ಚಿಕ್ಕೋಡಿ: ಕೊರೊನಾ ವೈರಸ್ ಹರಡುವ ಭೀತಿ ಹಿನ್ನೆಲೆಯಲ್ಲಿ ಮದುವೆ ಸಮಾರಂಭದಲ್ಲಿ ಕೊರೊನಾ ಜಾಗೃತಿ ಕಾರ್ಯಕ್ರಮವನ್ನು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಆಯೋಜಿಸಲಾಗಿತ್ತು.
ಯಕ್ಸಂಬಾ ಪಟ್ಟಣದಲ್ಲಿ ಚವ್ಹಾಣ, ಕಮತೆ ಕುಟುಂಬದ ಮದುವೆ ಸಮಾರಂಭದಲ್ಲಿ ಕೊರೊನಾ ರೋಗದ ಕುರಿತು ಮದುವೆಗೆ ಬಂದಿದ್ದ ಜನರಿಗೆ ವಿಶೇಷ ಜಾಗೃತಿ ನೀಡಲಾಯಿತು. ಶೇಖರ-ಪ್ರೀತಿ, ಮಲ್ಲಪ್ಪ-ದೀಪಾಲಿ ಜೋಡಿಗಳ ಮದುವೆ ಸಮಾರಂಭದಲ್ಲಿ ಆರೋಗ್ಯ ಇಲಾಖೆಯಿಂದ ಜಾಗೃತಿ ಮೂಡಿಸಲಾಯಿತು.
ಮುಖಕ್ಕೆ ಮಾಸ್ಕ್ ಹಾಕಿಕೊಂಡು ಸಮಾರಂಭದಲ್ಲಿ ವಧು-ವರರು ಭಾಗಿಯಾಗಿದ್ದು ವಿಶೇಷವಾಗಿತ್ತು. ಮಾಸ್ಕ್ ಧರಿಸುವುದರಿಂದ ಕೊರೊನಾ ರೋಗ ಹರಡುವುದಿಲ್ಲ ಹಾಗೂ ಕೈಗಳನ್ನು ಸ್ವಚ್ಛವಾಗಿ ತೊಳೆದುಕೊಳ್ಳಬೇಕು. ಮುಖವನ್ನು ಕೈಗಳಿಂದ ಜಾಸ್ತಿ ಮುಟ್ಟಿಕೊಳ್ಳಬಾರದು ಎನ್ನುವ ಸಂದೇಶವನ್ನು ಜನರಿಗೆ ಮದುವೆ ಸಮಾರಂಭದಲ್ಲಿ ಆರೋಗ್ಯ ಇಲಾಖೆಯಿಂದ ನೀಡಲಾಯಿತು.