‘ದೆವ್ವ’ವನ್ನು ಕಂಬಕ್ಕೆ ಕಟ್ಟಿ ಹೊಡೆದ ಮಲೆನಾಡಿಗರು

Public TV
1 Min Read
collage ckm devil

ಚಿಕ್ಕಮಗಳೂರು: ಶ್ರೀಗಂಧದ ಮರಗಳ ಕಳ್ಳತನಕ್ಕೆ ಬಂದಿದ್ದ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಅರೇಹಳ್ಳಿಯ ‘ದೆವ್ವ’ವನ್ನು ಮಲೆನಾಡಿಗರು ಕಂಬಕ್ಕೆ ಕಟ್ಟಿ ಹೊಡೆದಿದ್ದಾರೆ.

ಕೇಳೋಕೆ ಆಶ್ಚರ್ಯ ಅನ್ನಿಸಿದರು ಸತ್ಯ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಜಿ.ಹೊಸಳ್ಳಿ ಗ್ರಾಮದಂಚಿನಲ್ಲಿದ್ದ ಐದು ಶ್ರೀಗಂಧದ ಮರಗಳನ್ನ ಕದಿಯಲೆಂದು ಅರೇಹಳ್ಳಿಯ ಐವರು ಕಳ್ಳರು ಬಂದಿದ್ದರು. ಊರ ಹೊರಗೆ ಮರ ಕಡಿಯುವ ಶಬ್ಧವನ್ನು ಆಲಿಸಿದ ಗ್ರಾಮಸ್ಥರು ಸ್ಥಳಕ್ಕೆ ಬಂದಾಗ ಗಂಧದ ಕಳ್ಳರು ಮುಖಕ್ಕೆ ವಿಚಿತ್ರ ಮಾಸ್ಕ್ ಹಾಕಿ ಗ್ರಾಮಸ್ಥರನ್ನ ಹೆದರಿಸಲು ಪ್ರಯತ್ನಿಸಿದ್ದಾರೆ.

collage ckm devil 2

ದೆವ್ವಕ್ಕೆ ಹೆದರದ ಗ್ರಾಮಸ್ಥರು ಒಟ್ಟಾಗಿ ಮುನ್ನುಗ್ಗಿದಾಗ, ಮುಖದಿಂದ ಮಾಸ್ಕ್ ತೆಗೆದು ಎಲ್ಲರೂ ಓಡಲು ಆರಂಭಿಸಿದ್ದಾರೆ. ಆದರೆ ಊರಿನ ಜನ ಓರ್ವನನ್ನ ಹಿಡಿದು ಕಂಬಕ್ಕೆ ಕಟ್ಟಿ ಚೆನ್ನಾಗಿ ಹೊಡೆದು ಅರಣ್ಯ ಇಲಾಖೆಯ ವಶಕ್ಕೆ ನೀಡಿದ್ದಾರೆ. ಐವರಲ್ಲಿ ಓರ್ವ ಸಿಕ್ಕಿಬಿದ್ದಿದ್ದು, ನಾಲ್ವರು ತಪ್ಪಿಸಿಕೊಂಡಿದ್ದಾರೆ. ಬಂಧಿತರಿಂದ ಐದು ಗಂಧದ ತುಂಡು, ಆಟೋ, ಒಂದು ಬೈಕ್ ಹಾಗೂ ಮುಖವಾಡಗಳನ್ನು ಅರಣ್ಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *