ಮಂಡ್ಯ: ನಗರದ ಸ್ವರ್ಣಸಂದ್ರ ಬಳಿ ಟ್ರಾಫಿಕ್ ಪೊಲೀಸರ (Mandya Traffic Police) ಯಡವಟ್ಟಿನಿಂದ ಮೂರುವರೆ ವರ್ಷದ ಮಗು ಪ್ರಾಣಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಎಎಸ್ಐಗಳ (ASI) ತಲೆದಂಡವಾಗಿದೆ.
ಘಟನಾ ಸ್ಥಳದಲ್ಲಿ ಹೆಲ್ಮೆಟ್ ತಪಾಸಣೆ ಮಾಡುತ್ತಿದ್ದ ಎಎಸ್ಐಗಳಾದ ನಾಗರಾಜು, ಜಯರಾಂ, ಗುರುದೇವ್ ಅವರನ್ನು ಅಮಾನತುಗೊಳಿಸಿರುವುದಾಗಿ ಮಂಡ್ಯ ಎಸ್ಪಿ (Mandya SP) ಮಲ್ಲಿಕಾರ್ಜುನ ಬಾಲದಂಡಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮಂಡ್ಯ | ಬೈಕ್ ಅಡ್ಡಗಟ್ಟಿದ ಪೊಲೀಸ್ರು – ಆಯತಪ್ಪಿ ಬಿದ್ದು ತಾಯಿ ಮಡಿಲಲ್ಲೇ ಪ್ರಾಣಬಿಟ್ಟ ಮಗು
ಈ ಕುರಿತು ಮಾತನಾಡಿರುವ ಮಂಡ್ಯ ಎಸ್ಪಿ, ಸುರಕ್ಷಿತ ನಿಯಮ ಪಾಲಿಸದೇ ಪೊಲೀಸರು ತಪಾಸಣೆ ನಡೆಸಿದ್ದಾರೆ. ಈ ವೇಳೆ ಮಗು ಬರುತ್ತಿದ್ದ ವಾಹನವನ್ನ ಪೊಲೀಸರು ತಡೆದಿದ್ದಾರೆ. ಈ ವೇಳೆ ಹಿಂಭಾಗದಿಂದ ಬಂದ ವಾಹನ ಡಿಕ್ಕಿಯಾಗಿದೆ. ಈ ವೇಳೆ ಮಗು ಕೆಳಗೆ ಬಿದ್ದಿದೆ, ಆ ಸಂಧರ್ಭದಲ್ಲಿ ಹಿಂದೆ ಬರುತ್ತಿದ್ದ ವಾಹನ ಮಗುಮೇಲೆ ಹತ್ತಿದೆ. ಈ ಕಾರಣದಿಂದ ಮಗು ಸಾವನಪ್ಪಿದೆ. ಇದನ್ನೂ ಓದಿ: ಮೈಸೂರು ರಾಜಮನೆತನಕ್ಕೆ ಟಿಡಿಆರ್ ನೀಡಲು ಸುಪ್ರೀಂ ಆದೇಶ – ಮರುಪರಿಶೀಲಿಸುವಂತೆ ರಾಜ್ಯ ಸರ್ಕಾರದಿಂದ ಅರ್ಜಿ
ಸಿಸಿಟಿವಿ ಪರಿಶೀಲನೆ ನಂತರ ಘಟನೆಗೆ ನಿಖರ ಕಾರಣ ತಿಳಿಯಲಿದೆ. ಮಗುವಿನ ಮೇಲೆ ವಾಹನ ಹತ್ತಿದೆಯಾ ಅಥವಾ ಪೊಲೀಸರು ತಡೆದು ಬೀಳಿಸಿದ್ದಾರಾ ಎಲ್ಲೌೂ ಗೊತ್ತಾಗಬೇಕಿದೆ. ಇದು ಹಳೆಯ ರಾಷ್ಟ್ರೀಯ ಹೆದ್ದಾರಿಯಾಗಿದೆ. ಹೆದ್ದಾರಿ ನಗರದ ಒಳಗೆ ಹೋಗುವ ಕಾರಣದಿಂದ ಇಲ್ಲಿ ತಪಾಸಣೆ ಮಾಡಲಾಗಿದೆ. ತಪಾಸಣೆ ವೇಳೆ ಸುರಕ್ಷಿತ ಕ್ರಮ ಕೈಗೊಂಡಿಲ್ಲದ ಕಾರಣ ಮೂವರು ಎಎಸ್ಐಗಳನ್ನ ಅಮಾನತು ಮಾಡಿದ್ದೇವೆ ಎಂದು ತಿಳಿಸಿದ್ದಾರೆ.
ಘಟನೆ ಬಳಿಕ ಮಂಡ್ಯ ಮಿಮ್ಸ್ ಶವಗಾರಕ್ಕೆ ಡಿಸಿ ಡಾ.ಕುಮಾರ್, ಜಿಪಂ ಸಿಇಓ ಕೆ.ಆರ್.ನಂದಿನಿ ಭೇಟಿ ನೀಡಿದ್ದು ಮೃತ ಬಾಲಕಿ ಅಂತಿಮ ದರ್ಶನ ಪಡೆದು, ಮೃತ ಬಾಲಕಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.