ವಿಷಪೂರಿತ ಬೀಜ ಸೇವಿಸಿ 20 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Public TV
1 Min Read
Gadag Children Poison Seeds Main 1

ಗದಗ: ಕಡಲೆ ಬೀಜ ಎಂದು ಭಾವಿಸಿ ವಿಷಪೂರಿತ ಅರಳೆಣ್ಣೆ (ಔಡಲ) ಬೀಜ ಸೇವಿಸಿ 20ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಘಟನೆ ಗದಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಂಭಾಗದ ಜಮೀನಿನಲ್ಲಿ ರೈತರೊಬ್ಬರು ಅರಳೆಣ್ಣೆ ಬೀಜ ಒಣಗಿಸಲು ಹಾಕಿದ್ದರು. ಮಂಗಳವಾರ ಸಂಜೆ ಶಾಲೆ ಬಿಟ್ಟ ನಂತರ ಮನೆಗೆ ಹೊರಡುವ ಸಂದರ್ಭದಲ್ಲಿ ಅರಳೆಣ್ಣೆ ಬೀಜ ನೋಡಿದ ಮಕ್ಕಳು ಕಡಲೆ ಬೀಜವೆಂದು ಭಾವಿಸಿ ಸೇವಿಸಿದ್ದಾರೆ. ನಂತರ ಮಕ್ಕಳಿಗೆ ವಾಂತಿ, ಭೇದಿ, ತಲೆ ಸುತ್ತುವಿಕೆ ಪ್ರಾರಂಭವಾಗಿ ಅಸ್ವಸ್ಥಗೊಂಡಿದ್ದಾರೆ.

Gadag Children Poison Seeds

ವಿಷಯ ತಿಳಿದ ತಕ್ಷಣ ಪಾಲಕರು ಆತಂಕಕ್ಕೆ ಒಳಗಾಗಿ ಅಸ್ವಸ್ಥಗೊಂಡ ಮಕ್ಕಳನ್ನು ಹತ್ತಿರದ ಮುಳಗುಂದ ಖಾಸಗಿ ಆಸ್ಪತ್ರೆ ಹಾಗೂ ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ತೀವ್ರ ಅಸ್ವಸ್ಥಗೊಂಡ 19 ಮಕ್ಕಳು ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಇನ್ನುಳಿದ ಐದು ಮಕ್ಕಳು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *