Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಇನ್ಮುಂದೆ ಬಡ ಮಕ್ಕಳಿಗೆ ಖಾಸಗಿ ಶಾಲೆಯಲ್ಲಿ ಉಚಿತ ಸೀಟು ಸಿಗಲ್ಲ!

Public TV
Last updated: December 6, 2018 11:00 am
Public TV
Share
3 Min Read
SCHOOL
SHARE

– ಸರ್ಕಾರಿ ಶಾಲೆ ಇಲ್ಲದೇ ಇದ್ದರೆ ಮಾತ್ರ ಉಚಿತ ಸೀಟ್
– ಆರ್ ಟಿಇ ಕಾಯ್ದೆ ತಿದ್ದುಪಡಿಗೆ ಕ್ಯಾಬಿನೆಟ್ ಒಪ್ಪಿಗೆ
– ಸರ್ಕಾರಿ ಶಾಲೆಗಳಿಗೆ ದಾಖಲಾತಿ ಹೆಚ್ಚಿಸಲು ನಿರ್ಧಾರ

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಕಡ್ಡಾಯ ಶಿಕ್ಷಣ ಹಕ್ಕು(ಆರ್ ಟಿಇ) ಕಾಯ್ದೆಯನ್ನು ತಿದ್ದುಪಡಿ ಮಾಡಿ ಮೂಲ ಕಾಯ್ದೆಯನ್ನು ಅನುಷ್ಠಾನಕ್ಕೆ ತರಲು ಮುಂದಾಗಿದೆ.

ಖಾಸಗಿ ಶಾಲೆಗೆ ಬದಲಾಗಿ ಸರ್ಕಾರಿ ಶಾಲೆಗಳಲ್ಲಿ 25% ಸೀಟು ಅನುಷ್ಠಾನಕ್ಕೆ ಒಪ್ಪಿಗೆ ನೀಡುವ ಮೂಲಕ ಹೊಸ ತಿದ್ದುಪಡಿಗೆ ಬುಧವಾರ ನಡೆದ ಕ್ಯಾಬಿನೆಟ್ ನಲ್ಲಿ ಸಮ್ಮತಿ ಸೂಚಿಸಿದೆ. ಈ ಮೂಲಕ ಸರ್ಕಾರಿ ಶಾಲೆಯನ್ನು ಉಳಿಸಲು ಸರ್ಕಾರ ಮುಂದಾಗಿದೆ.

ತಿದ್ದುಪಡಿ ಮಸೂದೆ ಕಾಯ್ದೆಯಾಗಿ ಜಾರಿಯಾದರೆ ಬಡ ವಿದ್ಯಾರ್ಥಿಗಳಿಗೆ ಖಾಸಗಿ ಶಾಲೆಯಲ್ಲಿ ಆರ್ ಟಿಇ ಸೀಟು ಉಚಿತವಾಗಿ ಸಿಗುವುದಿಲ್ಲ. ಒಂದು ವೇಳೆ ಸುತ್ತಮುತ್ತ ಸರ್ಕಾರಿ ಶಾಲೆ ಇಲ್ಲವಾದರೆ ಮಾತ್ರ ಅವಕಾಶ ನೀಡಲಾಗುತ್ತದೆ. ಬಡ ವಿದ್ಯಾರ್ಥಿಗಳ ಪ್ರದೇಶದ ಸುತ್ತಮುತ್ತ ಸರ್ಕಾರಿ ಶಾಲೆ ಇದ್ದರೆ ಅಂತಹ ವಿದ್ಯಾರ್ಥಿಗಳಿಗೆ ಖಾಸಗಿ ಶಾಲೆಯಲ್ಲಿ ಉಚಿತ ಸೀಟು ಸಿಗುವುದಿಲ್ಲ.

HDK PRESSMEET 2

ಈಗ ಇರುವ ಪದ್ದತಿ ಏನಿದೆ?
ಖಾಸಗಿ ಶಾಲೆಗಳಲ್ಲಿ ಶೇ.25 ಸೀಟು ಮಕ್ಕಳಿಗೆ ನಿಗದಿ ಮಾಡಲಾಗಿತ್ತು. ವಾರ್ಡ್, ಗ್ರಾಮ, ನಗರ ವ್ಯಾಪ್ತಿಯ ಒಂದು ಕಿಲೋಮೀಟರ್ ವ್ಯಾಪ್ತಿಯ ಖಾಸಗಿ ಶಾಲೆಯಲ್ಲಿ ಬಡ ಮಕ್ಕಳಿಗೆ ಕಡ್ಡಾಯವಾಗಿ ಶೇ.25 ಸೀಟು ನೀಡಬೇಕಿತ್ತು. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸರ್ಕಾರವೇ ಖಾಸಗಿ ಶಾಲೆಗಳಿಗೆ ಹಣ ನೀಡುತ್ತಿತ್ತು. ಹೀಗಾಗಿ ಪೋಷಕರು ಸರ್ಕಾರಿ ಶಾಲೆಗಳಿಗಿಂತ ಖಾಸಗಿ ಶಾಲೆಗೆ ಮಕ್ಕಳನ್ನ ಸೇರಿಸುತ್ತಿದ್ದರು.

ಹೊಸ ತಿದ್ದುಪಡಿಯಲ್ಲಿ ಏನಿದೆ?
ಕಡ್ಡಾಯವಾಗಿ ಮಗುವಿಗೆ 6-14 ವರ್ಷ ಶಿಕ್ಷಣ ನೀಡಬೇಕು. ಮಗು ವಾಸಿಸುವ 1 ಕಿಲೋಮೀಟರ್ ವ್ಯಾಪ್ತಿಯ ಸರ್ಕಾರಿ ಶಾಲೆಯಲ್ಲಿ ಮೊದಲ ಆದ್ಯತೆ ಮೇಲೆ ದಾಖಲಾಗಿ ಶಿಕ್ಷಣ ಪಡೆಯಬೇಕು. ಸರ್ಕಾರಿ ಶಾಲೆ ಇಲ್ಲದೆ ಇದ್ದರೆ 3-5 ಕಿಲೋಮೀಟರ್ ವ್ಯಾಪ್ತಿಯ ಅನುದಾನಿತ ಶಾಲೆಯಲ್ಲಿ ಮಗುವಿಗೆ ಶಿಕ್ಷಣ ಕೊಡಿಸಬೇಕು. ಒಂದು ವೇಳೆ ಅನುದಾನಿತ ಶಾಲೆಯೂ ಇಲ್ಲದೆ ಹೋದರೆ ಖಾಸಗಿ ಶಾಲೆಯಲ್ಲಿ ಶೇ.25 ಸೀಟು ಕೊಡಿಸಿ ಮಗುವಿಗೆ ಶಿಕ್ಷಣ ಕೊಡಿಸಬೇಕು. ಖಾಸಗಿ ಶಾಲೆಯ ಶಿಕ್ಷಣಕ್ಕೆ ಸರ್ಕಾರವೇ ಹಣ ನೀಡುತ್ತದೆ.

CHILDREN

ತಿದ್ದುಪಡಿ ಯಾಕೆ?
ಆರ್ ಟಿಇ ಕಾಯ್ದೆ ತಿದ್ದುಪಡಿಯಿಂದ ಸರ್ಕಾರಕ್ಕೆ ಕೋಟಿ ಕೋಟಿ ಹಣ ಉಳಿಯುತ್ತದೆ. ಜೊತೆಗೆ ಸರ್ಕಾರಿ ಶಾಲೆಗಳಿಗೆ ದಾಖಲಾತಿ ಹೆಚ್ಚಿಸಲು ಈ ನಿರ್ಧಾರಕ್ಕೆ ಬರಲಾಗಿದೆ.

ಕಾಯ್ದೆಯ ಮೂಲ ಉದ್ದೇಶ ಏನು?
ಮಕ್ಕಳಿಗೆ ಶಿಕ್ಷಣ ವಂಚನೆ ಆಗಬಾರದು ಅಂತ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ಹೇಳುತ್ತದೆ. ಕಾಯ್ದೆಯಲ್ಲಿ ಮೊದಲು ಸರ್ಕಾರಿ ಶಾಲೆ ಮಗುವಿಗೆ ಶಿಕ್ಷಣ ಕಡ್ಡಾಯವಾಗಿ ಕೊಡಿಸಬೇಕು. ಸರ್ಕಾರಿ ಶಾಲೆ ಇಲ್ಲದೆ ಇದ್ದರೆ ಅನುದಾನಿತ, ಶಾಲೆಯಲ್ಲಿ ಶಿಕ್ಷಣ ಕೊಡಿಸಬೇಕು. ಒಂದು ವೇಳೆ ಅನುದಾನಿತ ಶಾಲೆ ಇಲ್ಲದೆ ಇದ್ದರೆ ಖಾಸಗಿ ಶಾಲೆಯಲ್ಲಿ ಮಗುವಿಗೆ ಕಡ್ಡಾಯವಾಗಿ ಸೀಟು ಕೊಡಬೇಕಿತ್ತು. ಆದರೆ ಕರ್ನಾಟಕ ಮೊದಲೇ ಖಾಸಗಿ ಶಾಲೆಗಳ ಸೀಟಿಗೆ ಅವಕಾಶ ಕಲ್ಪಿಸಿತ್ತು. ಈ ನಿಯಮದಿಂದ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಕಡಿಮೆ ಆಗುತ್ತಿತ್ತು. ಈ ಹಿನ್ನೆಲೆಯಲ್ಲಿ ಕಾಯ್ದೆಯ ಮೂಲ ಅಂಶ ತಿದ್ದುಪಡಿ ಮಾಡಲು ಸರ್ಕಾರದ ನಿರ್ಧಾರ ಮಾಡಿದೆ ಎಂದು ಪಕ್ಷದ ಮೂಲಗಳಿಂದ ತಿಳಿದು ಬಂದಿದೆ.

MND JDS CONGRESS

ಬಿಜೆಪಿ ಸ್ವಾಗತ:
ಸ್ಥಳೀಯ ಪ್ರದೇಶದ ನಿಗದಿತ ಪರಿಧಿಯಲ್ಲಿ ಸರ್ಕಾರಿ ಶಾಲೆಗಳು ಇಲ್ಲದಿದ್ದಲ್ಲಿ ಮಾತ್ರ ಖಾಸಗಿ ಶಾಲೆಗಳಿಗೆ ಆರ್ ಟಿಇ ಅಡಿ ಪ್ರವೇಶ ಕಲ್ಪಿಸುವ ಸರ್ಕಾರದ ನಿರ್ಧಾರ ಅತ್ಯಂತ ಸ್ವಾಗತಾರ್ಹ. ಇದರಿಂದ ಸರಕಾರಿ ಶಾಲೆಗಳು ಕ್ಷೀಣಿಸುವುದು ನಿಲ್ಲುತ್ತದೆ. ಖಾಸಗಿ ಶಾಲೆಗಳಿಗೆ ಸರಕಾರ ಭರಿಸುತ್ತಿದ್ದ ವಿಪರೀತ ಶುಲ್ಕವೂ ಉಳಿಯುತ್ತದೆ ಎಂದು ಬೆಂಗಳೂರಿನ ರಾಜಾಜಿನಗರದ ಬಿಜೆಪಿ ಶಾಸಕ ಸುರೇಶ್ ಕುಮಾರ್ ಟ್ವೀಟ್ ಮಾಡಿ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ.

ಸ್ಥಳೀಯ ಪ್ರದೇಶದ ನಿಗದಿತ ಪರಿಧಿಯಲ್ಲಿ ಸರ್ಕಾರಿ ಶಾಲೆಗಳು ಇಲ್ಲದಿದ್ದಲ್ಲಿ ಮಾತ್ರ ಖಾಸಗಿ ಶಾಲೆಗಳಿಗೆ RTE ಅಡಿ ಪ್ರವೇಶ ಕಲ್ಪಿಸುವ ಸರ್ಕಾರದ ನಿರ್ಧಾರ ಅತ್ಯಂತ ಸ್ವಾಗತಾರ್ಹ.

ಇದರಿಂದ ಸರಕಾರಿ ಶಾಲೆಗಳು ಕ್ಷೀಣಿಸುವುದು ನಿಲ್ಲುತ್ತದೆ.‌
ಖಾಸಗಿ ಶಾಲೆಗಳಿಗೆ ಸರಕಾರ ಭರಿಸುತ್ತಿದ್ದ ವಿಪರೀತ ಶುಲ್ಕವೂ ಉಳಿಯುತ್ತದೆ.‌

— S.Suresh Kumar (@nimmasuresh) December 6, 2018

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:bengaluruchildrenCoalition Governmentfree seatgovernmentprivate schoolPublic TVಉಚಿತ ಸೀಟುಖಾಸಗಿ ಶಾಲೆಪಬ್ಲಿಕ್ ಟಿವಿಬೆಂಗಳೂರುಮಕ್ಕಳುಸಮ್ಮಿಶ್ರ ಸರ್ಕಾರಸರ್ಕಾರ
Share This Article
Facebook Whatsapp Whatsapp Telegram

You Might Also Like

BBMP staff caste census stickers without conducting a survey in bengaluru
Bengaluru City

ಸಮೀಕ್ಷೆಯನ್ನೇ ಮಾಡದೇ ಜಾತಿಗಣತಿ ಪೂರ್ಣ ಸ್ಟಿಕ್ಕರ್‌ ಅಂಟಿಸಿದ ಬಿಬಿಎಂಪಿ ಸಿಬ್ಬಂದಿ – ಪ್ರಶ್ನಿಸಿದ ಮನೆ ಮಾಲೀಕನ ಮೇಲೆ ಹಲ್ಲೆ

Public TV
By Public TV
15 minutes ago
Uttar Pradesh Hapur Police
Crime

UP | ರಾಂಗ್ ರೂಟ್‌ಲ್ಲಿ ಬಂದು ಬೈಕ್‌ಗೆ ಡಿಕ್ಕಿ ಹೊಡೆದ ಟ್ರಕ್ – ತಂದೆ, 4 ಮಕ್ಕಳು ಸೇರಿ ಐವರು ದುರ್ಮರಣ

Public TV
By Public TV
1 hour ago
Transport Employees
Bengaluru City

ಈಡೇರದ ಸರ್ಕಾರದ ಭರವಸೆ | ಮತ್ತೆ ಸಾರಿಗೆ ನೌಕರರಿಂದ ಮುಷ್ಕರಕ್ಕೆ ಪ್ಲ್ಯಾನ್‌ – ಇಂದು ಮಹತ್ವದ ಸಭೆ

Public TV
By Public TV
2 hours ago
PM Modi in Ghana
Latest

ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

Public TV
By Public TV
2 hours ago
Arun Badiger
Bengaluru City

ʻಪಬ್ಲಿಕ್‌ ಟಿವಿʼಯ ಅರುಣ್‌ ಬಡಿಗೇರ್‌ಗೆ ಕೊಪ್ಪಳ ಮೀಡಿಯಾ ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರದಾನ

Public TV
By Public TV
2 hours ago
Tirupati temple
Latest

ತಿರುಪತಿ ತಿಮ್ಮಪ್ಪ ಕೋಟಿ ಕೋಟಿ ಒಡೆಯ – ಒಂದೇ ದಿನಕ್ಕೆ 5.3 ಕೋಟಿ ದಾಖಲೆ ಕಾಣಿಕೆ ಸಂಗ್ರಹ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?