ಚಿಕ್ಕಮಗಳೂರು: ಚಾಲಕನ ಅಜಾಗರೂಕತೆಯಿಂದ ಸರ್ಕಾರಿ ಬಸ್ ಪಲ್ಟಿಯಾಗಿದ್ದು, 2 ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಕಾಟಿಗನಗೆರೆ ಬಳಿ ನಡೆದಿದೆ.
ಈ ಘಟನೆ ತಡರಾತ್ರಿ ನಡೆದಿದ್ದು, ಮೃತ ಮಗುವನ್ನು ಎರಡು ವರ್ಷದ ಸುಹಾಸ್ ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಹಲವರಿಗೆ ಗಂಭೀರವಾಗಿ ಗಾಯವಾಗಿದ್ದು, ಗಾಯಾಳುಗಳನ್ನು ತರೀಕೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಾಲಕನ ಅಜಾಗರೂಕತೆಯೇ ಘಟನೆಗೆ ಕಾರಣ ಎಂದು ಹೇಳಲಾಗಿದೆ.
- Advertisement 2
- Advertisement 3
ಧರ್ಮಸ್ಥಳ ದಿಂದ ಚಿತ್ರದುರ್ಗಕ್ಕೆ ಹೋಗುತ್ತಿದ್ದ ಸರ್ಕಾರಿ ಬಸ್ ಇದಾಗಿದ್ದು, ಚಾಲಕ ರಾತ್ರಿ ನಿದ್ರೆಗೆ ಜಾರಿದ ಹಿನ್ನೆಲೆ ಕಂಡಕ್ಟರ್ ಬಸ್ ಚಾಲನೆ ಮಾಡುತ್ತಿದ್ದನು. ಈ ವೇಳೆ ಬಸ್ ಪಲ್ಟಿಯಾಗಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಈ ಸಂಬಂಧ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.