Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬದುಕಿಗಾಗಿ ಹರಸಾಹಸ ಪಡುತ್ತಿರೋ ಸಾವಿರಾರು ಮಂದಿ ವೃದ್ಧರಿಗೆ ಬೇಕಿದೆ ಪಿಂಚಣಿ ಹಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | BELAKU | ಬದುಕಿಗಾಗಿ ಹರಸಾಹಸ ಪಡುತ್ತಿರೋ ಸಾವಿರಾರು ಮಂದಿ ವೃದ್ಧರಿಗೆ ಬೇಕಿದೆ ಪಿಂಚಣಿ ಹಣ

BELAKU

ಬದುಕಿಗಾಗಿ ಹರಸಾಹಸ ಪಡುತ್ತಿರೋ ಸಾವಿರಾರು ಮಂದಿ ವೃದ್ಧರಿಗೆ ಬೇಕಿದೆ ಪಿಂಚಣಿ ಹಣ

Public TV
Last updated: December 31, 2017 11:30 am
Public TV
Share
3 Min Read
CKB Belaku 1
SHARE

ಚಿಕ್ಕಬಳ್ಳಾಪುರ: ಸಾಮಾಜಿಕ ಭದ್ರತೆ ಹಿತದೃಷ್ಟಿಯಿಂದ ಸರ್ಕಾರ, ಆರ್ಥಿಕವಾಗಿ ಸಬರಲ್ಲದ, ದುರ್ಬಲ ವರ್ಗದ ವಯೋವೃದ್ಧರು, ವಿಕಲಚೇತನರು, ವಿಧವೆಯರು ಸೇರಿದಂತೆ ಅಸಹಾಯಕರಿಗೆ ಪ್ರತಿ ತಿಂಗಳು ಇಂತಿಷ್ಟು ಪಿಂಚಣಿ ಅಂತ ಹಣ ನೀಡಿ ಹಲವರ ಬದುಕಿಗೆ ಅಸರೆಯಾಗುತ್ತಿದೆ. ಆದ್ರೆ ಪ್ರತಿ ತಿಂಗಳು ಪಿಂಚಣಿ ಹಣ ಪಡೆದು ನೆಮ್ಮದಿಯ ನಿಟ್ಟುಸಿರು ಬಿಟ್ಟು ಬದುಕು ಸವೆಸುತ್ತಿದ್ದ ಸಾವಿರಾರು ಮಂದಿಯ ಬಾಳಿಗೆ ಆಧಾರ್ ಕಾರ್ಡ್ ಸಮಸ್ಯೆ ಈಗ ಅವರ ಬದುಕಿಗೇ ಆಧಾರವಾಗಿದ್ದಂತಹ ಪಿಂಚಣಿ ಹಣವೇ ಸಿಗದಂತೆ ಮಾಡಿ ಆಧಾರವೇ ಇಲ್ಲದಂತೆ ಮಾಡಿಬಿಟ್ಟಿದೆ.

ಹೌದು. ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಾಂತ ಸರಿಸುಮಾರು 40,000 ಮಂದಿ ವೃದ್ಧಾಪ್ಯವೇತನ, ವಿಕಲಚೇತನರ ಪಿಂಚಣಿ, ವಿಧವಾವೇತನ ಸೇರಿದಂತೆ ಹಲವು ಪಿಂಚಣಿ ಯೋಜನೆಯ ಫಲಾನುಭವಿಗಳಿದ್ದಾರೆ. ಆದ್ರೆ ಪಿಂಚಣಿ ಯೋಜನೆಗೆ ಆರ್ಹರಾಗಿರುವ ಫಲಾನುಭವಿಗಳು ತಮ್ಮ ಪಿಂಚಣಿ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕೆಂಬ ಕಾನೂನು ಬಂದಿರುವುದರಿಂದ ಇದೀಗ ಹಲವರ ಬಾಳಿಗೆ ಮುಳ್ಳಾಗಿ ಪರಿಣಮಿಸಿದೆ. ಅರಳುಮರುಳು ವಯಸ್ಸಲ್ಲಿ ಜೀವನಕ್ಕೆ ಆಧಾರವಾಗಿದ್ದ ಪಿಂಚಣಿ ಯೋಜನೆಯಿಂದಲೇ ವಂಚಿತರಾಗುವಂತೆ ಮಾಡಿದೆ.

