ಚಿಕ್ಕಬಳ್ಳಾಪುರ: ಪುಟಗೋಸಿ ನಿಗಮ ಮಂಡಳಿಗಾಗಿ ನಿಮ್ಮ ಕಾರ್ಯಕರ್ತರಿಂದ ಹೋರಾಟ ಮಾಡಿಸಿದ್ರಿ ಎಂದು ಜಿಲ್ಲೆಯ ಜೆಡಿಎಸ್ ಮುಖಂಡರು ಶಾಸಕ ಡಾ ಕೆ.ಸುಧಾಕರ್ ವಿರುದ್ಧ ಹರಿಹಾಯ್ದಿದ್ದಾರೆ.
ರಾಜ್ಯ ಮಾಲಿನ್ಯ ನಿಯಂತ್ರಣ (ಪಿಸಿಬಿ) ಮಂಡಳಿ ಅಧ್ಯಕ್ಷ ಸ್ಥಾನ ತಪ್ಪಿದ್ದರಿಂದ ಸಿಎಂ ಕುಮಾರಸ್ವಾಮಿ ವಿರುದ್ಧ ಶಾಸಕ ಸುಧಾಕರ್ ಟೀಕೆ ಮಾಡಿದ್ದರು. ಹೀಗಾಗಿ ಶಾಸಕರ ಮೇಲೆ ಜೆಡಿಎಸ್ ಮುಖಂಡರು ಕೆಂಡಾಮಂಡಲರಾಗಿದ್ದಾರೆ. ಇದನ್ನು ಓದಿ: ಸುಮಲತಾ ಪರ ಬ್ಯಾಟ್ ಮಾಡಿ ಸಿಎಂಗೆ ಶಾಸಕ ಸುಧಾಕರ್ ಟಾಂಗ್!
ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜೆಡಿಎಸ್ ಮುಖಂಡ ಹಾಗೂ ಜಿಲ್ಲಾ ಪಂಚಾಯತಿ ಸದಸ್ಯ ರಾಜಾಕಾಂತ್, ಪುಟಗೋಸಿ ನಿಗಮಮಂಡಳಿಗಾ ನೀವು ಇಷ್ಟೆಲ್ಲಾ ಮಾಡಿದ್ದು..? ಸಿಎಂ ಕುಮಾರಸ್ವಾಮಿ, ಪಕ್ಷದ ವರಿಷ್ಠ ದೇವೇಗೌಡ ಅವರ ವಿರುದ್ಧ ಹಗುರವಾಗಿ ಮಾತನಾಡಿದ್ರೇ ಹೋರಾಟ ಮಾಡಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದರು. ಇದನ್ನು ಓದಿ: ಹೈಕಮಾಂಡಿಗೆ ಎಚ್ಚರಿಕೆ ನೀಡಿ ಜೆಡಿಎಸ್ ವಿರುದ್ಧ ಸುಧಾಕರ್ ಕೆಂಡಾಮಂಡಲ
ಜಿಲ್ಲಾ ಪಂಚಾಯತಿ ಸದಸ್ಯ ಮುನೇಗೌಡ ಮಾತನಾಡಿ, ಶಾಸಕ ಸುಧಾಕರ್ ನೋಡಿ ಯಾರು ವೋಟ್ ಹಾಕ್ತಾರೆ..? ಅವರ ವರ್ತನೆಯಿಂದ ಕ್ಷೇತ್ರದ ಜನ ಬೇಸತ್ತಿದ್ದಾರೆ. ಶಾಸಕರು ಮುಂಬೈ, ದೆಹಲಿ ಎಂದು ಹೇಳುತ್ತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಿಂದೆ ಓಡಿ ಹೋಗುತ್ತಾರೆ. ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಮಂತ್ರಿಗಿರಿ ಬೇಕು ಅಂತ ಕಾರ್ಯಕರ್ತರಿಂದ ಹೋರಾಟ, ಕಲ್ಲು ತೂರಾಟ ಮಾಡಿಸಿದರು. ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೊಡದಿದ್ದರೆ ಸಾಮೂಹಿಕ ರಾಜೀನಾಮೆ ಕೊಡುತ್ತೇವೆಂದು ಕಾಂಗ್ರೆಸ್ ನಾಯಕರ ಮೇಲೆ ಒತ್ತಡ ಹೇರಿದ್ದರು ಎಂದು ಶಾಸಕರಿಗೆ ತಿರುಗೇಟು ನೀಡಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv