ಚಿಕ್ಕೋಡಿ: ತಮ್ಮ ಮಕ್ಕಳ ಹುಟ್ಟುಹಬ್ಬವನ್ನು ಭರ್ಜರಿಯಾಗಿ ಹೋಟೆಲ್ನಲ್ಲಿ ಅಥವಾ ಮನೆಯಲ್ಲಿ ಆಚರಿಸುವುದು ಸಾಮಾನ್ಯ ಸಂಗತಿ. ಆದರೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದ ಮಹೇಶ ಶಿಂಗೆ ಅವರು ತಮ್ಮ ಮಗಳ ಹುಟ್ಟುಹಬ್ಬವನ್ನು ಸ್ಮಶಾನದಲ್ಲಿ ಆಚರಿಸುವ ಮೂಲಕ ಮೌಢ್ಯಕ್ಕೆ ಸೆಡ್ಡು ಹೊಡೆದಿದ್ದಾರೆ.
ಯಮಕನಮರಡಿ ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ಸ್ಥಾಪಿಸಿರುವ ಮಾನವ ಬಂಧುತ್ವ ವೇದಿಕೆಯ ಕಾರ್ಯಕರ್ತನಾಗಿರುವ ಮಹೇಶ ಶಿಂಗೆ, ತಮ್ಮ ಮಗಳ ಹುಟ್ಟುಹಬ್ಬವನ್ನು ಸ್ಮಶಾನಲ್ಲಿ ಆಚರಿಸಿ ಮಾಢ್ಯಕ್ಕೆ ಸೆಡ್ಡು ಹೊಡಿದಿದ್ದಾರೆ. ಮಹೇಶ ಶಿಂಗೆ ತಮ್ಮ ಮಗಳಾದ ಜೀಜಾಬಾಯಿ ಹುಟ್ಟುಹಬ್ಬವನ್ನು ಸ್ಮಶಾನದಲ್ಲಿ ಆಚರಿಸಿದ್ದು, ಸ್ಮಶಾನದಲ್ಲಿ ಹುಟ್ಟುಹಬ್ಬದ ಸಂಭ್ರಮದಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ.
ಸ್ಮಶಾನದಲ್ಲಿ ಹಾಡು, ಮಾತು, ಚರ್ಚೆಯೊಂದಿಗೆ ಉಪಾಹಾರ ಸೇವಿಸಿ ಸಂಭ್ರಮಿಸಿದ್ದಾರೆ. ಇದೇ ಸಂದರ್ಭದಲ್ಲಿ ಮಾನವ ಬಂದುತ್ವ ವೇದಿಕೆ ರಾಜ್ಯ ಸಂಚಾಲಕ ರವೀಂದ್ರ ನಾಯ್ಕರ, ತಾ.ಪಂ ಸದಸ್ಯ ಹೂವಣ್ಣಾ ಚೌಗಲೆ, ಮುನ್ನಾ ಬಾಗವಾನ್, ಜೀವನ ಮಾಂಜರೇಕರ್, ಗಾಯತ್ರಿ ಮಾಳಗಿ ಆನಂದ ಗೋಕಾಕ್, ಪುಂಡಲೀಕ ದನವಾಡೆ ಸೇರಿದಂತೆ ನೂರಾರು ಮಾನವ ಬಂಧುತ್ವ ವೇದಿಕೆ ಕಾರ್ಯಕರ್ತರು ಮತ್ತು ದಲಿತ ಮುಖಂಡರು ಇದ್ದರು.