ಬೆಂಗಳೂರು: ಮಹದೇವಪುರದಲ್ಲಿ (Mahadevapura) ರಸ್ತೆ ಗುಂಡಿಯಿಂದ ಮಗು ಬಲಿಯಾಗಿದ್ದಕ್ಕೆ ರಸ್ತೆ (Road) ಸರಿಯಿಲ್ಲ ಅಂತಾ ಪ್ರತಿಭಟಿಸಿದವರ ವಿರುದ್ಧ ಕೇಸ್ ದಾಖಲಾಗಿದೆ.
ಮಹದೇವಪುರದಲ್ಲಿ ಅವೈಜ್ಞಾನಿಕ ಕಾಮಗಾರಿಗೆ ಎರಡು ವರ್ಷದ ತ್ರಿಶೂಲ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 16ರಂದು ಹಳೇಹಳ್ಳಿ ರಸ್ತೆ ತಡೆದು ನೂರಾರು ಜನ ಪ್ರತಿಭಟನೆ ನಡೆಸಿದ್ದರು. ಆದರೀಗ ರಸ್ತೆ ತಡೆದು ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದಡಿ ಮಗುವಿನ ಸಂಬಂಧಿಕರು ಸೇರಿ 10ಕ್ಕೂ ಹೆಚ್ಚು ಜನರ ಮೇಲೆ ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಿಸಲಾಗಿದೆ. ಇದನ್ನೂ ಓದಿ: ವ್ಯಾನ್ಗೆ ಬಸ್ ಡಿಕ್ಕಿ – ಐವರು ಸಾವು, 6 ಮಂದಿಗೆ ಗಾಯ
ರಾಜ್ಯ ಸರ್ಕಾರದ ಈ ಧೋರಣೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, ಕಂದನ ಕಳೆದುಕೊಂಡ ಸಂಬಂಧಿಕರು ರಸ್ತೆ ಸರಿ ಮಾಡುವಂತೆ ಕೇಳಿಕೊಂಡಿದ್ದು ತಪ್ಪಾ, ನ್ಯಾಯ ಕೊಡಿ ಅಂತ ಕೇಳಿದ್ದೇ ತಪ್ಪಾ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮಗಳನ್ನ ಪ್ರೀತಿಸಿದ್ದ ಯುವಕನ ಮೇಲೆ ಕೇಸ್ ಕೊಟ್ಟ ತಾಯಿ – ಜೈಲಿಂದ ಹೊರಬಂದಿದ್ದ ಯುವಕನಿಂದ ಕೊಲೆ

