ಶಾಲೆಯ ಕೊಠಡಿಯಲ್ಲೇ ಮುಖ್ಯಶಿಕ್ಷಕ ನೇಣಿಗೆ ಶರಣು

Public TV
0 Min Read
CKB

ಚಿಕ್ಕಬಳ್ಳಾಪುರ: ವಸತಿ ಶಾಲೆಯ ಕೊಠಡಿಯಲ್ಲೇ ಮುಖ್ಯಶಿಕ್ಷಕನೊರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಪಟ್ಟಣದಲ್ಲಿ ನಡೆದಿದೆ.

ನಗರದ ಪರಿಶಿಷ್ಠ ಜಾತಿ ವಸತಿ ನಿಲಯದಲ್ಲಿ ಮುಖ್ಯಶಿಕ್ಷಕರಾಗಿದ್ದ ಗಂಗಣ್ಣ (55) ಮೃತ ಶಿಕ್ಷಕ. ಕೌಟುಂಬಿಕ ಕಲಹ ಹಾಗೂ ಸಾಲಭಾದೆ ಶಂಕೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ.

police 1 1

ಬೆಳಿಗ್ಗೆ ಎಂದಿನಂತೆ ವಸತಿ ಶಾಲೆಗೆ ಬಂದಿದ್ದ ಗಂಗಣ್ಣ ವಸತಿ ಶಾಲೆಯ ಮೊದಲ ಮಹಡಿಯ ಕೊಠಡಿಯೊಂದರಲ್ಲಿ ನೇಣಿಗೆ ಶರಣಾಗಿದ್ದಾರೆ. ಈ ಸಂಬಂಧ ಸಮಾಜಕಲ್ಯಾಣ ಇಲಾಖಾಧಿಕಾರಿಗಳು ಹಾಗೂ ಗೌರಿಬಿದನೂರು ನಗರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *