ನವದೆಹಲಿ: ಕೊರೋನಾ ಇನ್ನೂ ಮುಗಿದಿಲ್ಲ, ಇದರಿಂದಾಗಿ ಜನನಿಬಿಡ ಪ್ರದೇಶಗಳಲ್ಲಿ ಮಾಸ್ಕ್ (Mask) ಧರಿಸುವಂತೆ ಕೇಂದ್ರವು ಇಂದು ಸಲಹೆ ನೀಡಿದೆ.
ವಿಶ್ವಕ್ಕೆ ಕೊರೊನಾ ಹಬ್ಬಿಸಿದ ಚೀನಾದಲ್ಲಿ (China) ಈಗ ಮತ್ತೆ ಕೊರೊನಾ ರಣತಾಂಡವ ಆಡುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ದೇಶದ ಕೋವಿಡ್ ಪರಿಸ್ಥಿತಿಯ ಕುರಿತು ಉನ್ನತ ಅಧಿಕಾರಿಗಳು ಮತ್ತು ತಜ್ಞರೊಂದಿಗೆ ಸಭೆ ನಡೆಸಿದರು. ಸಭೆಯ ಬಳಿಕ ಕೇಂದ್ರ ಆರೋಗ್ಯ ಸಚಿವ ಟ್ವೀಟ್ ಮಾಡಿದ್ದಾರೆ.
ಟ್ವೀಟ್ನಲ್ಲಿ ಏನಿದೆ?: ಕೊರೋನಾ (Corona) ಇನ್ನೂ ಮುಗಿದಿಲ್ಲ. ಆಯಾ ರಾಜ್ಯಗಳು ಹಾಗೂ ಸಂಬಂಧ ಪಟ್ಟ ಅಧಿಕಾರಿಗಳು ಎಲ್ಲರಿಗೂ ಎಚ್ಚರಿಕೆಯನ್ನು ನೀಡುವಂತೆ ಸೂಚಿಸುತ್ತೇನೆ. ಕೊರೊನಾ ಪರಿಸ್ಥಿತಿಯನ್ನು ನಿಭಾಯಿಸಲು ಸಜ್ಜಾಗಿರಬೇಕು ಎಂದು ಟ್ವೀಟ್ನಲ್ಲಿ ತಿಳಿಸಿದ್ದಾರೆ.
In view of the rising cases of #Covid19 in some countries, reviewed the situation with experts and officials today.
COVID is not over yet. I have directed all concerned to be alert and strengthen surveillance.
We are prepared to manage any situation. pic.twitter.com/DNEj2PmE2W
— Dr Mansukh Mandaviya (@mansukhmandviya) December 21, 2022
ಕೋವಿಡ್ ಕುರಿತ ರಾಷ್ಟ್ರೀಯ ಕಾರ್ಯಪಡೆಯ ಮುಖ್ಯಸ್ಥರಾಗಿರುವ ಎನ್ಐಟಿಐ ಆಯೋಗದ ಸದಸ್ಯ ವಿಕೆ ಪಾಲ್ ಮಾತನಾಡಿ, ಯಾರೂ ಭಯಪಡುವ ಅಗತ್ಯವಿಲ್ಲ. ಸಾಕಷ್ಟು ಟೆಸ್ಟ್ಗಳನ್ನು ನಡೆಸಲಾಗುತ್ತಿದೆ. ಜನಸಂದಣಿ ಇರುವ ಪ್ರದೇಶಗಳಲ್ಲಿ ಎಲ್ಲರೂ ಮಾಸ್ಕ್ ಧರಿಸಬೇಕು ಎಂದ ಅವರು, ಅಂತಾರಾಷ್ಟ್ರೀಯ ವಿಮಾನ ಪ್ರಯಾಣದ ಮಾರ್ಗಸೂಚಿಗಳಲ್ಲಿ ಇನ್ನೂ ಯಾವುದೇ ಬದಲಾವಣೆ ಇಲ್ಲ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಆಸ್ಪತ್ರೆಗಳು ಭರ್ತಿ, ಸ್ಮಶಾನದಲ್ಲಿ ಶವಗಳ ರಾಶಿ – ಚೀನಾದಲ್ಲಿ ಕೋವಿಡ್ ಸುನಾಮಿಗೆ ಕಾರಣ ಏನು?
ಇದಕ್ಕೂ ಮುನ್ನ, ಪರಿಶೀಲನಾ ಸಭೆಯಲ್ಲಿ ಪ್ರಾಥಮಿಕವಾಗಿ ಪ್ರಮುಖ ಅಂಶಗಳ ಮೇಲೆ ಚರ್ಚೆಗಳು ನಡೆದಿದೆ ಎಂದು ಮೂಲಗಳು ತಿಳಿಸಿವೆ. ವಿದೇಶದಿಂದ ಪ್ರಯಾಣಿಸುವ ಪ್ರಯಾಣಿಕರಿಗೆ ಮಾರ್ಗಸೂಚಿಗಳನ್ನು ಹಾಕುವುದು ಮತ್ತು ಕೋವಿಡ್ನ ಹೊಸ ರೂಪಾಂತರದ ಕುರಿತು ತಜ್ಞರೊಂದಿಗೆ ಸಮಾಲೋಚನೆಯನ್ನು ನಡೆಸುವುದು ಹಾಗೂ ಮುಂಬರುವ ಹೊಸ ವರ್ಷಾಚರಣೆಯಲ್ಲಿ ಕೊರೊನಾ ಹೆಚ್ಚಳವಾಗದಂತೆ ತಡೆಗಟ್ಟಲು ಮಾರ್ಗಸೂಚಿಗಳ ಬಗ್ಗೆಯೂ ಚರ್ಚಿಸಲಾಗುವುದು ಎಂದು ಸಭೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಆ್ಯಪ್ಗಳಲ್ಲಿ ಸಾಲ ಪಡೆವ ಮುನ್ನ ಹುಷಾರ್ – ಸಾಲ ತೀರಿಸಿದ್ರೂ ಕಿರುಕುಳ, ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ
ಕಳೆದ 24 ಗಂಟೆಗಳಲ್ಲಿ ದೇಶವು 129 ಹೊಸ ಕೊರೊನಾ ಸೋಂಕುಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 3,408 ಆಗಿದೆ. ಕಳೆದ 24 ಗಂಟೆಗಳಲ್ಲಿ ಒಂದು ಸಾವಿನ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಶಬರಿಮಲೆ ಹಾದಿಯಲ್ಲಿ ಈ ಬಾರಿ 23 ಮಂದಿ ಹೃದಯಾಘಾತದಿಂದ ಸಾವು