ಚಿಕ್ಕಮಗಳೂರು: ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿ (Pahalgam Terror Attack) ಹಾಗೂ ಮಂಗಳೂರು ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಹತ್ಯೆ ಖಂಡಿಸಿ ಚಿಕ್ಕಮಗಳೂರು (Chikkamagaluru) ಜಿಲ್ಲೆ ಸ್ವಯಂ ಘೋಷಿತ ಬಂದ್ಗೆ ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳ ಕರೆ ನೀಡಿದೆ.
ದೇಶದ ಬೇರೆಬೇರೆ ಕಡೆಗಳಲ್ಲಿ ಪಾಕಿಸ್ತಾನ ಪ್ರೇರೇಪಿತ ಮುಸ್ಲಿಮರು ಹಾಗೂ ಬಾಂಗ್ಲಾ ನುಸುಳುಕೋರರು ಪಹಲ್ಗಾಮ್, ಪಶ್ಚಿಮ ಬಂಗಾಳ ಸೇರಿದಂತೆ ಹಿಂದೂಗಳನ್ನು ಹತ್ಯೆಗೈಯುತ್ತಿದ್ದಾರೆ. ಇದರ ಮಧ್ಯೆ ಮೂರು ದಿನದ ಹಿಂದೆ ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನ ಹಿಂದೂ ಎಂಬ ಕಾರಣಕ್ಕೆ ತಿಂಗಳುಗಳಿಂದ ಸಂಚು ರೂಪಿಸಿ ಕೊಲೆ ಮಾಡಿದ್ದಾರೆ. ಇದನ್ನೂ ಓದಿ: ಚೆನ್ನೈ ಎಡವಟ್ಟಿನಿಂದ ಆರ್ಸಿಬಿಗೆ ಗೆಲುವು – ಬಿಸಿ ಬಿಸಿ ಚರ್ಚೆಗೆ ಗ್ರಾಸವಾದ DRS
ಇಡೀ ದೇಶದಲ್ಲಿ ಹಿಂದೂಗಳನ್ನ ಹತ್ಯೆ ಮಾಡುವ ಕೆಲಸ ನಡೆಯುತ್ತಿದೆ. ಹಾಗಾಗಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಚಿಕ್ಕಮಗಳೂರು ಜಿಲ್ಲೆ ಸ್ವಯಂಘೋಷಿತ ಬಂದ್ಗೆ ಕರೆ ಕೊಟ್ಟಿದ್ದು, ಜಿಲ್ಲೆಯ ಜನ ಹಿಂದೂಗಳ ಹತ್ಯೆ ಖಂಡಿಸಿ ಕರೆ ನೀಡಿರುವ ಈ ಸ್ವಯಂಘೋಷಿತ ಬಂದ್ಗೆ ಸಾರ್ವಜನಿಕರು, ಅಂಗಡಿ-ಮುಂಗಟ್ಟು, ವ್ಯಾಪಾರಿಗಳು ಹಾಗೂ ವರ್ತಕರು ಬೆಂಬಲ ನೀಡಬೇಕೆಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ರಂಗನಾಥ್ ಮನವಿ ಮಾಡಿದ್ದಾರೆ. ಇದನ್ನೂ ಓದಿ: Tumakuru | ಚಲಿಸುತ್ತಿದ್ದ ಲಾರಿಯಲ್ಲಿ ಕಾಣಿಸಿಕೊಂಡ ಬೆಂಕಿ – ಚಾಲಕ ಪಾರು