CKB Belaku 2

ಚಿಕ್ಕಬಳ್ಳಾಪುರ ತಾಲೂಕೊಂದರಲ್ಲೇ 2,538 ಮಂದಿ ಫಲಾನುಭವಿಗಳು ಸೇರಿದಂತೆ ಜಿಲ್ಲೆಯ ಶಿಡ್ಲಘಟ್ಟ, ಚಿಂತಾಮಣಿ, ಬಾಗೇಪಲ್ಲಿ, ಗೌರಿಬಿದನೂರು ಹಾಗೂ ಗುಡಿಬಂಡೆ ತಾಲೂಕಿನಾದ್ಯಾಂತ ಕಳೆದ 3-4 ತಿಂಗಳನಿಂದ ಬರೋಬ್ಬರಿ 10,000ಕ್ಕೂ ಹೆಚ್ಚು ಮಂದಿ ವಿವಿಧ ಪಿಂಚಣಿ ಯೋಜನೆಗಳಿಂದ ಧಿಡೀರ್ ವಂಚಿತರಾಗಿದ್ದಾರೆ. ಇದ್ರಿಂದ ವಯೋವೃದ್ಧರು, ಕಣ್ಣು ಕಾಣದವರು, ಕಿವಿ ಕೇಳದವರು, ವಿಕಲಚೇತನರು, ಕನಿಷ್ಠ ನಡೆಯಲು ಆಗದವರು, ತೆವಳಿಕೊಂಡು ಬದುಕುತ್ತಿರುವ ಬಡ ಜೀವಗಳು, ಪಿಂಚಣಿ ಹಣ ಸಿಗದೆ ಕಣ್ಣಿರು ಹಾಕುತ್ತಾ ಪಡಬಾರದ ಕಷ್ಟ ಪಡುತ್ತಿದ್ದಾರೆ.

ಪಿಂಚಣಿ ಯೋಜನೆಯಿಂದ ವಂಚಿತರಾದ ಫಲಾನುಭವಿಗಳು ತಮ್ಮ ಪಿಂಚಣಿ ಹಣ ಬರ್ತಿಲ್ಲ ಅಂತ ಪ್ರತಿ ದಿನ ನಾಡಕಚೇರಿ, ತಾಲೂಕು ಕಚೇರಿ, ಅಂಚೆಕಚೇರಿ, ಜಿಲ್ಲಾಡಳಿತ ಭವನದ ಖಜಾನೆ ಇಲಾಖೆಯ ಪಿಂಚಣಿ ಶಾಖೆಗೆ ಅಲೆದು ಅಲೆದು ಸುಸ್ತಾಗಿ ಹೋಗಿದ್ದಾರೆ. ಅಲ್ಲದೇ ಹಳ್ಳಿಗಳಿಂದ ದೂರದ ತಾಲೂಕು ಕೇಂದ್ರ ಹಾಗೂ ಜಿಲ್ಲಾ ಕೇಂದ್ರದ ಕಚೇರಿ, ಅಧಿಕಾರಿಗಳ ಬಳಿ ಅಲೆದೂ ಅಲೆದೂ ತಮ್ಮ ಚಪ್ಪಲಿ ಸವೆಸುಕೊಂಡಿದ್ದಾರೆ ಹೊರೆತು ಪಿಂಚಣಿ ಹಣ ಮಾತ್ರ ಸಿಗ್ತಾ ಇಲ್ಲ. ಕನಿಷ್ಠ ಹಳ್ಳಿಗಳಿಂದ ಕಚೇರಿಗಳಿಗೆ ಬಂದು ಹೋಗೋಕೆ ಬಸ್ ಚಾರ್ಜ್ ಗೂ ಇವರ ಬಳಿ ಹಣ ಇಲ್ಲದ ಶೋಚನೀಯ ಸ್ಥಿತಿ.

CKB Belaku 3

ಅರಳು ಮರಳು ವಯಸ್ಸಲ್ಲಿ ಅನಾರೋಗ್ಯಪೀಡಿತರಾಗಿರೋ ಹಲವು ಮಂದಿ ವಯೋವೃದ್ಧರಿಗೆ ಪಿಂಚಣಿ ಹಣವೇ ಮಾತ್ರೆ-ಔಷಧಿಗಳ ಖರೀದಿಗೆ ಆಧಾರವಾದ್ರೇ, ಇನ್ನು ನಡೆಯಲಾಗದ ವಿಕಲಚೇತನರಿಗೆ ಊರಿಗೋಲಿನಂತೆ ಆಸರೆಯಾಗೋದು ಪಿಂಚಣಿ ಹಣವೇ. ಆದ್ರೆ ಅದೆಷ್ಟೋ ಮಂದಿಗೆ ಈಗ ಪಿಂಚಣಿ ಹಣವೇ ಸಿಗದೆ ಒಪ್ಪತ್ತೂ ಊಟ ಮಾಡಿ ಬದುಕುತ್ತಿದ್ದಾರೆ. ಹಲವು ಮಂದಿ ವಯೋವೃದ್ಧರು ಬರುತ್ತಿದ್ದ ಪಿಂಚಣಿ ಬಾರದೆ ಭಿಕ್ಷೆ ಬೇಡೋಕೆ ಮುಂದಾಗಿಬಿಟ್ಟಿದ್ದಾರೆ ಅನ್ನೋದೆ ದುರಂತ. ಇಂತಹ ಹತ್ತು ಹಲವು ನಿದರ್ಶನಗಳು ಪ್ರತಿನಿತ್ಯ ಕಣ್ಣು ಮುಂದೆ ನಮ್ಮನ್ನೇ ಕಾಡಿ ಕದಡಿ ಮನಕಲುಕತ್ತಿವೆ.

