– ವೈದ್ಯನ ಬೆಂಬಲಕ್ಕೆ ನಿಂತ್ರಾ ಪೊಲೀಸರು?
ಚಿಕ್ಕಮಗಳೂರು: ಮದ್ಯದ ಅಮಲಿನಲ್ಲಿ ಚಿಕಿತ್ಸೆ ನೀಡಲು ಮುಂದಾಗಿದ್ದ ವೈದ್ಯರೊಬ್ಬರಿಗೆ ಸಾರ್ವಜನಿಕರು ಫುಲ್ ಕ್ಲಾಸ್ ತೆಗೆದುಕೊಂಡ ಘಟನೆ ಜಿಲ್ಲೆಯ ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ಕೊಪ್ಪ ಸರ್ಕಾರಿ ಆಸ್ಪತ್ರೆಯ ವೈದ್ಯ ನೀಲಕಂಠಪ್ಪ ಅವರು ನಿನ್ನೆ ರಾತ್ರಿ ಪಾಳೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಮದ್ಯ ಸೇವಿಸಿದ್ದ ನೀಲಕಂಠಪ್ಪ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾಗ, ವ್ಯಕ್ತಿಯೊಬ್ಬರ ಸಂಬಂಧಿಕರು ಕುಡಿದು ಚಿಕಿತ್ಸೆ ನೀಡುವುದು ಸರಿಯಲ್ಲ. ಒಂದು ವೇಳೆ ರೋಗಿಗೆ ಏನಾದರು ತೊಂದರೆ ಆದರೆ ನೀವೇ ಜವಾಬ್ದಾರರು ಎಂದು ಕಿಡಿಕಾರಿದ್ರು.
ಮದ್ಯದ ಮತ್ತಿನಲ್ಲಿದ್ದ ನೀಲಕಂಠಪ್ಪ ಕೂಡ ಸಾರ್ವಜನಿಕರ ಜೊತೆಗೆ ಜಗಳಕ್ಕೆ ಇಳಿದಿದ್ದು, ಅವಾಚ್ಯಪದಗಳಿಂದ ನಿಂದಿಸಿ, ಹಲ್ಲೆಗೆ ಯತ್ನಿಸಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಈ ಕುರಿತು ಮಾಹಿತಿ ಪಡೆಯುತ್ತಿದ್ದಂತೆ ಆಸ್ಪತ್ರೆಗೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಬಳಿಕ ವೈದ್ಯರ ಪರ ನಿಂತು ಸಾರ್ವಜನಿಕರ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.
ವೈದ್ಯ ನೀಲಕಂಠಪ್ಪ ಅವರು ಕುಡಿದು ಚಿಕಿತ್ಸೆ ನೀಡುತ್ತಿದ್ದಾರೆ. ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಅಂತ ಪೊಲೀಸರಿಗೆ ಮನವಿ ಮಾಡಿಕೊಂಡೆವು. ಆದರೆ ಪೊಲೀಸರು ವೈದ್ಯನ ಬೆಂಬಲಕ್ಕೆ ನಿಂತು ನಮ್ಮ ಮೇಲೆ ರೇಗಾಡಿದರು. ಅಷ್ಟೇ ಅಲ್ಲದೆ ನಮ್ಮ ವಿರುದ್ಧವೇ ದೂರು ದಾಖಲಿಸಿಕೊಂಡಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv