ ಮಾಜಿ ಸಿಎಂ ಕುಮಾರಸ್ವಾಮಿ ಅಂತಿಮಗೊಳಿಸಿದ್ದಾರೆ. ಜೊತೆಗೆ ಈ ಕ್ಷೇತ್ರವನ್ನು ಕುಮಾರಸ್ವಾಮಿ ಪ್ರತಿಷ್ಠೆಯಾಗಿ ತೆಗೆದುಕೊಂಡು ಸಮ್ಮಿಶ್ರ ಸರ್ಕಾರ ಕೆಡವಲು ಪಾತ್ರವಹಿಸಿದ ಸುಧಾಕರ್ ಅವರಿಗೆ ತಕ್ಕಪಾಠ ಕಲಿಸಲು ತೀರ್ಮಾನಿಸಿದ್ದಾರಂತೆ. ಈ ನಿಟ್ಟಿನಲ್ಲಿ ಭರ್ಜರಿ ಚುನಾವಣಾ ಪ್ರಚಾರ ನಡೆಸುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ. ಅಷ್ಟೇ ಅಲ್ಲದೆ ತಮ್ಮ ಮಗ ನಿಖಿಲ್ ಕುಮಾರಸ್ವಾಮಿ ಅವರನ್ನು ಚಿಕ್ಕಬಳ್ಳಾಪುರ ಕ್ಷೇತ್ರದ ಉಸ್ತುವಾರಿಯಾಗಿ ನೇಮಕ ಮಾಡಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜೆಡಿಎಸ್‍ನ ಮಾಜಿ ಶಾಸಕ ಬಚ್ಚೇಗೌಡ ಅವರು, ನಾನು ಕಳೆದ ವಿಧಾನಸಭೆ ಚುನಾವಣೆಯ ಸೋಲಿನ ನಂತರ ಮುಂದೆ ಚುನಾವಣೆಗೆ ಸ್ಪರ್ಧೆ ಮಾಡದಿರಲು ತೀರ್ಮಾನಿಸಿದ್ದೆ. ಆದರೆ ಅನಿವಾರ್ಯವಾಗಿ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಉಪಚುನಾವಣೆ ಎದುರಾಗಿದೆ. ಹೀಗಾಗಿ ಕ್ಷೇತ್ರದ ಕಾರ್ಯಕರ್ತರು ಹಾಗೂ ಮುಖಂಡರ ಸಭೆ ನಡೆಸಿದ ಮಾಜಿ ಸಿಎಂ ಕುಮಾರಸ್ವಾಮಿ, ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಡ ಹಾಕಿದರು. ಇದರಿಂದಾಗಿ ಈ ಬಾರಿಯ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡಲು ತೀರ್ಮಾನಿಸಿದ್ದೇನೆ ಎಂದು ತಿಳಿಸಿದರು.

Bachegowda

ಅನರ್ಹ ಶಾಸಕ ಡಾ. ಕೆ.ಸುಧಾಕರ್ ಅಧಿಕಾರದ ಲಾಲಸೆಗೆ ಅನಿವಾರ್ಯವಾಗಿ ಉಪಚುನಾವಣೆ ಎದುರಾಗಿದ್ದು, ಪಕ್ಷಾಂತರ ಮಾಡುವುದು ಅಕ್ಷಮ್ಯ ಅಪರಾಧ. 17 ಜನ ಅನರ್ಹ ಶಾಸಕರು ಸ್ವಯಂಕೃತ ಅಪರಾಧ ಎಸಗಿದ್ದಾರೆ. ಈ ಮೂಲಕ ತಮ್ಮ ತಲೆಯೇ ಮೇಲೆ ತಾವೇ ಬಂಡೆ ಎಳೆದುಕೊಂಡಿದ್ದಾರೆ ಎಂದು ಗುಡುಗಿದರು.

2018ರ ವಿಧಾನಸಭಾ ಚುನಾವಣೆಯಲ್ಲಿ ಸೀರೆ, ಕುಕ್ಕರ್, ಮಿಕ್ಸಿ, ಹಣ ಹಂಚಿ ವಾಮಮಾರ್ಗದಿಂದ ಸುಧಾಕರ್ ಆಯ್ಕೆಯಾದರು. ಆದರೆ ಜನತೆ ಕೊಟ್ಟ ಅಧಿಕಾರವನ್ನು ಬಿಟ್ಟು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಈಗ ಮತ್ತೆ ಚುನಾವಣೆಗೆ ಬರುತ್ತಿದ್ದಾರೆ. ಇಂತಹ ಭ್ರಷ್ಟ ಹಾಗೂ ಪಕ್ಷಾಂತರಿಗಳು ಜನತೆಯ ತೀರ್ಪಿಗೆ ವಿರುದ್ಧವಾಗಿ ನಡೆದುಕೊಂಡವರಿಗೆ ಮತ ಹಾಕಬೇಡಿ ಅಂತ ಕೈ ಮುಗಿದು ಪ್ರಾರ್ಥನೆ ಮಾಡಿಕೊಳ್ಳುತ್ತೇನೆ ಎಂದು ಮತದಾರರಿಗೆ ಕೇಳಿಕೊಂಡರು.

K SUDHAKAR

TAGGED:By pollchikkaballapurjdsK P BachegowdaPublic TVಉಪ ಚುನಾವಣೆಕೆ.ಪಿ.ಬಚ್ಚೇಗೌಡಜೆಡಿಎಸ್ಪಬ್ಲಿಕ್ ಟಿವಿಮಾಜಿ ಸಿಎಂ ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
2 minutes ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
34 minutes ago
Raichur 1
Districts

ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
1 hour ago
Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
1 hour ago
Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
2 hours ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?