ಮಂಗಳೂರು: ಸಿಲಿಕಾನ್ ಸಿಟಿಯ 7 ಮಂದಿ ನಾಪತ್ತೆ ಪ್ರಕರಣ ಸಂಬಂದ ಈಗಾಗಲೇ ಮೂವರು ನಿನ್ನೆಯೇ ಬೆಂಗಳೂರಿನಲ್ಲಿ ಪತ್ತೆಯಾಗಿದ್ದು, ಇದೀಗ ಇಂದು ಉಳಿದ ನಾಲ್ವರು ಮಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. ಈ ಮೂಲಕ ಮಕ್ಕಳ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದೆ.
21 ವರ್ಷದ ಯುವತಿ ಸೇರಿದಂತೆ ನಾಲ್ವರು ಇಂದು ಮಂಗಳೂರಿನ ಅತ್ತಾವರದಲ್ಲಿ ಪತ್ತೆಯಾಗಿದ್ದಾರೆ. ಸದ್ಯ ಎಲ್ಲರೂ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿದ್ದಾರೆ. ಚಿಂತನ್, ಭೂಮಿ, ಅಮೃತವರ್ಷಿಣಿ ಹಾಗೂ ರಾಯನ್ ಇಂದು ಪತ್ತೆಯಾಗಿರುವ ಮಕ್ಕಳು. ಇವರು ಬೆಂಗಳೂರಿನ ಸೋಲದೇವನಹಳ್ಳಿಯಲ್ಲಿ ಒಂದೇ ಅಪಾರ್ಟ್ ಮೆಂಟ್ ನಿವಾಸಿಗಳು. ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದರು. ಇದನ್ನೂ ಓದಿ: ಚಿಂದಿ ಆಯುವ ವ್ಯಕ್ತಿ ಮಾಹಿತಿ – ಬಾಗಲಗುಂಟೆಯಿಂದ ನಾಪತ್ತೆಯಾಗಿದ್ದ ಮೂವರು ಮಕ್ಕಳು ಪತ್ತೆ
ಈ ನಾಲ್ವರು ರೈಲಿನ ಮೂಲಕ ಮಂಗಳೂರಿಗೆ ತಲುಪಿದ್ದಾರೆ. ರೈಲು ನಿಲ್ದಾಣ ಸುತ್ತಮುತ್ತ ತಿರುಗಾಟುತ್ತಿದ್ದ ವರನ್ನು ನೋಡಿ ಅನುಮಾಗೊಂಡ ಆಟೋ ಚಾಲಕ, ವಿಶ್ವಾಸಕ್ಕೆ ತಗೆದುಕೊಂಡಿದ್ದಾರೆ. ನಂತರ ಆಟೋದಲ್ಲಿ ಪಾಂಡೇಶ್ವರ ಪೊಲೀಸ್ ಠಾಣೆಗೆ ತಲುಪಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಸದ್ಯ ಯುವತಿ ಹಾಗೂ ಮಕ್ಕಳು ಎಲ್ಲರೂ ಸುರಕ್ಷಿತವಾಗಿದ್ದು, ಡಿಸಿಪಿ ಹರಿರಾಮ ಶಂಕರ್ ನೇತೃತ್ವದಲ್ಲಿ ವಿಚಾರಣೆ ನಡೆಯುತ್ತಿದೆ.