ಈ ಸಂಬಂಧ ಅಧಿಕಾರಿಗಳು ಮಾತ್ರ ಆಧಾರ್ ಸಮಸ್ಯೆ ಅಲ್ಲ ಬದಲಾಗಿ ಪಿಂಚಣಿ ಯೋಜನೆಯಿಂದ ರದ್ದಾದ ಫಲಾನುಭವಿಗಳು ಮರಣ ಹಾಗೂ ವಲಸೆ ಹೋಗಿದ್ದಾರೆ ಅಂತ ವರದಿ ಕೊಡುತ್ತಿದ್ದಾರೆ. ಆದ್ರೆ ಅಸಲಿಯತ್ತೇ ಬೇರೆ ಇದ್ದು, ಆಧಿಕಾರಿಗಳು ಸಮರ್ಪಕ ಪರಿಶೀಲನೆ ನಡೆಸದೆ ಕಾಟಚಾರದ ಕೆಲಸ ಮಾಡಿದ್ದು ಹಾಗೂ ತಾಂತ್ರಿಕ ಕಾರಣಗಳಿಂದ ಪಿಂಚಣಿ ಯೋಜನೆ ರದ್ದಾಗಿರೋದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಇಲ್ಲಿನ ಪ್ರಮುಖ ಮತ್ತೊಂದು ಸಮಸ್ಯೆ ಅಂದರೆ ಯಾರೇ ಫಲಾನುಭವಿ ಕಾರಣಾಂತರಗಳಿಂದ ಒಮ್ಮೆ ಪಿಂಚಣಿ ಯೋಜನೆಯಿಂದ ರದ್ದಾದ್ರೇ ಮತ್ತೆ ಹತ್ತು ಹಲವು ಕಚೇರಿಗಳನ್ನ ಅಲೆದು ಮೊದಲಿನಿಂದ ಪಿಂಚಣಿ ಯೋಜನೆಗೆ ಅರ್ಜಿ ಸಲ್ಲಿಸಿಬೇಕಿದೆ. ಆದ್ರೆ ಅರಳು ಮರಳು ವಯಸ್ಸಲ್ಲಿ, ಕನಿಷ್ಠೂ ನಡೆಯಲೂ ಆಗದ ವೃದ್ದರ ಕೈಯಲ್ಲಿ ಇದೆಲ್ಲಾ ಮಾಡೋಕೆ ಸಾಧ್ಯಾನಾ..? ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ಹಲವರ ಬಾಳಿಗೆ ಆಧಾರವಾಗಿದ್ದ ಪಿಂಚಣಿ ಯೋಜನೆ ಸೌಲಭ್ಯ ಮರಳಿ ಕಲ್ಪಿಸುವ ಮೂಲಕ ಪಬ್ಲಿಕ್ ಟಿವಿ ಬೆಳಕು ಕಾರ್ಯಕ್ರಮದ ಮೂಲಕ ಸಾವಿರಾರು ಮಂದಿಯ ಬಾಳಿಗೆ ಬೆಳಕು ನೀಡಬೇಕಿದೆ. ಒಟ್ಟಿನಲ್ಲಿ ಕೊನೆಗಾಲದ ಅವರ ಬದುಕಿನಲ್ಲಿ ನಗು ಮೂಡಿಸುವ ಕೆಲಸ ಮಾಡಬೇಕಿದೆ.

https://www.youtube.com/watch?v=L11yw0lYqqM

CKB Belaku 4

CKB Belaku 5

TAGGED:belakuchikkaballapurpensionsPublic TVಚಿಕ್ಕಬಳ್ಳಾಪುರಪಬ್ಲಿಕ್ ಟಿವಿಪಿಂಚಣಿಬೆಳಕು
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Vaibhav Sooryavanshi
Cricket

ಗುವಾಹಟಿಯಲ್ಲಿ ಸರಿಸಾಟಿಯಿಲ್ಲದ ವೈಭವ್‌ ಪ್ರದರ್ಶನ – ಆರ್‌ಸಿಬಿ ʻಜೋಶ್‌ʼಗೆ ಸೋಲಿನ ಪೆಟ್ಟು, ರಾಜಸ್ಥಾನ್‌ಗೆ 6 ವಿಕೆಟ್‌ ಜಯ

Public TV
By Public TV
54 minutes ago
Bidar Eshwar Khandre
Bidar

ಬೀದರ್‌ನ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್‌ ಖಂಡ್ರೆ‌‌

Public TV
By Public TV
2 hours ago
Dharwad 1
Dharwad

ಧಾರವಾಡ | ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ

Public TV
By Public TV
2 hours ago
Donald Trump Angry
Latest

ಮದ್ದುಗುಂಡುಗಳನ್ನ ಯುದ್ಧನೌಕೆಗೆ ತುಂಬಿಸ್ತಿದ್ದೇವೆ – ಮಾತುಕತೆಗೆ ಒಪ್ಪದಿದ್ರೆ ಇರಾನ್‌ ಮೇಲೆ ಭೀಕರ ದಾಳಿ: ಟ್ರಂಪ್‌ ಕೊನೇ ವಾರ್ನಿಂಗ್‌

Public TV
By Public TV
2 hours ago
01 9
Big Bulletin

ಬಿಗ್‌ ಬುಲೆಟಿನ್‌ 10 April 2026 ಭಾಗ-1

Public TV
By Public TV
3 hours ago
02 9
Big Bulletin

ಬಿಗ್‌ ಬುಲೆಟಿನ್‌ 10 April 2026 ಭಾಗ-2

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?