– ಕೊಲೆಯೆಂದು ಆರೋಪಿಸುತ್ತಿರುವ ಪೋಷಕರು
ಚಿಕ್ಕಮಗಳೂರು: ಎಂಟು ತಿಂಗಳ ಹಿಂದೆಯಷ್ಟೇ ಪ್ರೀತಿಸಿದ ಯುವಕನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಯುವತಿ ಆತ್ಮಹತ್ಯೆಗೆ ಶರಣಾಗಿದ್ದು, ನವವಿವಾಹಿತೆಯ ಸಾವಿನ ಸುತ್ತ ಅನುಮಾನಗಳ ಹುತ್ತವೇ ಮೂಡಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಗಾಳಿಗುತ್ತಿ ಗ್ರಾಮದಲ್ಲಿ ನಡೆದಿದೆ.
8 ತಿಂಗಳ ಹಿಂದೆ ವಿವಾಹವಾಗಿದ್ದ ಗೃಹಿಣಿ ಗಂಡನ ಮನೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೃತಳನ್ನು ಕಡೂರು ತಾಲೂಕಿನ ಹಳೇ ಸಿದ್ದರಹಳ್ಳಿಯ ಶ್ವೇತಾ (18) ಎಂದು ಗುರುತಿಸಲಾಗಿದೆ. ಗಾಳಿಗುತ್ತಿ ಗ್ರಾಮದ ವಸಂತ್ ಅವರನ್ನು ಪ್ರೀತಿಸುತ್ತಿದ್ದ ಶ್ವೇತಾ ಎಂಟು ತಿಂಗಳ ಹಿಂದೆಯಷ್ಟೇ ಪ್ರೇಮ ವಿವಾಹವಾಗಿದ್ದಳು.
ಇದೀಗ ಶ್ವೇತಾ ಪೋಷಕರು ಪ್ರೇಮ ವಿವಾಹವಾಗಿದ್ದರಿಂದ ವರದಕ್ಷಿಣಿ ತಂದಿಲ್ಲ. ವರದಕ್ಷಿಣೆ ತೆಗೆದುಕೊಂಡು ಬಾ ಎಂದು ಆಕೆಯ ಗಂಡನ ಮನೆಯವರು ಪೀಡಿಸುತ್ತಿದ್ದರು. ಅವರೇ ಹೊಡೆದು ನಂತರ ವಿಷ ಕುಡಿಸಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಮೃತ ಶ್ವೇತಾ ಪೋಷಕರು ಕಡೂರು ಠಾಣೆಯಲ್ಲಿ ವರದಕ್ಷಿಣಿ ಕಿರುಕುಳವೆಂದು ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಕಡೂರು ಪೊಲೀಸರು ಶ್ವೇತಾ ಪತಿ ವಸಂತ್ನನ್ನ ಬಂಧಿಸಿ, ವಿಚಾರಣೆಗೊಳಪಡಿಸಿದ್ದಾರೆ.