ಚಿಕ್ಕಮಗಳೂರು: ಅತ್ತೆಯನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿ ಕಾಫಿ ತೋಟದಲ್ಲಿ ನೇಣಿಗೆ ಶರಣಾದ ಘಟನೆ ಮೂಡಿಗೆರೆ (Mudiger) ತಾಲೂಕಿನ ಭಾರತೀಬೈಲ್ ಗ್ರಾಮದಲ್ಲಿ ನಡೆದಿದೆ.
ನೇಣಿಗೆ ಶರಣಾದ ವ್ಯಕ್ತಿಯನ್ನು ಶಶಿಧರ್ ಎಂದು ಗುರುತಿಸಲಾಗಿದೆ. ಆತ ತನ್ನ ಸಹೋದರನ ಅತ್ತೆಯಾಗಿದ್ದ ಯಮುನಾ (65) ಎಂಬವರ ತಲೆಗೆ ಸುತ್ತಿಗೆಯಿಂದ ಹೊಡೆದು ಹತ್ಯೆ ಮಾಡಿದ್ದ. ಕುಡಿದ ಮತ್ತಿನಲ್ಲಿದ್ದ ಆತನಿಗೆ ಮಹಿಳೆ ತಿಳುವಳಿಕೆ ಹೇಳಿದ್ದಕ್ಕೆ ಹತ್ಯೆ ಮಾಡಿದ್ದ ಎಂದು ತಿಳಿದು ಬಂದಿದೆ.
Advertisement
Advertisement
ಮಹಿಳೆಯನ್ನು ಹತ್ಯೆಗೈದು ಪರಾರಿಯಾಗಿದ್ದ ಶಶಿಧರ್ಗಾಗಿ ಬಣಕಲ್ ಪೊಲೀಸರು ತೀವ್ರ ಹುಟುಕಾಟ ನಡೆಸಿದ್ದರು. ಆತನ ಶವ ಭಾರತೀಬೈಲ್ನ ಕಾಫಿತೋಟದಲ್ಲಿ ಮಂಗಳವಾರ ಮುಂಜಾನೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
Advertisement
Advertisement
ಈ ಸಂಬಂಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.